Homeಮುಖಪುಟಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

ಭೂಮಿ ತಾಯ ಗರ್ಭ ಸೇರಿದ ಕನ್ನಡಿಗರ ಕಣ್ಮಣಿ ‘ಅಪ್ಪು’

- Advertisement -
- Advertisement -

ಶುಕ್ರವಾರ ಹೃದಯಘಾತದಿಂದ ನಿಧನರಾದ ಮೇರು ನಟ, ಕನ್ನಡಿಗರ ಕಣ್ಮಣಿ ಪುನೀತ್‌ ರಾಜ್‌ಕುಮಾರ್‌ ಭೂಮಿ ತಾಯಿಯ ಗರ್ಭ ಸೇರಿದರು. ಕನ್ನಡಿಗರ ಹೃದಯವಾಸಿ ಭೂಮಿ ತಾಯಿಯನ್ನು ಅಪ್ಪಿದರು.

ಕಂಠೀರವ ಸ್ಟುಡಿಯೊದಲ್ಲಿ ಅವರ ಅಂತ್ಯಕ್ರಿಯೆ ನೆರವೇರುತ್ತಿದೆ. ಡಾ.ರಾಜ್‌ಕುಮಾರ್‌, ಪಾರ್ವತಮ್ಮ ರಾಜ್‌ಕುಮಾರ್‌ ಅವರ ಸಮಾಧಿ ಕಂಠೀರವ ಸ್ಟುಡಿಯೊದಲ್ಲೇ ಇದ್ದು, ತಂದೆ- ತಾಯಿಯೊಂದಿಗೆ ಪುನೀತ್‌ ರಾಜ್‌ಕುಮಾರ್‌ ಚಿರನಿದ್ರೆಗೆ ಜಾರಿದರು.

PC: Prajavani

ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇರಿಸಲಾಗಿತ್ತು. ಪ್ರೀತಿಯ ಅಪ್ಪುವನ್ನು ನೋಡಲು ರಾಜ್ಯ ಹಾಗೂ ದೇಶದ ಮೂಲೆಮೂಲೆಗಳಿಂದ ಜನಸಾಗರವೇ ಹರಿದುಬಂದಿತ್ತು.

ಭಾನುವಾರ ಮುಂಜಾನೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಕೈಗೊಳ್ಳಲಾಯಿತು. ಚಿತ್ರರಂಗದ ತಾರೆಯರು ಪುನೀತ್‌ ರಾಜ್‌ಕುಮಾರ್‌ ಅವರ ಅಂತಿಮ ದರ್ಶನ ಪಡೆದರು.

ಪುನೀತ್‌ ಅವರ ಇಬ್ಬರು ಪುತ್ರಿಯರು ತಮ್ಮ ತಾಯಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಅವರನ್ನು ಅಪ್ಪಿ ಶೋಕತಪ್ತರಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್‌ ಅವರ ಪಾರ್ಥೀವ ಶರೀರಕ್ಕೆ ಮುತ್ತಿಟ್ಟು ಭಾವುಕರಾದರು.

ಪೊಲೀಸ್‌ ಬ್ಯಾಂಡ್‌ ಮೂಲಕ ರಾಷ್ಟ್ರಗೀತೆ ಮೊಳಗಿಸಲಾಯಿತು. ಮೂರು ಸುತ್ತು ಗುಂಡು ಸಿಡಿಸಿ ಗೌರವ ಸಲ್ಲಿಸಲಾಯಿತು. ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.

ಈಡಿಗ ಸಮುದಾಯದ ಸಂಪ್ರದಾಯದಂತೆ ವಿಧಿವಿಧಾನಗಳನ್ನು ಕೈಗೊಳ್ಳಲಾಯಿದೆ. ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಪುತ್ರ ವಿನಯ್‌ ಅವರು ವಿಧಿವಿಧಾನವನ್ನು ಪೂರೈಸುತ್ತಿದ್ದಾರೆ.

ಪುನೀತ್‌ ಅವರ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್ ಅವರ ಪತ್ನಿ ಅಶ್ವಿನಿ, ಪುತ್ರಿ ದೃತಿ, ವಂದಿತಾ ಅವರಿಗೆ ಹಸ್ತಾಂತರಿಸಿದರು.

ಅಡ್ಡಪಲ್ಲಕ್ಕಿಯಲ್ಲಿ ತರಲಾಗಿದ್ದ ಪಾರ್ಥೀವ ಶರೀರವನ್ನು ಪ್ರದಕ್ಷಿಣೆ ಹಾಕಲಾಯಿತು. ಕಂಠೀರವ ಸ್ಟುಡಿಯೊದಲ್ಲಿ ಅತೀವ ದುಃಖ ಮಡುಗಟ್ಟಿತ್ತು. ಡಾ.ರಾಜ್‌ಕುಮಾರ್‌ ಕುಟುಂಬದ ಎಲ್ಲರೂ ಅಂತಿಮ ನಮನ ಸಲ್ಲಿಸಿದರು. ಪ್ರೀತಿಯ ಸಹೋದರನನ್ನು ನೋಡುತ್ತ ಡಾ.ಶಿವರಾಜ್‌ಕುಮಾರ್‌ ಬಿಕ್ಕಿ ಬಿಕ್ಕಿ ಅತ್ತರು.

ಶಿವರಾಜ್‌ಕುಮಾರ್, ಗೀತಾ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಅವರ ಪತ್ನಿ ಮಂಗಳಾ, ಮಗ ಯುವ ರಾಜ್‌ಕುಮಾರ್, ಶ್ರೀಮುರಳಿ, ವಿಜಯ ರಾಘವೇಂದ್ರ ಸೇರಿದಂತೆ ರಾಜ್ ಕುಟುಂಬದ ಸದಸ್ಯರು ಅಂತಿಮ ನಮನ ಸಲ್ಲಿಸಿದರು.

ನಟರಾದ ಉಪೇಂದ್ರ, ರವಿಚಂದ್ರನ್, ಯಶ್, ಜಗ್ಗೇಶ್, ಡಾಲಿ ಧನಂಜಯ, ದುನಿಯಾ ವಿಜಯ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್.ಅಶೋಕ, ಆರಗ ಜ್ಞಾನೇಂದ್ರ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು.


ಇದನ್ನೂ ಓದಿರಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...