Homeಮುಖಪುಟಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

ಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

- Advertisement -
- Advertisement -

ಅರುಣಾಚಲ ಪ್ರದೇಶದ ನದಿಯೊಂದು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದ್ದು, ಸಾವಿರಾರು ಮೀನುಗಳು ಸಾವನ್ನಪ್ಪಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ. ಕಮೆಂಗ್ ನದಿಯ ಮೇಲ್ಮೈಯಲ್ಲಿ ತೇಲುತ್ತಿರುವ ಮೀನುಗಳನ್ನು ತಿನ್ನದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅದು ವರದಿ ಮಾಡಿದೆ.

ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಹುಟ್ಟುವ ನದಿಯು ಕಪ್ಪು ಬಣ್ಣಕ್ಕೆ ತಿರುಗಲು ಒಟ್ಟು ಕರಗಿದ ಪದಾರ್ಥಗಳ ( total dissolved substances-ಟಿಡಿಎಸ್‌) ಹೆಚ್ಚಿನ ಅಂಶವೇ ಕಾರಣ ಎಂದು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಟಿಡಿಎಸ್ ಜಲಚರಗಳಿಗೆ ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಮೀನುಗಾರಿಕೆ ಅಧಿಕಾರಿಗಳು ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ. ಹೆಚ್ಚಿನ ಮಟ್ಟದ ಟಿಡಿಎಸ್‌ನಿಂದಾಗಿ ನೀರಿನ ಅಡಿಯಲ್ಲಿರುವ ಮೀನುಗಳು ಕಡಿಮೆ ಗೋಚರತೆಯನ್ನು ಅನುಭವಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಮೆಂಗ್ ನದಿಯಲ್ಲಿನ ಟಿಡಿಎಸ್ ಪ್ರತಿ ಲೀಟರ್‌ಗೆ 6,800 ಮಿ.ಗ್ರಾಂ ಆಗಿತ್ತು, ಇದು ಪ್ರತಿ ಲೀಟರ್‌ಗೆ ಸಾಮಾನ್ಯ ಶ್ರೇಣಿಯ 300-1,200 ಮಿಗ್ರಾಂಗಿಂತ ಹೆಚ್ಚಾಗಿದೆ ಎಂದು ಜಿಲ್ಲಾ ಮೀನುಗಾರಿಕೆ ಅಭಿವೃದ್ಧಿ ಅಧಿಕಾರಿ (ಡಿಎಫ್‌ಡಿಒ) ಹಾಲಿ ತಾಜೋ ಹೇಳಿದ್ದಾರೆ.

“ನದಿಯ ಪರಿಸ್ಥಿತಿ ಹೀಗೇ ಇದ್ದರೆ, ಇನ್ನು ಕಲವೇ ದಿನಗಳಲ್ಲಿ ನದಿಯ ಜಲಚರಗಳು ಸಂಪೂರ್ಣವಾಗಿ ನಾಶವಾಗುತ್ತವೆ” ಎಂದು ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

 

ಈ ಮಧ್ಯೆ, ಘಟನೆ ನಡೆದ ಸೆಪ್ಪಾ ಗ್ರಾಮದ ನಿವಾಸಿಗಳು ಚೀನಾವನ್ನು ದೂಷಿಸಿದ್ದಾರೆ. ಗಡಿಯುದ್ದಕ್ಕೂ ನೆರೆಯ ದೇಶವು ನಡೆಸುತ್ತಿರುವ ನಿರ್ಮಾಣ ಚಟುವಟಿಕೆಗಳಿಂದ ಟಿಡಿಎಸ್ ಮಟ್ಟವು ಅಪಾಯಕಾರಿಯಾಗಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಕಮೆಂಗ್ ನದಿಯ ನೀರಿನ ಬಣ್ಣ ಹಠಾತ್ ಬದಲಾವಣೆ ಮತ್ತು ಹೆಚ್ಚಿನ ಪ್ರಮಾಣದ ಮೀನುಗಳ ಸಾವಿನ ಹಿಂದಿನ ಕಾರಣವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ತಕ್ಷಣವೇ ರಚಿಸಬೇಕೆಂದು ಸೆಪ್ಪಾ ಪೂರ್ವ ಶಾಸಕ ತಪುಕ್ ಟಾಕು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

2017 ರಲ್ಲಿ, ಪಾಸಿಘಾಟ್‌ನಲ್ಲಿ ಸಿಯಾಂಗ್ ನದಿಯು ಇದೇ ರೀತಿಯ ಕಪ್ಪಾಗಿರುವುದು ವರದಿಯಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...