Homeಮುಖಪುಟಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

ಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

- Advertisement -
- Advertisement -

ಅರುಣಾಚಲ ಪ್ರದೇಶದ ನದಿಯೊಂದು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದ್ದು, ಸಾವಿರಾರು ಮೀನುಗಳು ಸಾವನ್ನಪ್ಪಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ. ಕಮೆಂಗ್ ನದಿಯ ಮೇಲ್ಮೈಯಲ್ಲಿ ತೇಲುತ್ತಿರುವ ಮೀನುಗಳನ್ನು ತಿನ್ನದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅದು ವರದಿ ಮಾಡಿದೆ.

ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಹುಟ್ಟುವ ನದಿಯು ಕಪ್ಪು ಬಣ್ಣಕ್ಕೆ ತಿರುಗಲು ಒಟ್ಟು ಕರಗಿದ ಪದಾರ್ಥಗಳ ( total dissolved substances-ಟಿಡಿಎಸ್‌) ಹೆಚ್ಚಿನ ಅಂಶವೇ ಕಾರಣ ಎಂದು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಟಿಡಿಎಸ್ ಜಲಚರಗಳಿಗೆ ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಮೀನುಗಾರಿಕೆ ಅಧಿಕಾರಿಗಳು ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ. ಹೆಚ್ಚಿನ ಮಟ್ಟದ ಟಿಡಿಎಸ್‌ನಿಂದಾಗಿ ನೀರಿನ ಅಡಿಯಲ್ಲಿರುವ ಮೀನುಗಳು ಕಡಿಮೆ ಗೋಚರತೆಯನ್ನು ಅನುಭವಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಮೆಂಗ್ ನದಿಯಲ್ಲಿನ ಟಿಡಿಎಸ್ ಪ್ರತಿ ಲೀಟರ್‌ಗೆ 6,800 ಮಿ.ಗ್ರಾಂ ಆಗಿತ್ತು, ಇದು ಪ್ರತಿ ಲೀಟರ್‌ಗೆ ಸಾಮಾನ್ಯ ಶ್ರೇಣಿಯ 300-1,200 ಮಿಗ್ರಾಂಗಿಂತ ಹೆಚ್ಚಾಗಿದೆ ಎಂದು ಜಿಲ್ಲಾ ಮೀನುಗಾರಿಕೆ ಅಭಿವೃದ್ಧಿ ಅಧಿಕಾರಿ (ಡಿಎಫ್‌ಡಿಒ) ಹಾಲಿ ತಾಜೋ ಹೇಳಿದ್ದಾರೆ.

“ನದಿಯ ಪರಿಸ್ಥಿತಿ ಹೀಗೇ ಇದ್ದರೆ, ಇನ್ನು ಕಲವೇ ದಿನಗಳಲ್ಲಿ ನದಿಯ ಜಲಚರಗಳು ಸಂಪೂರ್ಣವಾಗಿ ನಾಶವಾಗುತ್ತವೆ” ಎಂದು ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

 

ಈ ಮಧ್ಯೆ, ಘಟನೆ ನಡೆದ ಸೆಪ್ಪಾ ಗ್ರಾಮದ ನಿವಾಸಿಗಳು ಚೀನಾವನ್ನು ದೂಷಿಸಿದ್ದಾರೆ. ಗಡಿಯುದ್ದಕ್ಕೂ ನೆರೆಯ ದೇಶವು ನಡೆಸುತ್ತಿರುವ ನಿರ್ಮಾಣ ಚಟುವಟಿಕೆಗಳಿಂದ ಟಿಡಿಎಸ್ ಮಟ್ಟವು ಅಪಾಯಕಾರಿಯಾಗಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಕಮೆಂಗ್ ನದಿಯ ನೀರಿನ ಬಣ್ಣ ಹಠಾತ್ ಬದಲಾವಣೆ ಮತ್ತು ಹೆಚ್ಚಿನ ಪ್ರಮಾಣದ ಮೀನುಗಳ ಸಾವಿನ ಹಿಂದಿನ ಕಾರಣವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ತಕ್ಷಣವೇ ರಚಿಸಬೇಕೆಂದು ಸೆಪ್ಪಾ ಪೂರ್ವ ಶಾಸಕ ತಪುಕ್ ಟಾಕು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

2017 ರಲ್ಲಿ, ಪಾಸಿಘಾಟ್‌ನಲ್ಲಿ ಸಿಯಾಂಗ್ ನದಿಯು ಇದೇ ರೀತಿಯ ಕಪ್ಪಾಗಿರುವುದು ವರದಿಯಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...