Homeಮುಖಪುಟಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

ಅರುಣಾಚಲ ಪ್ರದೇಶ: ಕಪ್ಪು ಬಣ್ಣಕ್ಕೆ ತಿರುಗಿದ ನದಿ; ಸಾವಿರಾರು ಮೀನುಗಳ ಸಾವು!

- Advertisement -
- Advertisement -

ಅರುಣಾಚಲ ಪ್ರದೇಶದ ನದಿಯೊಂದು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿದ್ದು, ಸಾವಿರಾರು ಮೀನುಗಳು ಸಾವನ್ನಪ್ಪಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ಶನಿವಾರ ವರದಿ ಮಾಡಿದೆ. ಕಮೆಂಗ್ ನದಿಯ ಮೇಲ್ಮೈಯಲ್ಲಿ ತೇಲುತ್ತಿರುವ ಮೀನುಗಳನ್ನು ತಿನ್ನದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅದು ವರದಿ ಮಾಡಿದೆ.

ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಹುಟ್ಟುವ ನದಿಯು ಕಪ್ಪು ಬಣ್ಣಕ್ಕೆ ತಿರುಗಲು ಒಟ್ಟು ಕರಗಿದ ಪದಾರ್ಥಗಳ ( total dissolved substances-ಟಿಡಿಎಸ್‌) ಹೆಚ್ಚಿನ ಅಂಶವೇ ಕಾರಣ ಎಂದು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಟಿಡಿಎಸ್ ಜಲಚರಗಳಿಗೆ ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಮೀನುಗಾರಿಕೆ ಅಧಿಕಾರಿಗಳು ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ. ಹೆಚ್ಚಿನ ಮಟ್ಟದ ಟಿಡಿಎಸ್‌ನಿಂದಾಗಿ ನೀರಿನ ಅಡಿಯಲ್ಲಿರುವ ಮೀನುಗಳು ಕಡಿಮೆ ಗೋಚರತೆಯನ್ನು ಅನುಭವಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಮೆಂಗ್ ನದಿಯಲ್ಲಿನ ಟಿಡಿಎಸ್ ಪ್ರತಿ ಲೀಟರ್‌ಗೆ 6,800 ಮಿ.ಗ್ರಾಂ ಆಗಿತ್ತು, ಇದು ಪ್ರತಿ ಲೀಟರ್‌ಗೆ ಸಾಮಾನ್ಯ ಶ್ರೇಣಿಯ 300-1,200 ಮಿಗ್ರಾಂಗಿಂತ ಹೆಚ್ಚಾಗಿದೆ ಎಂದು ಜಿಲ್ಲಾ ಮೀನುಗಾರಿಕೆ ಅಭಿವೃದ್ಧಿ ಅಧಿಕಾರಿ (ಡಿಎಫ್‌ಡಿಒ) ಹಾಲಿ ತಾಜೋ ಹೇಳಿದ್ದಾರೆ.

“ನದಿಯ ಪರಿಸ್ಥಿತಿ ಹೀಗೇ ಇದ್ದರೆ, ಇನ್ನು ಕಲವೇ ದಿನಗಳಲ್ಲಿ ನದಿಯ ಜಲಚರಗಳು ಸಂಪೂರ್ಣವಾಗಿ ನಾಶವಾಗುತ್ತವೆ” ಎಂದು ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

 

ಈ ಮಧ್ಯೆ, ಘಟನೆ ನಡೆದ ಸೆಪ್ಪಾ ಗ್ರಾಮದ ನಿವಾಸಿಗಳು ಚೀನಾವನ್ನು ದೂಷಿಸಿದ್ದಾರೆ. ಗಡಿಯುದ್ದಕ್ಕೂ ನೆರೆಯ ದೇಶವು ನಡೆಸುತ್ತಿರುವ ನಿರ್ಮಾಣ ಚಟುವಟಿಕೆಗಳಿಂದ ಟಿಡಿಎಸ್ ಮಟ್ಟವು ಅಪಾಯಕಾರಿಯಾಗಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಕಮೆಂಗ್ ನದಿಯ ನೀರಿನ ಬಣ್ಣ ಹಠಾತ್ ಬದಲಾವಣೆ ಮತ್ತು ಹೆಚ್ಚಿನ ಪ್ರಮಾಣದ ಮೀನುಗಳ ಸಾವಿನ ಹಿಂದಿನ ಕಾರಣವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ತಕ್ಷಣವೇ ರಚಿಸಬೇಕೆಂದು ಸೆಪ್ಪಾ ಪೂರ್ವ ಶಾಸಕ ತಪುಕ್ ಟಾಕು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

2017 ರಲ್ಲಿ, ಪಾಸಿಘಾಟ್‌ನಲ್ಲಿ ಸಿಯಾಂಗ್ ನದಿಯು ಇದೇ ರೀತಿಯ ಕಪ್ಪಾಗಿರುವುದು ವರದಿಯಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...