Homeಕರ್ನಾಟಕ66 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

66 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ-ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

- Advertisement -
- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2020-21ನೇ ಸಾಲಿನ ರಾಜ್ಯೋತ್ಸವ ಪ್ರಕಟಿಸಿದೆ. ಈ ವರ್ಷ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ 10 ಸಂಘ-ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

“ಸಾರ್ವಜನಿಕರು ಮಾಡಿದ ಶಿಫಾರಸ್ಸು ಮಾಡಿದ ಹೆಸರುಗಳನ್ನೂ ಪ್ರಶಸ್ತಿ ಸಲಹಾ ಸಮಿತಿ ಮತ್ತು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿಯ ಮುಂದೆ ಇಡಲಾಯಿತು. ಇವುಗಳ ಸಮಗ್ರ ಪರಿಶೀಲನೆಯ ನಂತರ ಆಯ್ಕೆ ಸಮಿತಿಯ ಅಂತಿಮಗೊಳಿಸಿದ ಹೆಸರುಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗಿದೆ” ಎಂದು ಇಲಾಖೆಯ ಸಚಿವ ವಿ.ಸುನಿಲ್‌ಕುಮಾರ್‌ ತಿಳಿಸಿದ್ದಾರೆ.

“ಕನ್ನಡದ ಮೇರು ನಟ ಪುನೀತ್‌ ರಾಜ್‌ಕುಮಾರ್ ಅಕಾಲಿಕ ನಿಧನದಿಂದಾಗಿ ಪ್ರಶಸ್ತಿ ಘೋಷಣೆಯಲ್ಲಿ ವಿಳಂಬವಾಯಿತು. ಅವರ ಅಂತ್ಯಕ್ರಿಯೆಯ ಎಲ್ಲ ಪ್ರಕ್ರಿಯೆಗಳು ಮುಗಿದ ನಂತರ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ-ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ವರ್ಷಕ್ಕೆ ಮಾತ್ರ ಈ ಪ್ರಶಸ್ತಿ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ.

ಅಮೃತ ಮಹೋತ್ಸವ ಪ್ರಶಸ್ತಿಗೆ ಭಾಜನವಾದ ಸಂಸ್ಥೆಗಳು

ಶ್ರೀ ವೀರೇಶ್ವರ ಪುಣ್ಯಾಶ್ರಮ ಅಂಧ ಮಕ್ಕಳ ಶಾಲೆ- ಗದಗ

ಕರ್ನಾಟಕ ಹಿಮೊಫಿಲಿಯಾ ಸೊಸೈಟಿ- ದಾವಣಗೆರೆ

ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ- ಕಲಬುರಗಿ

ಶ್ರೀ ರಾಮಕೃಷ್ಣ ಆಶ್ರಮ, ಮಂಗಳೂರು- ದಕ್ಷಿಣ ಕನ್ನಡ

ಆಲ್‌ ಇಂಡಿಯಾ ಜೈನ್‌ ಯೂತ್‌ ಫೆಡರೇಷನ್‌‌- ಹುಬ್ಬಳ್ಳಿ

ಅನುಗ್ರಹ ಕಣ್ಣಿನ ಆಸ್ಪತ್ರೆ- ವಿಜಯಪುರ

ಉತ್ಸವ ರಾಕ್‌ ಗಾರ್ಡ‌ನ್‌- ಹಾವೇರಿ

ಅದಮ್ಯ ಚೇತನ- ಬೆಂಗಳೂರು

ಸ್ಟೆಪ್‌‌ ಒನ್‌- ಬೆಂಗಳೂರು

ಬನಶಂಕರಿ ಮಹಿಳಾ ಸಮಾಜ- ಬೆಂಗಳೂರು

****

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರು

ಸಾಹಿತ್ಯ ಕ್ಷೇತ್ರ: ಮಹಾದೇವ ಶಂಕನಪುರ (ಚಾಮರಾಜನಗರ), ಪ್ರೊ.ಡಿ.ಟಿ.ರಂಗಸ್ವಾಮಿ (ಚಿತ್ರದುರ್ಗ), ಜಯಲಕ್ಷ್ಮಿ ಮಂಗಳಮೂರ್ತಿ (ರಾಯಚೂರು), ಅಜ್ಜಂಪುರ ಮಂಜುನಾಥ್‌ (ಚಿಕ್ಕಮಗಳೂರು), ಡಾ.ಕೃಷ್ಣ ಕೋಲ್ಹಾರ ಕುಲಕರ್ಣಿ (ವಿಜಯಪುರ), ಸಿದ್ದಪ್ಪ ಬಿದರಿ (ಬಾಗಲಕೋಟೆ).

ರಂಗಭೂಮಿ: ಫಕೀರಪ್ಪ ರಾಮಪ್ಪ ಕೊಡಾಯಿ (ಹಾವೇರಿ), ಪ್ರಕಾಶ್‌ ಬೆಳವಾಡಿ (ಚಿಕ್ಕಮಗಳೂರು), ರಮೇಶ್‌ಗೌಡ ಪಾಟೀಲ (ಬಳ್ಳಾರಿ), ಮಲ್ಲೇಶಯ್ಯ ಎನ್‌. (ರಾಮನಗರ), ಸಾವಿತ್ರಿ ಗೌಡರ್‌ (ಗದಗ)

ಜಾನಪದ: ಆರ್‌.ಬಿ.ನಾಯಕ (ವಿಜಯಪುರ), ಗೌರಮ್ಮ ಹುಚ್ಚಪ್ಪ ಮಾಸ್ತರ್‌ (ಶಿವಮೊಗ್ಗ), ದುರ್ಗಪ್ಪ ಚೆನ್ನದಾಸರ (ಬಳ್ಳಾರಿ), ಬನ್ನಂಜೆ ಬಾಬು ಅಮೀನ್‌ (ಉಡುಪಿ), ಮಲ್ಲಿಕಾರ್ಜುನ ರಾಚಪ್ಪ ಮುದಕವಿ (ಬಾಗಲಕೋಟೆ), ವೆಂಕಪ್ಪ ಗೋವಿಂದಪ್ಪ ಭಜಂತ್ರಿ (ಧಾರಾವಾಡ), ಮಹಾರುದ್ರಪ್ಪ ವೀರಪ್ಪ ಇಟಗಿ (ಹಾವೇರಿ).

ಸಂಗೀತ: ತ್ಯಾಗರಾಜು ಸಿ (ನಾದಸ್ವರ)- ಕೋಲಾರ, ಹೆರಾಲ್ಡ್‌ ಸಿರಿಲ್‌ ಡಿಸೋಜಾ (ದಕ್ಷಿಣ ಕನ್ನಡ).

ಶಿಲ್ಪಕಲೆ: ಡಾ.ಜಿ.ಜ್ಞಾನಾನಂದ (ಚಿಕ್ಕಬಳ್ಳಾಪುರ), ವೆಂಕಣ್ಣ ಚಿತ್ರಗಾರ (ಕೊಪ್ಪಳ).

ಸಮಾಜಸೇವೆ: ಸೂಲಗಿತ್ತಿ ಯುಮುನವ್ವ (ಸಾಲಮಂಟಪಿ- ಬಾಗಲಕೋಟೆ), ಮದಲಿ ಮಾದಯ್ಯ (ಮೈಸೂರು), ಮುನಿಯಪ್ಪ ದೊಮ್ಮಲೂರು (ಬೆಂಗಳೂರು ನಗರ), ಬಿ.ಎಲ್‌.ಪಾಟೀಲ್‌, ಅಥಣಿ (ಬೆಳಗಾವಿ), ಡಾ.ಜೆ.ಎನ್‌.ರಾಮಕೃಷ್ಣೇಗೌಡ (ಮಂಡ್ಯ).

ವೈದ್ಯಕೀಯ: ಡಾ.ಸುಲ್ತಾನ್‌ ಬಿ.ಜಗಳೂರು (ದಾವಣಗೆರೆ), ಡಾ.ವ್ಯಾಸ ದೇಶಪಾಂಡೆ (ವೇದವ್ಯಾಸ- ಧಾರವಾಡ), ಡಾ.ಎ.ಆರ್‌.ಪ್ರದೀಪ್‌ (ದಂತ ವೈದ್ಯಕೀಯ- ಬೆಂಗಳೂರು ನಗರ), ಡಾ.ಸುರೇಶ್‌ ರಾವ್‌ (ದಕ್ಷಿಣ ಕನ್ನಡ), ಡಾ.ಸುದರ್ಶನ್‌ (ಬೆಂಗಳೂರು), ಡಾ.ಶಿವನಗೌಡ ರುದ್ರಗೌಡ ರಾಮನಗೌಡರ್‌ (ಧಾರವಾಡ).

ಕ್ರೀಡೆ: ರೋಹನ ಬೊಪ್ಪಣ್ಣ (ಕೊಡಗು), ಕೆ.ಗೋಪಿನಾಥ್‌ (ವಿಶೇಷ ಚೇತನ, ಬೆಂಗಳೂರು ನಗರ), ರೋಹಿತ್‌ ಕುಮಾರ್‌ ಕಟೀಲ್‌ (ಉಡುಪಿ), ಎ.ನಾಗರಾಜ್‌ (ಕಬ್ಬಡ್ಡಿ, ಬೆಂಗಳೂರು ನಗರ).

ಸಿನಿಮಾ: ದೇವರಾಜ್‌ (ಬೆಂಗಳೂರು ನಗರ)

ಶಿಕ್ಷಣ: ಸ್ವಾಮಿ ಲಿಂಗಪ್ಪ (ಮೈಸೂರು), ಶ್ರೀಧರ್‌ ಚಕ್ರವರ್ತಿ (ಧಾರವಾಡ), ಪ್ರೊ.ಪಿ.ವಿ.ಕೃಷ್ಣ ಭಟ್‌ (ಶಿವಮೊಗ್ಗ)

ಸಂಕೀರ್ಣ: ಡಾ.ಬಿ.ಅಂಬಣ್ಣ (ವಿಜಯನಗರ), ಕ್ಯಾಪ್ಟನ್‌ ರಾಜಾರಾಮ್‌‌ (ಬಳ್ಳಾರಿ), ಗಂಗಾವತಿ ಪ್ರಾಣೇಶ್‌ (ಕೊಪ್ಪಳ)

ವಿಜ್ಞಾನ, ತಂತ್ರಜ್ಞಾನ: ಡಾ.ಎಚ್‌.ಎಸ್.ಸಾವಿತ್ರಿ (ಬೆಂಗಳೂರು ನಗರ), ಪ್ರೊ.ಜಿ.ಯು.ಕುಲ್ಕರ್ಣಿ (ಬೆಂಗಳೂರು)

ಕೃಷಿ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಗುರುಲಿಂಗಪ್ಪ ಮೇಲ್ಡೊಡ್ಡಿ (ಬೀದರ್‌), ಶಂಕರಪ್ಪ ಅಮ್ಮನಘಟ್ಟ (ತುಮಕೂರು)

ಪರಿಸರ: ಡಾ.ಸಿ.ನಾಗರಾಜ್‌ (ಬೆಂಗಳೂರು ಗ್ರಾಮಾಂತರ), ಮಹಾದೇವ ವೇಳಿಪಾ (ಉತ್ತರ ಕನ್ನಡ), ಬೈಕಂಪಾಡಿ ರಾಮಚಂದ್ರ (ದಕ್ಷಿಣ ಕನ್ನಡ)

ಪತ್ರಿಕೋದ್ಯಮ: ಪಟ್ನಂ ಅನಂತ ಪದ್ಮನಾಭ (ಮೈಸೂರು), ಯು.ಬಿ.ರಾಜಲಕ್ಷ್ಮಿ (ಉಡುಪಿ)

ನ್ಯಾಯಾಂಗ: ಸಿ.ವಿ.ಕೇಶವಮೂರ್ತಿ – ಮೈಸೂರು

ಆಡಳಿತ: ಎಚ್‌.ಆರ್‌.ಕಸ್ತೂರಿ ರಂಗನ್‌ – ಹಾಸನ

ಸೈನಿಕ: ನವೀನ್‌ ನಾಗಪ್ಪ – ಹಾವೇರಿ

ಯಕ್ಷಗಾನ: ಗೋಪಾಲಚಾರ್ಯ (ಗೋಪಾಲ ಆಚಾರ್ಯ, ಶಿವಮೊಗ್ಗ)

ಹೊರನಾಡು ಕನ್ನಡಿಗ: ಡಾ.ಸುನೀತಾ ಶೆಟ್ಟಿ (ಮುಂಬೈ), ಚಂದ್ರಶೇರ್ ಪಾಲ್ತಾಡಿ (ಮುಂಬೈ), ಡಾ.ಸಿದ್ದರಾಮೇಶ್ವರ ಕಂಟಿಕರ್‌, ಪ್ರವೀಣ್‌ ಶೆಟ್ಟಿ (ದುಬೈ)

ಪೌರ ಕಾರ್ಮಿಕ: ರತ್ನಮ್ಮ ಶಿವಪ್ಪ ಬಬಲಾದ (ರತ್ನಮ್ಮ, ಯಾದಗಿರಿ)

ಹೈದ್ರಾಬಾದ್‌-ಕರ್ನಾಟಕ ಏಕೀಕರಣ ಹೋರಾಟಗಾರರು: ಮಹದೇವಪ್ಪ ಕಡೆಚೂರು – ಕಲಬುರಗಿ

ಯೋಗ: ಭ.ಮ.ಶ್ರೀಕಂಠ (ಶಿವಮೊಗ್ಗ), ಡಾ.ರಾಘವೇಂದ್ರ ಶೆಣೈ (ಬೆಂಗಳೂರು)

ಉದ್ಯಮ: ಶ್ಯಾಮರಾಜ (ಬೆಂಗಳೂರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...