Homeಕರ್ನಾಟಕಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ.

- Advertisement -
- Advertisement -

ನಮ್ಮನ್ನು ಅಗಲಿದ ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ಸ್ಮರಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ.

ಸರಣಿ ಟ್ವೀಟ್‌ ಮೂಲಕ ರಾಜ್ಯೋತ್ಸವದ ಶುಭಕೋರಿರುವ ಅವರು, “ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್‌ ರಾಜಕುಮಾರ್‌ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ” ಎಂದಿದ್ದಾರೆ.

ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದು ತಿಳಿಸಿದ್ದಾರೆ.

1,500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ ಎಂದು ಬಣ್ಣಿಸಿದ್ದಾರೆ.

ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದಿದ್ದಾರೆ.

ಸಿಎಂ ಬೊಮ್ಮಾಯಿ ಶುಭಾಶಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ ಮಾಡಿ ಶುಭಕೋರಿದ್ದು, “ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” ಎಂದು ಆಶಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌

“ಕನ್ನಡ, ಕನ್ನಡಿಗ ಮತ್ತು ಕರ್ನಾಟಕವನ್ನು ಒಳಗೊಂಡ ಒಟ್ಟು ಕನ್ನಡತನದ ಬದುಕು ಹಸನಾಗಿಸುವ ಗುರಿ ನಮ್ಮದಾಗಿರಲಿ. ಕನ್ನಡವನ್ನು ಉಳಿಸೋಣ, ಬೆಳೆಸೋಣ. ರಾಜ್ಯದ ಸಮಸ್ತ ಕನ್ನಡ ಮನಸ್ಸುಗಳಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು” ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಶುಭಕೋರಿದ್ದಾರೆ.


ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...