Homeಮುಖಪುಟಬಿಗ್ ಶಾಕ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲೆಂಡರ್‌ ದರ 266 ರೂ ಹೆಚ್ಚಳ

ಬಿಗ್ ಶಾಕ್: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲೆಂಡರ್‌ ದರ 266 ರೂ ಹೆಚ್ಚಳ

ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 2000 ರೂ ದಾಟಿದೆ...

- Advertisement -
- Advertisement -

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ಇಂದಿನಿಂದ 266 ರೂ ಹೆಚ್ಚಳವಾಗಿದೆ. ದೆಹಲಿಯಲ್ಲಿ 1734 ರೂಗೆ ಮಾರಾಟವಾಗುತ್ತಿದ್ದ ವಾಣಿಜ್ಯ ಉದ್ದೇಶಿತ ಬಳಕೆಯ 19 ಕೆ.ಜಿ. ಸಿಲಿಂಡರ್‌ ಬೆಲೆಯು 2000.50 ರೂ ಆಗಿದೆ.

ಮುಂಬೈನಲ್ಲಿ 1683ರೂ ಇದ್ದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 1950ರೂ ತಲುಪಿದೆ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 2073.50 ಆಗಿದೆ. ಚೆನ್ನೈನಲ್ಲಿ ಪ್ರಸ್ತುತ ಸಿಲಿಂಡರ್‌ ಬೆಲೆಯು 2133 ರೂಗೆ ಏರಿಕೆಯಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯ ಹೊರೆ ಸಹ ಎಲ್ಲಾ ಜನಸಾಮಾನ್ಯರಿಗೂ ಅನ್ವಹಿಸಲಿದೆ. ಇನ್ನು ಮುಂದೆ ಹೋಟೆಲ್ ಆಹಾರದ ಬೆಲೆ ಹೆಚ್ಚಳವಾಗುವ ಸಂಭವವಿದೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಸಹ ಅಧಿಕವಾಗಿದೆ. ಸುಮಾರು 900 ರೂಗಳ ಆಸುಪಾಸಿನಲ್ಲಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ಸತತ ಆರನೇ ದಿನವೂ ದೇಶದಲ್ಲಿ ಪ್ರೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ತಲಾ 35 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ 113.11 ರೂ ಹಾಗೂ ಡೀಸೆಲ್‌ ಬೆಲೆ 104.05 ರೂ ಆಗಿದೆ.

ಮುಂಬೈನಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಕ್ರಮವಾಗಿ 115.50 ರೂ ಮತ್ತು 106.62 ರೂ ಆಗಿದ್ದರೆ ಕೋಲ್ಕತ್ತಾದಲ್ಲಿ 110.15ರೂ ಮತ್ತು 101.56 ರೂ ಏರಿಕೆಯಾಗಿದೆ.

ರಾಜಸ್ಥಾನದ ಗಂಗಾನಗರದಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆ ದಾಖಲೆ ಮಟ್ಟಕ್ಕೇರಿದೆ. ಅಲ್ಲಿ ಪೆಟ್ರೋಲ್ 122.32 ಹಾಗೂ ಡೀಸೆಲ್‌ ಬೆಲೆ 113.21 ರೂ ತಲುಪಿದೆ. ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಪೆಟ್ರೊಲ್‌ ಬೆಲೆ ಪ್ರತಿ ಲೀಟರ್‌ಗೆ 120 ರೂ ದಾಟಿದೆ.


ಇದನ್ನೂ ಓದಿ: ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ ಹೋಯಿತು?


ಇನ್ನು ಪೆಟ್ರೊಲ್‌, ಡೀಸೆಲ್‌ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾತ್ರ ತಮ್ಮ ಬೊಕ್ಕಸ ತುಂಬಿಸಿಕೊಳ್ಳುವತ್ತ ಗಮನ ಹರಿಸಿರುವುದು ಶೋಚನೀಯ ಸಂಗತಿ. ಪೆಟ್ರೋಲ್ ಮೇಲೆ ಕೇಂದ್ರ ಸರ್ಕಾರವು ಪ್ರತಿ ಲೀಟರ್‌ಗೆ 32ರೂ ಮತ್ತು ರಾಜ್ಯ ಸರ್ಕಾರವು 27 ರೂ ಸುಂಕ ವಸೂಲಿ ಮಾಡುತ್ತಿದೆ. ಹಾಗೆಯೇ ಡೀಸೆಲ್ ಮೇಲೆ ಕೇಂದ್ರವು 31 ರೂ ಹಾಗೂ ರಾಜ್ಯವೂ 18 ರೂ ತೆರಿಗೆ ವಿಧಿಸುತ್ತಿದೆ.

ತರಕಾರಿ ಸೇರಿದಂತೆ ದಿನನಿತ್ಯದ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ನಲುಗುತ್ತಿರುವ ಜನಸಾಮಾನ್ಯರಿಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಇಂಧನ ಬೆಲೆ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಪರವಾಗಿದ್ದರೆ ಇಂಧನದ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಪೂರ್ಣವಾಗಿ ಹಿಂಪಡೆಯಲಿ ಎಂದು ಜನರು ಆಗ್ರಹಿಸುತ್ತಿದ್ದಾರೆ.


ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Sarakarakke kannu kanuvudilla badavara hotte mele hodeuvade kelasa? 1liter gas 67 adare auto ran madodu hege ?passengers duddu kodthara? Metar minimus change madi

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...