Homeಸಿನಿಮಾಕ್ರೀಡೆಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಇದೆಲ್ಲವೂ ಘಟಿಸಲು ಭಾರತ ತಂಡವು ತನ್ನ ಉಳಿದ ಮೂರು ಪಂದ್ಯಗಳನ್ನು ಸಾಕಷ್ಟು ಭಾರೀ ಅಂತರದಲ್ಲಿ ಗೆಲ್ಲುವುದು ಪೂರ್ವ ಷರತ್ತಾಗಿದೆ.

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ಸತತ ಎರಡು ಹೀನಾಯ ಸೋಲುಗಳಿಂದ ಕಂಗೆಟ್ಟಿದೆ. ಪಾಕ್ ವಿರುದ್ಧ 10 ವಿಕೆಟ್‌ಗಳ ಸೋಲುಂಡಿದ್ದ ಭಾರತ, ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಪರಾಭವಗೊಂಡಿತು. ಅಲ್ಲಿಗೆ ಸೆಮಿಫೈನಲ್ ಅವಕಾಶ ದೂರವಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ. ಆದರೆ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ. ಹೇಗೆ ಎಂದು ನೋಡೋಣ.

ಸದ್ಯದ ಪಾಯಿಂಟ್ಸ್ ಪಟ್ಟಿ

ಈಗ ಗ್ರೂಪ್ 2 ರ ಪಾಯಿಂಟ್ ಪಟ್ಟಿಯಲ್ಲಿ ಸತತ ಮೂರು ಗೆಲವುಗಳೊಂದಿಗೆ ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ. ಅದು ತನ್ನ ಉಳಿದ ಎರಡು ಪಂದ್ಯಗಳಲ್ಲಿ ನಮೀಬಿಯ ಮತ್ತು ಸ್ಕಾಟ್ಲ್ಯಾಂಡ್ ವಿರುದ್ದ ಸೆಣಸಲಿದೆ. ಒಂದು ಗೆಲುವು ಪಡೆದರೂ ಅದರ ಸೆಮಿಫೈನಲ್ ಸ್ಥಾನ ಭದ್ರವಾಗಲಿದೆ. ಗ್ರೂಪ್ 2 ರಲ್ಲಿ ಸೆಮಿಫೈನಲ್ ತಲುಪಲು ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಆಫ್ಘಾನಿಸ್ತಾನ, ನ್ಯೂಜಿಲೆಂಡ್, ನಮೀಬಿಯಾ, ಭಾರತ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ಆ ಸ್ಥಾನದ ಮೇಲೆ ಕಣ್ಣಿಟ್ಟಿವೆ. ಇವುಗಳಲ್ಲಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಭಾರತ ತಂಡಕ್ಕೆ ಹೆಚ್ಚಿನ ಸಾಧ್ಯತೆಗಳಿವೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ಭಾರತದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ
ನವೆಂಬರ್ 5: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬ್ 8: ನಮೀಬಿಯಾ ಎದುರು ದುಬೈನಲ್ಲಿ

ನ್ಯೂಜಿಲೆಂಡ್‌ನ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬರ್ 5: ನಮೀಬಿಯಾ ಎದುರು ಶಾರ್ಜಾದಲ್ಲಿ
ನವೆಂಬರ್ 7: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ

ಆಫ್ಘಾನಿಸ್ತಾನದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಭಾರತದ ಎದುರು ಅಬುದಾಬಿಯಲ್ಲಿ
ನವೆಂಬರ್ 7: ನ್ಯೂಜಿಲೆಂಡ್‌ ಎದುರು ಅಬುದಾಬಿಯಲ್ಲಿ

ಭಾರತವು ತನ್ನ ಮುಂದಿನ ಮೂರು ಪಂದ್ಯಗಳನ್ನು ಭಾರೀ ಅಂತರದಿಂದ ಗೆದ್ದಲ್ಲಿ 6 ಪಾಯಿಂಟ್‌ಗಳ ಜೊತೆಗೆ ಉತ್ತಮ ನೆಟ್ ರನ್ ರೇಟ್ ಆಧಾರದಲ್ಲಿ ಸೆಮಿಫೈನಲ್ ತಲುಪಬಹುದು. ಸದ್ಯಕ್ಕೆ -1.609 ರ ಕಡಿಮೆ ರನ್‌ರೇಟ್ ಭಾರತಕ್ಕಿದೆ. ಆದರೆ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಉಳಿದ ತಂಡಗಳ ಎದುರು ಸೋಲುವುದು ಕೂಡ ಭಾರತಕ್ಕೆ ಅತೀ ಅಗತ್ಯವಾಗಿದೆ.

ಭಾರತ 8 ಪಾಯಿಂಟ್‌ಗಳನ್ನು ಗಳಿಸುವುದು ಸಾಧ್ಯವಿಲ್ಲ. ಆದರೆ ಆ ಸಾಧ್ಯತೆ ಆಫ್ಘಾನಿಸ್ತಾನ ತಂಡಕ್ಕಿದೆ. ಏಕೆಂದರೆ ಅದು ಈಗಾಗಲೇ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು 4 ಪಾಯಿಂಟ್ ಗಳಿಸಿಕೊಂಡಿದೆ. ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಅದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಒಂದನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ನ್ಯೂಜಿಲೆಂಡ್‌ ತಂಡಕ್ಕೂ ಸಹ ಆ ಅವಕಾಶವಿದೆ. ಅದು ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದು 2 ಪಾಯಿಂಟ್ ಗಳಿಸಿದೆ. ಉಳಿದ ಮೂರು ಪಂದ್ಯಗಳಲ್ಲಿ ಮೂರನ್ನು ಗೆದ್ದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಎರಡನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ಈ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಅಬುದಾಬಿಯಲ್ಲಿ ನಡೆಯಲಿದರು ಆಫ್ಘಾನಿಸ್ತಾನ ಎದುರಿನ ನ್ಯೂಜಿಲೆಂಡ್ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ.

ಸನ್ನಿವೇಶ 1

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ಅದೇ ರೀತಿ ಆಫ್ಘಾನಿಸ್ತಾನವು ನ್ಯೂಜಿಲೆಂಡ್ ಎದರು ಭಾರೀ ಅಂತರದಿಂದ ಗೆದ್ದಲ್ಲಿ ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ.

ಸನ್ನಿವೇಶ 2

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ನ್ಯೂಜಿಲೆಂಡ್ ಸಹ ಆಫ್ಘಾನಿಸ್ತಾನ ಎದುರು ಗೆದ್ದಲ್ಲಿ ಆಫ್ಘಾನಿಸ್ತಾನ ಕೇವಲ 04 ಪಾಯಿಂಟ್‌ಗಳಿಗೆ ಸೀಮಿತವಾಗುತ್ತದೆ. ಅದರ ಸೆಮಿಫೈನಲ್ ಹಾದಿ ಮುಚ್ಚಿಹೋಗುತ್ತದೆ. ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ತಂಡವು ನಮೀಬಿಯಾ ಅಥವಾ ಸ್ಕಾಟ್ಲ್ಯಾಂಡ್ ಎದುರಿನ ಒಂದು ಪಂದ್ಯ ಸೋತರೂ ಭಾರತದ ನೆಟ್‌ ರನ್ ರೇಟ್ ಉತ್ತಮವಾಗಿದ್ದಲ್ಲಿ ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ.

ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಭಾರತಕ್ಕೆ ಸಹಾಯ ಮಾಡಬಲ್ಲವೇ?

ಭಾರತಕ್ಕೆ ಸೆಮಿಫೈನಲ್ ತಲುಪಲು ಬೇರೆ ದಾರಿಗಳು ಸಹ ಇವೆ. ಭಾರತವು ಆಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಎದುರು ಗೆಲ್ಲಲೇಬೇಕು. ನಂತರ ಈ ಎರಡು ತಂಡಗಳು ಪಾಕಿಸ್ತಾನದ ಎದುರು ಸೆಣೆಸುತ್ತಿವೆ. ಅಲ್ಲಿ ಅವರೆಡೂ ಭಾರೀ ಅಂತರದಿಂದ ಗೆದ್ದಲ್ಲಿ ಪಾಕಿಸ್ತಾನವೇ ಹೊರಹೋಗುವ ಸಾಧ್ಯತೆ ಸಹ ಇದೆ. ಆದರೆ ಭಾರೀ ಅಂತರದಿಂದ ಗೆಲ್ಲಬೇಕು ಮತ್ತು ಭಾರತ ಪಾಕಿಸ್ತಾನಕ್ಕಿಂತ ಉತ್ತಮ ನೆಟ್‌ ರನ್ ರೇಟ್ ಹೊಂದಿರಬೇಕಾಗುತ್ತದೆ.

ಇನ್ನೊಂದು ರೀತಿಯಲ್ಲಿ ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ನ್ಯೂಜಿಲೆಂಡ್ ವಿರುದ್ಧವೂ ದೊಡ್ಡ ಜಯ ಪಡೆದರೆ ಅದು ಭಾರತಕ್ಕೆ ವರದಾನವಾಗುತ್ತದೆ. ಆಗ ನ್ಯೂಜಿಲೆಂಡ್ ಆಫ್ಘಾನಿಸ್ತಾನದ ಎದುರು ಗೆದ್ದಿರಬೇಕು ಮತ್ತು ಭಾರತ ನಮೀಬಿಯಾಗಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ.. ಭಾರತದ ಪಾಲಿಗೆ ಅತಿ ದೊಡ್ಡ ಸವಾಲು ಇದಾಗಿದೆ. ಅದು ಪುಟಿದೆದ್ದು ಆಡಬೇಕಿದೆ ಮತ್ತು ಭಾರೀ ಅಂತರ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಆಗಷ್ಟೇ ಉಳಿದ ಸನ್ನಿವೇಶಗಳಿಗೆ ಜೀವ ಬರುತ್ತದೆ. ಏನಾಗುತ್ತದೆ ಕಾದು ನೋಡೋಣ..


ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...