Homeಸಿನಿಮಾಕ್ರೀಡೆಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಇದೆಲ್ಲವೂ ಘಟಿಸಲು ಭಾರತ ತಂಡವು ತನ್ನ ಉಳಿದ ಮೂರು ಪಂದ್ಯಗಳನ್ನು ಸಾಕಷ್ಟು ಭಾರೀ ಅಂತರದಲ್ಲಿ ಗೆಲ್ಲುವುದು ಪೂರ್ವ ಷರತ್ತಾಗಿದೆ.

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ಸತತ ಎರಡು ಹೀನಾಯ ಸೋಲುಗಳಿಂದ ಕಂಗೆಟ್ಟಿದೆ. ಪಾಕ್ ವಿರುದ್ಧ 10 ವಿಕೆಟ್‌ಗಳ ಸೋಲುಂಡಿದ್ದ ಭಾರತ, ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಪರಾಭವಗೊಂಡಿತು. ಅಲ್ಲಿಗೆ ಸೆಮಿಫೈನಲ್ ಅವಕಾಶ ದೂರವಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ. ಆದರೆ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ. ಹೇಗೆ ಎಂದು ನೋಡೋಣ.

ಸದ್ಯದ ಪಾಯಿಂಟ್ಸ್ ಪಟ್ಟಿ

ಈಗ ಗ್ರೂಪ್ 2 ರ ಪಾಯಿಂಟ್ ಪಟ್ಟಿಯಲ್ಲಿ ಸತತ ಮೂರು ಗೆಲವುಗಳೊಂದಿಗೆ ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ. ಅದು ತನ್ನ ಉಳಿದ ಎರಡು ಪಂದ್ಯಗಳಲ್ಲಿ ನಮೀಬಿಯ ಮತ್ತು ಸ್ಕಾಟ್ಲ್ಯಾಂಡ್ ವಿರುದ್ದ ಸೆಣಸಲಿದೆ. ಒಂದು ಗೆಲುವು ಪಡೆದರೂ ಅದರ ಸೆಮಿಫೈನಲ್ ಸ್ಥಾನ ಭದ್ರವಾಗಲಿದೆ. ಗ್ರೂಪ್ 2 ರಲ್ಲಿ ಸೆಮಿಫೈನಲ್ ತಲುಪಲು ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಆಫ್ಘಾನಿಸ್ತಾನ, ನ್ಯೂಜಿಲೆಂಡ್, ನಮೀಬಿಯಾ, ಭಾರತ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ಆ ಸ್ಥಾನದ ಮೇಲೆ ಕಣ್ಣಿಟ್ಟಿವೆ. ಇವುಗಳಲ್ಲಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಭಾರತ ತಂಡಕ್ಕೆ ಹೆಚ್ಚಿನ ಸಾಧ್ಯತೆಗಳಿವೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ಭಾರತದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ
ನವೆಂಬರ್ 5: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬ್ 8: ನಮೀಬಿಯಾ ಎದುರು ದುಬೈನಲ್ಲಿ

ನ್ಯೂಜಿಲೆಂಡ್‌ನ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬರ್ 5: ನಮೀಬಿಯಾ ಎದುರು ಶಾರ್ಜಾದಲ್ಲಿ
ನವೆಂಬರ್ 7: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ

ಆಫ್ಘಾನಿಸ್ತಾನದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಭಾರತದ ಎದುರು ಅಬುದಾಬಿಯಲ್ಲಿ
ನವೆಂಬರ್ 7: ನ್ಯೂಜಿಲೆಂಡ್‌ ಎದುರು ಅಬುದಾಬಿಯಲ್ಲಿ

ಭಾರತವು ತನ್ನ ಮುಂದಿನ ಮೂರು ಪಂದ್ಯಗಳನ್ನು ಭಾರೀ ಅಂತರದಿಂದ ಗೆದ್ದಲ್ಲಿ 6 ಪಾಯಿಂಟ್‌ಗಳ ಜೊತೆಗೆ ಉತ್ತಮ ನೆಟ್ ರನ್ ರೇಟ್ ಆಧಾರದಲ್ಲಿ ಸೆಮಿಫೈನಲ್ ತಲುಪಬಹುದು. ಸದ್ಯಕ್ಕೆ -1.609 ರ ಕಡಿಮೆ ರನ್‌ರೇಟ್ ಭಾರತಕ್ಕಿದೆ. ಆದರೆ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಉಳಿದ ತಂಡಗಳ ಎದುರು ಸೋಲುವುದು ಕೂಡ ಭಾರತಕ್ಕೆ ಅತೀ ಅಗತ್ಯವಾಗಿದೆ.

ಭಾರತ 8 ಪಾಯಿಂಟ್‌ಗಳನ್ನು ಗಳಿಸುವುದು ಸಾಧ್ಯವಿಲ್ಲ. ಆದರೆ ಆ ಸಾಧ್ಯತೆ ಆಫ್ಘಾನಿಸ್ತಾನ ತಂಡಕ್ಕಿದೆ. ಏಕೆಂದರೆ ಅದು ಈಗಾಗಲೇ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು 4 ಪಾಯಿಂಟ್ ಗಳಿಸಿಕೊಂಡಿದೆ. ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಅದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಒಂದನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ನ್ಯೂಜಿಲೆಂಡ್‌ ತಂಡಕ್ಕೂ ಸಹ ಆ ಅವಕಾಶವಿದೆ. ಅದು ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದು 2 ಪಾಯಿಂಟ್ ಗಳಿಸಿದೆ. ಉಳಿದ ಮೂರು ಪಂದ್ಯಗಳಲ್ಲಿ ಮೂರನ್ನು ಗೆದ್ದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಎರಡನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ಈ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಅಬುದಾಬಿಯಲ್ಲಿ ನಡೆಯಲಿದರು ಆಫ್ಘಾನಿಸ್ತಾನ ಎದುರಿನ ನ್ಯೂಜಿಲೆಂಡ್ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ.

ಸನ್ನಿವೇಶ 1

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ಅದೇ ರೀತಿ ಆಫ್ಘಾನಿಸ್ತಾನವು ನ್ಯೂಜಿಲೆಂಡ್ ಎದರು ಭಾರೀ ಅಂತರದಿಂದ ಗೆದ್ದಲ್ಲಿ ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ.

ಸನ್ನಿವೇಶ 2

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ನ್ಯೂಜಿಲೆಂಡ್ ಸಹ ಆಫ್ಘಾನಿಸ್ತಾನ ಎದುರು ಗೆದ್ದಲ್ಲಿ ಆಫ್ಘಾನಿಸ್ತಾನ ಕೇವಲ 04 ಪಾಯಿಂಟ್‌ಗಳಿಗೆ ಸೀಮಿತವಾಗುತ್ತದೆ. ಅದರ ಸೆಮಿಫೈನಲ್ ಹಾದಿ ಮುಚ್ಚಿಹೋಗುತ್ತದೆ. ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ತಂಡವು ನಮೀಬಿಯಾ ಅಥವಾ ಸ್ಕಾಟ್ಲ್ಯಾಂಡ್ ಎದುರಿನ ಒಂದು ಪಂದ್ಯ ಸೋತರೂ ಭಾರತದ ನೆಟ್‌ ರನ್ ರೇಟ್ ಉತ್ತಮವಾಗಿದ್ದಲ್ಲಿ ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ.

ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಭಾರತಕ್ಕೆ ಸಹಾಯ ಮಾಡಬಲ್ಲವೇ?

ಭಾರತಕ್ಕೆ ಸೆಮಿಫೈನಲ್ ತಲುಪಲು ಬೇರೆ ದಾರಿಗಳು ಸಹ ಇವೆ. ಭಾರತವು ಆಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಎದುರು ಗೆಲ್ಲಲೇಬೇಕು. ನಂತರ ಈ ಎರಡು ತಂಡಗಳು ಪಾಕಿಸ್ತಾನದ ಎದುರು ಸೆಣೆಸುತ್ತಿವೆ. ಅಲ್ಲಿ ಅವರೆಡೂ ಭಾರೀ ಅಂತರದಿಂದ ಗೆದ್ದಲ್ಲಿ ಪಾಕಿಸ್ತಾನವೇ ಹೊರಹೋಗುವ ಸಾಧ್ಯತೆ ಸಹ ಇದೆ. ಆದರೆ ಭಾರೀ ಅಂತರದಿಂದ ಗೆಲ್ಲಬೇಕು ಮತ್ತು ಭಾರತ ಪಾಕಿಸ್ತಾನಕ್ಕಿಂತ ಉತ್ತಮ ನೆಟ್‌ ರನ್ ರೇಟ್ ಹೊಂದಿರಬೇಕಾಗುತ್ತದೆ.

ಇನ್ನೊಂದು ರೀತಿಯಲ್ಲಿ ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ನ್ಯೂಜಿಲೆಂಡ್ ವಿರುದ್ಧವೂ ದೊಡ್ಡ ಜಯ ಪಡೆದರೆ ಅದು ಭಾರತಕ್ಕೆ ವರದಾನವಾಗುತ್ತದೆ. ಆಗ ನ್ಯೂಜಿಲೆಂಡ್ ಆಫ್ಘಾನಿಸ್ತಾನದ ಎದುರು ಗೆದ್ದಿರಬೇಕು ಮತ್ತು ಭಾರತ ನಮೀಬಿಯಾಗಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ.. ಭಾರತದ ಪಾಲಿಗೆ ಅತಿ ದೊಡ್ಡ ಸವಾಲು ಇದಾಗಿದೆ. ಅದು ಪುಟಿದೆದ್ದು ಆಡಬೇಕಿದೆ ಮತ್ತು ಭಾರೀ ಅಂತರ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಆಗಷ್ಟೇ ಉಳಿದ ಸನ್ನಿವೇಶಗಳಿಗೆ ಜೀವ ಬರುತ್ತದೆ. ಏನಾಗುತ್ತದೆ ಕಾದು ನೋಡೋಣ..


ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...