Homeಕರ್ನಾಟಕಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ನಟರ ಅಭಿಮಾನಿಗಳು ಪರಸ್ಪರ ಕ್ಷಮೆಯಾಚಿಸಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

- Advertisement -
- Advertisement -

ಕಳೆದ ಶುಕ್ರವಾರ (ಅ.29) ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿದ್ದಾರೆ. ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಕುಟುಂಬ ವರ್ಗ, ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿರುವ ಅಪ್ಪು ನಿಧನಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ ಸಮಯವಾಗಿದೆ. ನಟನ ಸಾವು ಎಲ್ಲರಲ್ಲೂ ಬದಲಾವಣೆ ತರುತ್ತಿದೆ ಎಂದರೆ ತಪ್ಪಾಗಲಾರದು.

ನಟ ಯಶ್, ದರ್ಶನ್, ಸುದೀಪ್, ಶಿವರಾಜ್‌ಕುಮಾರ್‌, ಧ್ರುವ ಸರ್ಜಾ ಫ್ಯಾನ್ಸ್‌ಗಳ ನಡುವೆ ಪೈಪೋಟೆ ನಡೆಯುತ್ತಲೆ ಇರುತ್ತದೆ. ಒಂದು ಹಾಡಿನಲ್ಲಿ ಬರುವ ಪದ, ಸಿನಿಮಾದ ಒಂದು ಡೈಲಾಗ್‌, ಚಿತ್ರಮಂದಿರದ ಮುಂದೆ ಹಾಕುವ ಕಟೌಟ್‌…ಹೀಗೆ ಚಿಕ್ಕ ಚಿಕ್ಕ ವಿಷಯಗಳಿಗೂ ಗಲಾಟೆಗಳು ನಡೆಯುತ್ತಲೇ ಇವೆ. ಇವುಗಳಿಗೆ ಕಡಿವಾಣ ಬೀಳುವ ಸಮಯ ಇದು ಎಂಬುದರ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾರಂಗವನ್ನು ಉಳಿಸಲು ಒಟ್ಟಿಗೆ ಸಾಗೋಣ, ಮನುಷ್ಯನನ್ನೆ ಕಳೆದುಕೊಂಡ ಮೇಲೆ ಈ ಜಗಳ ಯಾಕೆ, ಚಿತ್ರರಂಗದ ಅಭಿವೃದ್ಧಿಗೆ ಒಟ್ಟಾಗಿ, ನೆಗೆಟಿವಿಟಿ ಬಿಟ್ಟು ಪಾಸಿಟಿವಿಟಿ ಹಂಚೋಣ ಎಂಬ ಪೋಸ್ಟ್‌ಗಳು ಕಾಣಿಸಿಕೊಂಡಿವೆ.

ನಟ ಸುದೀಪ್ ಅಭಿಮಾನಿಗಳು ತಮ್ಮ ಪೇಜ್‌ನಿಂದ ಬಹಿರಂಗವಾಗಿಯೇ ಕ್ಷಮೆ ಕೇಳಿ ಪತ್ರ ಬಿಡುಗಡೆ ಮಾಡಿದ್ದಾರೆ. ’ಇಷ್ಟು ದಿನ ಬೇರೆ ನಟರನ್ನು ಟ್ರೋಲ್ ಮಾಡಿದಕ್ಕೆ, ಕೆಟ್ಟದಾಗಿ ನಡೆದುಕೊಂಡಿದ್ದಕ್ಕೆ ಕ್ಷಮಿಸಿ, ಫ್ಯಾನ್ಸ್ ವಾರ್ ಬಿಟ್ಟು ಬಿಡೋಣ. ನಾವೆಲ್ಲಾ ಒಂದಾದರೇ ನಮ್ಮ ಚಿತ್ರರಂಗ ಬೆಳೆಯುತ್ತದೆ. ನಮ್ಮ ಒಂದು ದೊಡ್ಡ ಪಿಲ್ಲರ್‌ ಅನ್ನೇ ನಾವು ಕಳೆದುಕೊಂಡಿದ್ದೇವೆ. ದರ್ಶನ್, ಪುನೀತ್‌, ಯಶ್ ಸರ್‌ ಫ್ಯಾನ್ಸ್‌ ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅಭಿಮಾನಿಗಳು ಕೂಡ ಇತರೆ ನಟರನ್ನು ಟ್ರೋಲ್ ಮಾಡಿದಕ್ಕಾಗಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕಿಚ್ಚ ಸುದೀಪ್, ನಟ ಯಶ್ ಅವರನ್ನು ಟ್ರೋಲ್ ಮಾಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.

ಇನ್ನು ದಾಸ ದರ್ಶನ್ ಅಭಿಮಾನಿಗಳು ಕೂಡ ಎಲ್ಲರ ಕ್ಷಮೆ ಕೇಳಿ, ಮುಂದೆ ಫ್ಯಾನ್ಸ್‌ ವಾರ್‌ಗೆ ಬರುವುದಿಲ್ಲ ಎಂದಿದ್ದಾರೆ. ’ಫ್ಯಾನ್ ವಾರ್ ನಿಲ್ಲಿಸಿ ಸಾಕು. ಮತ್ತೆ ನಾನು ಫ್ಯಾನ್ಸ್ ವಾರ್‌ಗೆ ಎಂಟ್ರಿ ಆಗಲ್ಲ’ ಎಂದು ದರ್ಶನ್, ಸುದೀಪ್, ಯಶ್ ಅವರನ್ನು ಟ್ಯಾಗ್ ಮಾಡಿ ಎಲ್ಲಾ ನಟರ ಮುಂಬರುವ ಚಿತ್ರಗಳನ್ನು ಹ್ಯಾಶ್‌ಟ್ಯಾಗ್ ಹಾಕಲಾಗಿದೆ.

ನಟರ ಅಭಿಮಾನಿಗಳ ನಿರ್ಣಯಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಟ್ವೀಟ್ ಮಾಡಿ, ’ನನ್ನ ವೈಯಕ್ತಿಕ ಕೋರಿಕೆ ಇಷ್ಟೇ
ಇನ್ನಾದ್ರೂ ಒಂದಷ್ಟು ಅಭಿಮಾನಿಗಳು ಫ್ಯಾನ್ಸ್ ವಾರ್ ಅನ್ನೋದನ್ನ ಬಿಟ್ಟು ಒಂದಾಗಿ ಪ್ರತಿಯೊಬ್ಬ ನಟರು ನಮ್ಮ ಕನ್ನಡಿಗರು, ನಮ್ಮವ್ರು ಅನ್ನೋ ಭಾವನೆಯೊಂದಿಗೆ ಪ್ರೀತಿಸಿ, ಗೌರವಿಸಿ, ಅಭಿಮಾನಿಸಿ ಅನ್ನೋದಷ್ಟೇ ನನ್ನ ಕೋರಿಕೆ. ಅಪ್ಪು ಸಾರ್ ನಮ್ಮೆಲ್ಲರನ್ನು ಬೆಸೆದು ಹೋದರೇನು ಅನ್ನಿಸುತ್ತಿದೆ. ಕನ್ನಡಕ್ಕಾಗಿ ಒಂದಾಗೋಣ” ಎಂದಿದ್ದಾರೆ.

ಇನ್ನು ನವೆಂಬರ್‌ 2 ರಂದು ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳಿಂದ ಸಂಜೆ 6 ಗಂಟೆಗೆ ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #UnitedKFI, #StopFanWars, #unitedsandalwood ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಒಟ್ಟಾರೆ, ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳು ಫ್ಯಾನ್ಸ್ ವಾರ್‌ ಅನ್ನು ಬಿಟ್ಟು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಒಂದಾಗೋಣ ಎನ್ನುತ್ತಿದ್ದಾರೆ. ನಟರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಅಭಿಮಾನಿಗಳ ನಡುವೆ ಈ ವಾರ್‌ ಮುಂದುವರೆಯುತ್ತಲೇ ಇತ್ತು. ಆದರೆ, ಪುನೀತ್ ರಾಜ್‌ಕುಮಾರ್‌ ಅವರ ನಿಧನ ಎಲ್ಲರ ಮನವನ್ನು ಛಿದ್ರಗೊಳಿಸಿದೆ. ಅವರ ಅಂತಿಮ ದರ್ಶನದಲ್ಲಿ ಯಶ್ ಮತ್ತು ಕಿಚ್ಚ ಸುದೀಪ್, ದರ್ಶನ್ ಅವರ ಕಣ್ಣ ಹನಿಗಳು ಅಭಿಮಾನಿಗಳ ಮನಸ್ಸು ಕದಡಿದ್ದು, ಈ ಫ್ಯಾನ್ಸ್ ವಾರ್‌ಗೆ ಅಂತ್ಯಹಾಡಲು ಕಾರಣವಾಗಿದೆ.


ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋದವು ಸಾಲು ಸಾಲು ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...