Homeಕರ್ನಾಟಕಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ನಟರ ಅಭಿಮಾನಿಗಳು ಪರಸ್ಪರ ಕ್ಷಮೆಯಾಚಿಸಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

- Advertisement -
- Advertisement -

ಕಳೆದ ಶುಕ್ರವಾರ (ಅ.29) ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿದ್ದಾರೆ. ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಕುಟುಂಬ ವರ್ಗ, ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿರುವ ಅಪ್ಪು ನಿಧನಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ ಸಮಯವಾಗಿದೆ. ನಟನ ಸಾವು ಎಲ್ಲರಲ್ಲೂ ಬದಲಾವಣೆ ತರುತ್ತಿದೆ ಎಂದರೆ ತಪ್ಪಾಗಲಾರದು.

ನಟ ಯಶ್, ದರ್ಶನ್, ಸುದೀಪ್, ಶಿವರಾಜ್‌ಕುಮಾರ್‌, ಧ್ರುವ ಸರ್ಜಾ ಫ್ಯಾನ್ಸ್‌ಗಳ ನಡುವೆ ಪೈಪೋಟೆ ನಡೆಯುತ್ತಲೆ ಇರುತ್ತದೆ. ಒಂದು ಹಾಡಿನಲ್ಲಿ ಬರುವ ಪದ, ಸಿನಿಮಾದ ಒಂದು ಡೈಲಾಗ್‌, ಚಿತ್ರಮಂದಿರದ ಮುಂದೆ ಹಾಕುವ ಕಟೌಟ್‌…ಹೀಗೆ ಚಿಕ್ಕ ಚಿಕ್ಕ ವಿಷಯಗಳಿಗೂ ಗಲಾಟೆಗಳು ನಡೆಯುತ್ತಲೇ ಇವೆ. ಇವುಗಳಿಗೆ ಕಡಿವಾಣ ಬೀಳುವ ಸಮಯ ಇದು ಎಂಬುದರ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾರಂಗವನ್ನು ಉಳಿಸಲು ಒಟ್ಟಿಗೆ ಸಾಗೋಣ, ಮನುಷ್ಯನನ್ನೆ ಕಳೆದುಕೊಂಡ ಮೇಲೆ ಈ ಜಗಳ ಯಾಕೆ, ಚಿತ್ರರಂಗದ ಅಭಿವೃದ್ಧಿಗೆ ಒಟ್ಟಾಗಿ, ನೆಗೆಟಿವಿಟಿ ಬಿಟ್ಟು ಪಾಸಿಟಿವಿಟಿ ಹಂಚೋಣ ಎಂಬ ಪೋಸ್ಟ್‌ಗಳು ಕಾಣಿಸಿಕೊಂಡಿವೆ.

ನಟ ಸುದೀಪ್ ಅಭಿಮಾನಿಗಳು ತಮ್ಮ ಪೇಜ್‌ನಿಂದ ಬಹಿರಂಗವಾಗಿಯೇ ಕ್ಷಮೆ ಕೇಳಿ ಪತ್ರ ಬಿಡುಗಡೆ ಮಾಡಿದ್ದಾರೆ. ’ಇಷ್ಟು ದಿನ ಬೇರೆ ನಟರನ್ನು ಟ್ರೋಲ್ ಮಾಡಿದಕ್ಕೆ, ಕೆಟ್ಟದಾಗಿ ನಡೆದುಕೊಂಡಿದ್ದಕ್ಕೆ ಕ್ಷಮಿಸಿ, ಫ್ಯಾನ್ಸ್ ವಾರ್ ಬಿಟ್ಟು ಬಿಡೋಣ. ನಾವೆಲ್ಲಾ ಒಂದಾದರೇ ನಮ್ಮ ಚಿತ್ರರಂಗ ಬೆಳೆಯುತ್ತದೆ. ನಮ್ಮ ಒಂದು ದೊಡ್ಡ ಪಿಲ್ಲರ್‌ ಅನ್ನೇ ನಾವು ಕಳೆದುಕೊಂಡಿದ್ದೇವೆ. ದರ್ಶನ್, ಪುನೀತ್‌, ಯಶ್ ಸರ್‌ ಫ್ಯಾನ್ಸ್‌ ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅಭಿಮಾನಿಗಳು ಕೂಡ ಇತರೆ ನಟರನ್ನು ಟ್ರೋಲ್ ಮಾಡಿದಕ್ಕಾಗಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕಿಚ್ಚ ಸುದೀಪ್, ನಟ ಯಶ್ ಅವರನ್ನು ಟ್ರೋಲ್ ಮಾಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.

ಇನ್ನು ದಾಸ ದರ್ಶನ್ ಅಭಿಮಾನಿಗಳು ಕೂಡ ಎಲ್ಲರ ಕ್ಷಮೆ ಕೇಳಿ, ಮುಂದೆ ಫ್ಯಾನ್ಸ್‌ ವಾರ್‌ಗೆ ಬರುವುದಿಲ್ಲ ಎಂದಿದ್ದಾರೆ. ’ಫ್ಯಾನ್ ವಾರ್ ನಿಲ್ಲಿಸಿ ಸಾಕು. ಮತ್ತೆ ನಾನು ಫ್ಯಾನ್ಸ್ ವಾರ್‌ಗೆ ಎಂಟ್ರಿ ಆಗಲ್ಲ’ ಎಂದು ದರ್ಶನ್, ಸುದೀಪ್, ಯಶ್ ಅವರನ್ನು ಟ್ಯಾಗ್ ಮಾಡಿ ಎಲ್ಲಾ ನಟರ ಮುಂಬರುವ ಚಿತ್ರಗಳನ್ನು ಹ್ಯಾಶ್‌ಟ್ಯಾಗ್ ಹಾಕಲಾಗಿದೆ.

ನಟರ ಅಭಿಮಾನಿಗಳ ನಿರ್ಣಯಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಟ್ವೀಟ್ ಮಾಡಿ, ’ನನ್ನ ವೈಯಕ್ತಿಕ ಕೋರಿಕೆ ಇಷ್ಟೇ
ಇನ್ನಾದ್ರೂ ಒಂದಷ್ಟು ಅಭಿಮಾನಿಗಳು ಫ್ಯಾನ್ಸ್ ವಾರ್ ಅನ್ನೋದನ್ನ ಬಿಟ್ಟು ಒಂದಾಗಿ ಪ್ರತಿಯೊಬ್ಬ ನಟರು ನಮ್ಮ ಕನ್ನಡಿಗರು, ನಮ್ಮವ್ರು ಅನ್ನೋ ಭಾವನೆಯೊಂದಿಗೆ ಪ್ರೀತಿಸಿ, ಗೌರವಿಸಿ, ಅಭಿಮಾನಿಸಿ ಅನ್ನೋದಷ್ಟೇ ನನ್ನ ಕೋರಿಕೆ. ಅಪ್ಪು ಸಾರ್ ನಮ್ಮೆಲ್ಲರನ್ನು ಬೆಸೆದು ಹೋದರೇನು ಅನ್ನಿಸುತ್ತಿದೆ. ಕನ್ನಡಕ್ಕಾಗಿ ಒಂದಾಗೋಣ” ಎಂದಿದ್ದಾರೆ.

ಇನ್ನು ನವೆಂಬರ್‌ 2 ರಂದು ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳಿಂದ ಸಂಜೆ 6 ಗಂಟೆಗೆ ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #UnitedKFI, #StopFanWars, #unitedsandalwood ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಒಟ್ಟಾರೆ, ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳು ಫ್ಯಾನ್ಸ್ ವಾರ್‌ ಅನ್ನು ಬಿಟ್ಟು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಒಂದಾಗೋಣ ಎನ್ನುತ್ತಿದ್ದಾರೆ. ನಟರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಅಭಿಮಾನಿಗಳ ನಡುವೆ ಈ ವಾರ್‌ ಮುಂದುವರೆಯುತ್ತಲೇ ಇತ್ತು. ಆದರೆ, ಪುನೀತ್ ರಾಜ್‌ಕುಮಾರ್‌ ಅವರ ನಿಧನ ಎಲ್ಲರ ಮನವನ್ನು ಛಿದ್ರಗೊಳಿಸಿದೆ. ಅವರ ಅಂತಿಮ ದರ್ಶನದಲ್ಲಿ ಯಶ್ ಮತ್ತು ಕಿಚ್ಚ ಸುದೀಪ್, ದರ್ಶನ್ ಅವರ ಕಣ್ಣ ಹನಿಗಳು ಅಭಿಮಾನಿಗಳ ಮನಸ್ಸು ಕದಡಿದ್ದು, ಈ ಫ್ಯಾನ್ಸ್ ವಾರ್‌ಗೆ ಅಂತ್ಯಹಾಡಲು ಕಾರಣವಾಗಿದೆ.


ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋದವು ಸಾಲು ಸಾಲು ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...