Homeಕರ್ನಾಟಕವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು.

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೇ ದೇವಾಲಯದ ಗೋಡೆಗೆ ಮುಜರಾಯಿ ಇಲಾಖೆ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಕಿಡಿಗೇಡಿಗಳು ಮಾಡಿದ್ದರು.

“ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮ ಬೇಧವಿಲ್ಲದೆ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು.

ಈ ಕುರಿತು ‘ನಾನುಗೌರಿ.ಕಾಂ’ ವರದಿ ಮಾಡಿದ ಬಳಿಕ ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದರು. ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ, ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ ದೇವಾಲಯ ಪ್ರವೇಶಿಸುವ ಧೈರ್ಯ ತೋರಿದರು.

ದೇವಾಲಯ ಪ್ರವೇಶ ಸಂದರ್ಭದಲ್ಲಿ ಸೆರೆಹಿಡಿಯಲಾಗಿರುವ ವಿಡಿಯೋ ‘ನಾನುಗೌರಿ.ಕಾಂ’ಗೆ ಲಭ್ಯವಾಗಿದ್ದು, ಯಥಾಸ್ಥಿತಿಯನ್ನೇ ಮುಂದುವರಿಸಬೇಕೆಂದು ಸವರ್ಣೀಯರು ಪ್ರತಿಪಾದಿಸುತ್ತಿರುವುದನ್ನು ಕಾಣಬಹುದು.

“ಇವರಿಗೆ ಯಾವತ್ತಾದರೂ ಪ್ರಸಾದ ಕೊಡುವುದಿಲ್ಲ ಎಂದು ಹೇಳಿದ್ದೇವೆಯೇ? ನಮ್ಮ ಜೊತೆಯಲ್ಲೇ ಕುಳಿತು ನಮ್ಮ ಜನದಂತೆಯೇ ಪ್ರಸಾದ ತೆಗೆದುಕೊಂಡು ಹೋಗುತ್ತಾರೆ” ಎಂದು ಸರ್ವಣೀಯ ಯುವಕರು ಹೇಳುವುದನ್ನು ಕೇಳಬಹುದು.

ಅದಕ್ಕೆ ರೇಣುಕಪ್ಪ ಅವರು, “ಪಂಕ್ತಿಯಿಂದ ಎದ್ದು ಬಂದಿದ್ದೇನೆ” ಎಂದು ಹೇಳುತ್ತಾ ತಮಗಾಗಿರುವ ಜಾತಿ ತಾರತಮ್ಯವನ್ನು ಖಂಡಿಸಿರುವುದನ್ನು ಕಾಣಬಹುದು.

“ಬೋರ್ಡ್‌ ಬರೆಸುತ್ತೇವೆ ಬಿಡಪ್ಪ” ಎಂದು ಕಂದಾಯ ಅಧಿಕಾರಿ ಹೇಳುತ್ತಾರೆ. “ಸರ್‌, ಬೋರ್ಡ್ ಬರೆಸುವುದಷ್ಟೇ ಅಲ್ಲ, ದೇವಾಲಯದೊಳಗೆ ಪ್ರವೇಶವನ್ನೂ ಕೊಡಿಸಬೇಕು” ಎಂದು ಆಗ್ರಹಿಸುತ್ತಾರೆ.

ಸಿಟ್ಟಿಗೆದ್ದ ಸವರ್ಣೀಯರು ತಿರಸ್ಕಾರದಿಂದಲೇ, “ಹೋಗೋ ಪ್ರವೇಶ ಮಾಡು” ಎನ್ನುತ್ತಾರೆ. ರೇಣುಕಪ್ಪ ದೇವಾಲಯ ಪ್ರವೇಶಿಸಿದ್ದಾರೆ. ಅದನ್ನು ಸಹಿಸದ ಸವರ್ಣೀಯ ಯುವಕನೊಬ್ಬ, “ದೇವರು ಶಕ್ತಿ ಇದ್ದರೆ ನಿನ್ನನ್ನು ನೋಡಿಕೊಳ್ಳುತ್ತಾಳೆ” ಎಂದಿದ್ದಾನೆ.

ಬ್ಯಾಲಹಳ್ಳಿಯ ಹಾಲು ಉತ್ಪಾದಕರ ಸಂಘದಲ್ಲಿ ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡುತ್ತಿರಲಿಲ್ಲ. ಹಾಲು ನೀಡಲು ನಿರಾಕರಣೆ ಹಾಗೂ ದೇವಾಲಯದ ಬೋರ್ಡ್ ಅಳಿಸಿ ಹಾಕಿರುವ ಕುರಿತು ನಾನೂಗೌರಿ.ಕಾಂನಲ್ಲಿ ವರದಿ ಮಾಡಲಾಗಿತ್ತು. ಹಾಲಿನ ವಿಚಾರವನ್ನು ದಲಿತ ಮುಖಂಡ ಸಿದ್ದಲಿಂಗಯ್ಯ ಪ್ರಸ್ತಾಪಿಸಿರುವುದನ್ನು ಕಾಣಬಹುದು. “ದೇವಾಲಯ ಪ್ರವೇಶಿಸಿ ನಮಗೇನು ಕೋಟಿ ಎಂಬತ್ತು ಲಕ್ಷ ಬರುವುದಿಲ್ಲ. ಹಾಲನ್ನು ಕೊಡಲು ವ್ಯವಸ್ಥೆ ಮಾಡಿ” ಎಂದು ಸಿದ್ದಲಿಂಗಯ್ಯ ಅಧಿಕಾರಿಗೆ ಆಗ್ರಹಿಸುತ್ತಾರೆ.

“ನಾವು ಪೂಜೆ ಸಾಮಾನು ತಂದಾಗ ಎಲ್ಲರಿಗೂ ಪೂಜೆ ಮಾಡಿಕೊಟ್ಟಂತೆ ನಮಗೂ ಮಾಡಿಕೊಡಬೇಕು” ಎಂದು ರೇಣುಕಪ್ಪ ಆಗ್ರಹಿಸಿದಾಗ, “ಮಾಡಿಕೊಡುತ್ತೇವೆ” ಎಂದು ತಿರಸ್ಕಾರದಿಂದಲೇ ಸವರ್ಣೀಯರು ಒಪ್ಪಿಕೊಂಡಿದ್ದಾರೆ.

ಹಾಲು ಖರೀದಿಗೆ ಅವಕಾಶ: ಕಂದಾಯ ನಿರೀಕ್ಷಕರು ಹಾಲಿನ ಡೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. “ಮಂಗಳವಾರದಿಂದ ದಲಿತರು ಹಾಲು ಖರೀದಿಸಲು ಅವಕಾಶ ನೀಡಿರುವುದು ಕೊಂಚ ಸಮಾಧಾನ ತಂದಿದೆ” ಎಂದು ದಲಿತರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...