Homeಕರ್ನಾಟಕಕೇರಳದ ಮಾಜಿ ಆರೋಗ್ಯ ಸಚಿವೆ ‘ಶೈಲಜಾ ಟೀಚರ್‌’ ಮಂಗಳೂರಿಗೆ!

ಕೇರಳದ ಮಾಜಿ ಆರೋಗ್ಯ ಸಚಿವೆ ‘ಶೈಲಜಾ ಟೀಚರ್‌’ ಮಂಗಳೂರಿಗೆ!

- Advertisement -
- Advertisement -

ಕೇರಳದಲ್ಲಿ ನಿಫಾ ಮತ್ತು ಕೊರೊನಾ ಎರಗಿದಾಗ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಾಜಿ ಆರೋಗ್ಯ ಸಚಿವೆ ‘ಕೆ.ಕೆ. ಶೈಲಜಾ ಟೀಚರ್‌’ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಸಿಪಿಐಎಂ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವೆಂಬರ್‌ 23 ರ ಮಂಗಳವಾರ ಜಿಲ್ಲೆಯ ಗುರುಪುರ ಕೈಕಂಬದಲ್ಲಿ ನಡೆಯಲಿದೆ.

ಅಂದು ನಡೆಯಲಿರುವ ಬಹಿರಂಗ ಸಭೆಯಲ್ಲಿ ಶೈಲಜಾ ಟೀಚರ್‌ ಅವರು ಪ್ರಮುಖ ಭಾಷಣಕಾರರಾಗಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಓಪನ್ ಸೊಸೈಟಿ ಪ್ರಶಸ್ತಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಮಂಗಳೂರು ನಗರ ಸಿಪಿಐಎಂ ಕಾರ್ಯದರ್ಶಿ ಸುನಿಲ್ ಕುಮಾರ್‌ ಬಜಾಲ್, “ಜಿಲ್ಲಾ ಸಮ್ಮೇಳನದ ಅಂಗವಾಗಿ ನಡೆಯಲಿರುವ ಬಹಿರಂಗ ಸಭೆಗೆ ಅವರು ಆಗಮಿಸಲಿದ್ದಾರೆ. ಅಂದು ಶ್ರಮಿಕರು, ಕಾರ್ಮಿಕರು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಮತ್ತು ಬೆಂಬಲಿಗರು ಸೇರಿದಂತೆ ಸುಮಾರು 10 ಸಾವಿರ ಜನರು ಭಾಗವಹಿಸಲಿದ್ದು, ವರ್ಣರಂಜಿತ ರ್‍ಯಾಲಿ ನಡೆಯಲಿದೆ. ಅವರನ್ನು ಉದ್ದೇಶಿಸಿ ಶೈಲಜಾ ಟೀಚರ್‌ ಭಾಷಣ ಮಾಡಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ಕೇರಳದಲ್ಲಿ ನಿಫಾ ಸಾಂಕ್ರಮಿಕವನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಶೈಲಜಾ ಟೀಚರ್‌, ಕೊರೊನಾ ಸಮಯದಲ್ಲೂ ವಿಶ್ವದ ಗಮನ ಸೆಳೆದಿದ್ದರು.

ಅಮೇರಿಕನ್ ಅಸೋಸಿಯೇಷನ್ ​​ಫಾರ್ ದಿ ಅಡ್ವಾನ್ಸ್‌ಮೆಂಟ್ ಆಫ್ ಸೈನ್ಸ್ (ಎಎಎಎಸ್) ನ ವಿಜ್ಞಾನ ನಿಯತಕಾಲಿಕೆಯು, ಕೇರಳ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಅವರನ್ನು “ಭಾರತದ ಕೋವಿಡ್ ಟೀಚರ್” ಎಂದು ಬಣ್ಣಿಸಿತ್ತು. ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ಅವರನ್ನು ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ವಿಶ್ವದ ‘ಟಾಪ್ ಥಿಂಕರ್-2020’ ಎಂದು ಗೌರವಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟವನ್ನು ಸಮರ್ಪಕವಾಗಿ ನಿಭಾಯಿಸಿದ್ದಕ್ಕೆ ಶೈಲಜಾ ಅವರನ್ನು ವಿಶ್ವಸಂಸ್ಥೆಯು ‘ಸಾರ್ವಜನಿಕ ಸೇವಾ ದಿನಾಚರಣೆ’ಯಲ್ಲಿ ಭಾಷಣಕ್ಕಾಗಿ ಆಹ್ವಾನಿಸಿ ಗೌರವಿಸಿತ್ತು. ಅಲ್ಲದೆ ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಸೆಂಟ್ರಲ್ ಯುರೋಪಿಯನ್ ವಿಶ್ವವಿದ್ಯಾಲಯ (CEU) ನೀಡುವ ಓಪನ್ ಸೊಸೈಟಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...