Homeಕರ್ನಾಟಕನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

- Advertisement -
- Advertisement -

ಚಂದನವನದ ರಾಜಕುಮಾರ ಪುನೀತ್ ರಾಜ್‌ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ. ಇದರಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ  ನೇತ್ರಾಲಯದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಭುಜಂಗ ಶೆಟ್ಟಿ ತಿಳಿಸಿದ್ದಾರೆ.

“ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಈ ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾವು ಶುಕ್ರವಾರ ಅಪ್ಪು ಅವರ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ಸಂಗ್ರಹಿಸಿದೆವು. ನಂತರ, ಶುಕ್ರವಾರ ಮತ್ತು ಶನಿವಾರ ಅವರ ಕಣ್ಣುಗಳನ್ನು ಕಸಿ ಮಾಡುವ ಮೂಲಕ ನಾಲ್ವರಿಗೆ ಅಳವಡಿಸಲಾಯಿತು” ಎಂದು ಡಾ.ಭುಜಂಗ ಶೆಟ್ಟಿ ಹೇಳಿದ್ದಾರೆ.

ಯುವ ವಯಸ್ಸಿನಲ್ಲಿಯೇ ಹಠಾತ್ತನೆ ಸಾವನ್ನಪ್ಪಿದ ಪುನೀತ್‌ ರಾಜ್‌ಕುಮಾರ್‌, ತಮ್ಮ ತಂದೆ ಡಾ. ರಾಜ್‌ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಹಾದಿಯಲ್ಲಿಯೇ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ. 2006ರಲ್ಲಿ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು ಮತ್ತು 2017 ರಲ್ಲಿ ಪಾರ್ವತಮ್ಮ ಅವರೂ ನೇತ್ರದಾನ ಮಾಡಿದ್ದರು.

ಇದನ್ನೂ ಓದಿ:   ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಎರಡು ಕಣ್ಣಿನಿಂದ ನಾಲ್ವರಿಗೆ ದೃಷ್ಟಿ ನೀಡಿದ್ದು ಹೇಗೆ..? 

ಪ್ರತಿ ಕಣ್ಣಿನ ಕಾರ್ನಿಯಾವನ್ನು ಅರ್ಧದಷ್ಟು ಕತ್ತರಿಸಿ, ಮುಂಭಾಗದ ಭಾಗವನ್ನು ಒಬ್ಬ ಫಲಾನುಭವಿಗೆ ಮತ್ತು ಎರಡನೇ ಭಾಗವನ್ನು ಇನ್ನೊಬ್ಬರಿಗೆ ನೀಡಲಾಗಿದೆ. ಸರಿಯಾದ ಫಲಾನುಭವಿಗಳನ್ನು ಹುಡುಕುವುದು ಯಾವಾಗಲೂ ಸವಾಲಾಗಿರುತ್ತದೆ. ಏಕೆಂದರೆ ಅವರು ಆ ಕಣ್ಣುಗಳನ್ನು ಅಥವಾ ಕಣ್ಣಿನ ಭಾಗವನ್ನು ಪಡೆಯಲು ಅರ್ಹರಾಗಿರಬೇಕು. ಆದರೆ ಈ ಬಾರಿ ಎಲ್ಲವೂ ಸಾಧ್ಯವಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

“ಕಣ್ಣುಗಳು ಸುಸ್ಥಿತಿಯಲ್ಲಿದ್ದರೆ ನಾಲ್ಕು ಜನರಿಗೆ ದಾನ ಮಾಡಬಹುದು. ಎಲ್ಲಾ ಫಲಾನುಭವಿಗಳ ಕಣ್ಣುಗಳೂ ಈಗ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಪುನೀತ್‌ ಅವರ ಕಣ್ಣಿನ ಬಿಳಿಭಾಗವನ್ನೂ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಅದರಿಂದ ಲಿಂಬಲ್ ಸೆಲ್‌ಗಳನ್ನು ಬೆಳೆಸಿ ಬೇರೆ ರೋಗಿಗಳಿಗೂ ಬಳಸಬಹುದು” ಎಂದು ಡಾ. ಶೆಟ್ಟಿ ವಿವರಿಸಿದ್ದಾರೆ.

ಫಲಾನುಭವಿಗಳೆಲ್ಲರೂ ಕರ್ನಾಟಕ ಮೂಲದ ಯುವಕರೇ ಆಗಿದ್ದು,ಕಣ್ಣುಗಳನ್ನು ಯಾರಿಗೆ ನೀಡಲಾಗಿದೆ ಎಂದು ಹೆಚ್ಚು ವಿವರ ಬಹಿರಂಗಪಡಿಸುವುದಿಲ್ಲ. ಒಬ್ಬ ಯುವತಿ ಮತ್ತು ಮೂವರು ಯುವಕರಿಗೆ ಕಣ್ಣು ನೀಡಲಾಗಿದೆ.  ಐವರು ವೈದ್ಯರ ತಂಡದಿಂದ ಕಸಿ ಮಾಡಲಾಗಿದೆ ಎಂದು ಡಾ.ರಾಜ್‌ಕುಮಾರ್‌ ನೇತ್ರ ಬ್ಯಾಂಕ್‌ನ ವೈದ್ಯಕೀಯ ನಿರ್ದೇಶಕ ಡಾ.ಯತೀಶ್‌ ಶಿವಣ್ಣ ಹೇಳಿದ್ದಾರೆ.

“ಪುನೀತ್‌ ಅವರ ಬಹುಮುಖ ವ್ಯಕ್ತಿತ್ವವನ್ನು ಗುರುತಿಸಲು ನಾವು ನಿರ್ದಿಷ್ಟವಾಗಿ ಅವರ ಕಣ್ಣುಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಬಯಸಿದ್ದೆವು. ಕಣ್ಣು ಕಸಿ ಕಾರ್ಯವು ಬೆಳಿಗ್ಗೆ 11.30ಕ್ಕೆ ಪ್ರಾರಂಭವಾಗಿ ಸಂಜೆ 5.30ರವರೆಗೆ ನಡೆಯಿತು. ಇದು ಸೂಕ್ಷ್ಮ ಶಸ್ತ್ರಚಿಕಿತ್ಸೆಯಾಗಿದ್ದರೂ, ಇದನ್ನು ಬೇಗನೆ ಮಾಡಲಾಯಿತು. ಆದ್ದರಿಂದ, ಜನರು ಇದರ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಡಾ.ರೋಹಿತ್ ಶೆಟ್ಟಿ ಅವರ ನೇತೃತ್ವದಲ್ಲಿ ಡಾ.ಯತೀಶ್ ಶಿವಣ್ಣ, ಪ್ರಾರ್ಥನಾ ಭಂಡಾರಿ, ಡಾ.ಶರೋನ್ ಡಿಸೋಜಾ, ಮತ್ತು ಡಾ.ಹರ್ಷ ನಾಗರಾಜ್ ಅವರು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದಾರೆ. ಕಾರ್ನಿಯಾ ತಂಡದ ಡಾ.ಗೈರಿಕ್ ಕುಂದು ಮತ್ತು ವೀರೇಶ್ ನೆರವು ನೀಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...