Homeಕರ್ನಾಟಕನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

- Advertisement -
- Advertisement -

ಚಂದನವನದ ರಾಜಕುಮಾರ ಪುನೀತ್ ರಾಜ್‌ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ. ಇದರಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ  ನೇತ್ರಾಲಯದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಭುಜಂಗ ಶೆಟ್ಟಿ ತಿಳಿಸಿದ್ದಾರೆ.

“ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಈ ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾವು ಶುಕ್ರವಾರ ಅಪ್ಪು ಅವರ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ಸಂಗ್ರಹಿಸಿದೆವು. ನಂತರ, ಶುಕ್ರವಾರ ಮತ್ತು ಶನಿವಾರ ಅವರ ಕಣ್ಣುಗಳನ್ನು ಕಸಿ ಮಾಡುವ ಮೂಲಕ ನಾಲ್ವರಿಗೆ ಅಳವಡಿಸಲಾಯಿತು” ಎಂದು ಡಾ.ಭುಜಂಗ ಶೆಟ್ಟಿ ಹೇಳಿದ್ದಾರೆ.

ಯುವ ವಯಸ್ಸಿನಲ್ಲಿಯೇ ಹಠಾತ್ತನೆ ಸಾವನ್ನಪ್ಪಿದ ಪುನೀತ್‌ ರಾಜ್‌ಕುಮಾರ್‌, ತಮ್ಮ ತಂದೆ ಡಾ. ರಾಜ್‌ಕುಮಾರ್ ಮತ್ತು ತಾಯಿ ಪಾರ್ವತಮ್ಮ ಅವರ ಹಾದಿಯಲ್ಲಿಯೇ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ. 2006ರಲ್ಲಿ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು ಮತ್ತು 2017 ರಲ್ಲಿ ಪಾರ್ವತಮ್ಮ ಅವರೂ ನೇತ್ರದಾನ ಮಾಡಿದ್ದರು.

ಇದನ್ನೂ ಓದಿ:   ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಎರಡು ಕಣ್ಣಿನಿಂದ ನಾಲ್ವರಿಗೆ ದೃಷ್ಟಿ ನೀಡಿದ್ದು ಹೇಗೆ..? 

ಪ್ರತಿ ಕಣ್ಣಿನ ಕಾರ್ನಿಯಾವನ್ನು ಅರ್ಧದಷ್ಟು ಕತ್ತರಿಸಿ, ಮುಂಭಾಗದ ಭಾಗವನ್ನು ಒಬ್ಬ ಫಲಾನುಭವಿಗೆ ಮತ್ತು ಎರಡನೇ ಭಾಗವನ್ನು ಇನ್ನೊಬ್ಬರಿಗೆ ನೀಡಲಾಗಿದೆ. ಸರಿಯಾದ ಫಲಾನುಭವಿಗಳನ್ನು ಹುಡುಕುವುದು ಯಾವಾಗಲೂ ಸವಾಲಾಗಿರುತ್ತದೆ. ಏಕೆಂದರೆ ಅವರು ಆ ಕಣ್ಣುಗಳನ್ನು ಅಥವಾ ಕಣ್ಣಿನ ಭಾಗವನ್ನು ಪಡೆಯಲು ಅರ್ಹರಾಗಿರಬೇಕು. ಆದರೆ ಈ ಬಾರಿ ಎಲ್ಲವೂ ಸಾಧ್ಯವಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

“ಕಣ್ಣುಗಳು ಸುಸ್ಥಿತಿಯಲ್ಲಿದ್ದರೆ ನಾಲ್ಕು ಜನರಿಗೆ ದಾನ ಮಾಡಬಹುದು. ಎಲ್ಲಾ ಫಲಾನುಭವಿಗಳ ಕಣ್ಣುಗಳೂ ಈಗ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಪುನೀತ್‌ ಅವರ ಕಣ್ಣಿನ ಬಿಳಿಭಾಗವನ್ನೂ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಅದರಿಂದ ಲಿಂಬಲ್ ಸೆಲ್‌ಗಳನ್ನು ಬೆಳೆಸಿ ಬೇರೆ ರೋಗಿಗಳಿಗೂ ಬಳಸಬಹುದು” ಎಂದು ಡಾ. ಶೆಟ್ಟಿ ವಿವರಿಸಿದ್ದಾರೆ.

ಫಲಾನುಭವಿಗಳೆಲ್ಲರೂ ಕರ್ನಾಟಕ ಮೂಲದ ಯುವಕರೇ ಆಗಿದ್ದು,ಕಣ್ಣುಗಳನ್ನು ಯಾರಿಗೆ ನೀಡಲಾಗಿದೆ ಎಂದು ಹೆಚ್ಚು ವಿವರ ಬಹಿರಂಗಪಡಿಸುವುದಿಲ್ಲ. ಒಬ್ಬ ಯುವತಿ ಮತ್ತು ಮೂವರು ಯುವಕರಿಗೆ ಕಣ್ಣು ನೀಡಲಾಗಿದೆ.  ಐವರು ವೈದ್ಯರ ತಂಡದಿಂದ ಕಸಿ ಮಾಡಲಾಗಿದೆ ಎಂದು ಡಾ.ರಾಜ್‌ಕುಮಾರ್‌ ನೇತ್ರ ಬ್ಯಾಂಕ್‌ನ ವೈದ್ಯಕೀಯ ನಿರ್ದೇಶಕ ಡಾ.ಯತೀಶ್‌ ಶಿವಣ್ಣ ಹೇಳಿದ್ದಾರೆ.

“ಪುನೀತ್‌ ಅವರ ಬಹುಮುಖ ವ್ಯಕ್ತಿತ್ವವನ್ನು ಗುರುತಿಸಲು ನಾವು ನಿರ್ದಿಷ್ಟವಾಗಿ ಅವರ ಕಣ್ಣುಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಬಯಸಿದ್ದೆವು. ಕಣ್ಣು ಕಸಿ ಕಾರ್ಯವು ಬೆಳಿಗ್ಗೆ 11.30ಕ್ಕೆ ಪ್ರಾರಂಭವಾಗಿ ಸಂಜೆ 5.30ರವರೆಗೆ ನಡೆಯಿತು. ಇದು ಸೂಕ್ಷ್ಮ ಶಸ್ತ್ರಚಿಕಿತ್ಸೆಯಾಗಿದ್ದರೂ, ಇದನ್ನು ಬೇಗನೆ ಮಾಡಲಾಯಿತು. ಆದ್ದರಿಂದ, ಜನರು ಇದರ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಡಾ.ರೋಹಿತ್ ಶೆಟ್ಟಿ ಅವರ ನೇತೃತ್ವದಲ್ಲಿ ಡಾ.ಯತೀಶ್ ಶಿವಣ್ಣ, ಪ್ರಾರ್ಥನಾ ಭಂಡಾರಿ, ಡಾ.ಶರೋನ್ ಡಿಸೋಜಾ, ಮತ್ತು ಡಾ.ಹರ್ಷ ನಾಗರಾಜ್ ಅವರು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದಾರೆ. ಕಾರ್ನಿಯಾ ತಂಡದ ಡಾ.ಗೈರಿಕ್ ಕುಂದು ಮತ್ತು ವೀರೇಶ್ ನೆರವು ನೀಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...