Homeಮುಖಪುಟಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಗೋವಾದ ಬಿಜೆಪಿ ನಿತ್ಯ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿರುವ ಅವರು ಇದನ್ನು ಅಲ್ಲಿನ ಮಾಜಿ ರಾಜ್ಯಪಾಲರೇ ಬಹಿರಂಗವಾಗಿ ಹೇಳಿದ್ದಾರೆ ಎಂದಿದ್ದಾರೆ.

- Advertisement -
- Advertisement -

ಗೋವಾದಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ ಉಚಿತ ವಿದ್ಯುತ್ ನೀಡಲಾಗುವುದು ಮತ್ತು ಯುವಜನರಿಗೆ ಉದ್ಯೋಗ ಖಾತ್ರಿ ನೀಡಲಾಗುವುದು ಎಂದು ದೆಹಲಿ ಸಿಎಂ ಮತ್ತು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಈಗಾಗಲೇ 1.12 ಲಕ್ಷ ಯುವಜನರು ಉದ್ಯೋಕ ಖಾತ್ರಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. 2.9 ಕುಟುಂಬಗಳು ಉಚಿತ ವಿದ್ಯುತ್ ಗಾಗಿ ನೋಂದಣಿ ಮಾಡಿಕೊಂಡಿವೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಉಚಿತ ಧಾರ್ಮಿಕ ಯಾತ್ರೆಗಳನ್ನು ಆಯೋಜಿಸುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.

ಆಪ್ ಅಧಿಕಾರಕ್ಕೆ ಬಂದರೆ ರಾಮನ ದರ್ಶನಕ್ಕೆ ಅಯೋಧ್ಯಗೆ ಕರೆದೊಯ್ಯುತ್ತೇವೆ. ಕ್ರಿಶ್ಚಿಯನ್ ಸಹೋದರರನ್ನು ವೇಲಂಕಾಣಿಗೆ ಮತ್ತು ಮುಸ್ಲಿಮರನ್ನು ಅಜ್ಮೀರ್ ಶರೀಫ್‌ಗೆ ಕರೆಯೊಯ್ಯಲಾಗುವುದು. ಬಹಳಷ್ಟು ಜನರು ಸಾಯಿ ಬಾಬಾರ ಮೇಲೆ ನಂಬಿಕೆಯಿಟ್ಟಿದ್ದಾರೆ. ಅವರಿಗೆ ಶಿರಡಿಗೆ ಉಚಿತ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

ಗೋವಾದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನಿತ್ಯ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿರುವ ಅವರು ಇದನ್ನು ಅಲ್ಲಿನ ಮಾಜಿ ರಾಜ್ಯಪಾಲರೇ ಬಹಿರಂಗವಾಗಿ ಹೇಳಿದ್ದಾರೆ ಎಂದಿದ್ದಾರೆ. ರಾಜ್ಯಪಾಲರಿಗೆ ರಾಜ್ಯದಲ್ಲಿ ಏನೇನು ನಡೆಯುತ್ತದೆ ಎಂಬುದರ ಮಾಹಿತಿ ಒಳಗಿನಿಂದಲೇ ತಿಳಿದಿರುತ್ತದೆ. ಹಾಗಾಗಿ ಇಲ್ಲಿನ ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಗೆ ಸಿಎಂ ಪ್ರಮೋದ್ ಸಾವಂತ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಹೇಳಿದ್ದಾರೆ. ಸತ್ಯಪಾಲ್‌ರವರು ಸುಮ್ಮನೆ ಮಾತಾಡುವ ವ್ಯಕ್ತಿಯಲ್ಲ. ಗೌರವವುಳ್ಳ ವ್ಯಕ್ತಿಯಾಗಿದ್ದು ಅವರೇ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸತ್ಯಪಾಲ್ ಮಲ್ಲಿಕ್‌ರವರು ಗೋವಾ ಸಿಎಂ ವಿರುದ್ಧ ಮಾತ್ರ ಆರೋಪ ಮಾಡಿಲ್ಲ. ಕೇಂದ್ರ ಸಚಿವರ ವಿರುದ್ಧವೂ ಭ್ರಷ್ಟಾಚಾರದ ಆರೋಪವೊರಿಸಿದ್ದಾರೆ. 1947ರಿಂದ ಇಲ್ಲಿಯವರೆಗೂ ರಾಜ್ಯಪಾಲರು ತಮ್ಮದೇ ಪಕ್ಷದ ಮುಖ್ಯಮಂತ್ರಿಯ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರಲಿಲ್ಲ. ಅದು ಈಗ ಸಂಭವಿಸಿದೆ ಮತ್ತು ಬಿಜೆಪಿ ಬಹಿರಂಗವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: ಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ


2017ರ ವಿಧಾನಸಭಾ ಚುನಾವಣೆಯಲ್ಲಿ ಆಪ್ ಭರ್ಜರಿಯಾಗಿ ಸಿದ್ಧತೆ ನಡೆಸಿ ಎಲ್ಲಾ 40 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿತ್ತು. ಆದರೆ ಒಂದು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲಾ ಕಡೆ ಠೇವಣಿ ಕಳೆದುಕೊಂಡಿತ್ತು. 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ 13 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಹಲವು ಪಕ್ಷಗಳೊಂದಿಗೆ ಮೈತ್ರಿ ಸಾಧಿಸಿ ಬಿಜೆಪಿ ಅಧಿಕಾರ ಹಿಡಿದಿತ್ತು.

2022 ರಲ್ಲಿ ನಡೆಯುವ ಚುನಾವಣೆಗೆ ಕಾಂಗ್ರೆಸ್-ಬಿಜೆಪಿ ಪೈಪೋಟಿ ನಡೆಸಿದರೆ, ಆಪ್ ಜೊತೆಗೆ ಟಿಎಂಸಿ ಸಹ ಕಣಕ್ಕಿಳಿದಿವೆ. ಟಿಎಂಸಿಯ ಮಮತಾ ಬ್ಯಾನರ್ಜಿಯವರು 3 ದಿನ ಗೋವಾ ಪ್ರವಾಸ ನಡೆಸಿದರೆ ಅದೇ ಸಮಯದಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಸಹ ಗೋವಾದಲ್ಲಿ ಕಾರ್ಯಕರ್ತರನ್ನು ಭೇಟಿಯಾಗಿದ್ದರು. ಒಟ್ಟಿನಲ್ಲಿ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನ ಯೂನಿಟ್ ವಿದ್ಯುತ್‌ಗೆ 3 ರೂ ಕಡಿತ ಘೋಷಿಸಿದ ಸಿಎಂ ಚನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...