Homeಮುಖಪುಟಸಾರ್ವಜನಿಕ ಅಸಹಿಷ್ಣುತೆಯಿಂದಾಗಿ 'ಕರ್ವಾ ಚೌತ್‌' ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಸಾರ್ವಜನಿಕ ಅಸಹಿಷ್ಣುತೆಯಿಂದಾಗಿ ‘ಕರ್ವಾ ಚೌತ್‌’ ಜಾಹೀರಾತು ಹಿಂಪಡೆಯಬೇಕಾಯಿತು: ನ್ಯಾ. ಡಿ.ವೈ. ಚಂದ್ರಚೂಡ್‌

ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

- Advertisement -
- Advertisement -

‘ಸಾರ್ವಜನಿಕ ಅಸಹಿಷ್ಣುತೆ’ಯಿಂದಾಗಿ ಸಲಿಂಗ ದಂಪತಿಗಳನ್ನು ಒಳಗೊಂಡಿದ್ದ ಡಾಬರ್‌ ಕಂಪನಿಯ ಕರ್ವಾ ಚೌತ್‌ ಜಾಹೀರಾತನ್ನು ಹಿಂತೆಗೆದುಹಾಕಬೇಕಾಯಿತು ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಮಾಜಿಕ ಅಸಮಾನತೆಗಳನ್ನು ತೆಗೆದುಹಾಕುವ ಉದ್ದೇಶದಿಂದ ರಚಿತವಾದ ಕಾನೂನುಗಳಿಗೂ ಮತ್ತು ಈ ನೆಲದ ವಾಸ್ತವತೆಗೂ ಬಹಳಷ್ಟು ಅಂತರ ಇರುವುದರ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ಮಹಿಳೆಯರಿಗೆ ಕಾನೂನು ಅರಿವು’ ಕುರಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್‌, ‘ಕಾನೂನಿನ ಆದರ್ಶಗಳು ಮತ್ತು ಇಂದಿನ ಸಮಾಜದ ನೈಜ ಸ್ಥಿತಿಯ ನಡುವೆ ದೊಡ್ಡ ಅಂತರವಿದೆ ಎಂದು ತೋರಿಸುವ ನೈಜ ಜೀವನದ ಸನ್ನಿವೇಶಗಳು ಜರುಗುತ್ತಿವೆ’ ಎಂದು ತಿಳಿಸಿದರು.

ಕಳೆದ ವಾರವಷ್ಟೆ ಬಂದಿದ್ದ, ಇಬ್ಬರು ಮಹಿಳೆಯರು ಒಟ್ಟಾಗಿ ಕರ್ವಾ ಚೌತ್‌ ಅನ್ನು ಆಚರಿಸುತ್ತಿರುವ ಜಾಹೀರಾತಿಗೆ ಸಾರ್ವಜನಿಕರಿಂದ ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದ್ದವು. ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಅನೇಕ ಪ್ರಗತಿಪರರು ಈ ಜಾಹೀರಾತನ್ನು ಸ್ವಾಗತಿಸಿದ್ದರೆ, ‌ಒಂದು ವಿಭಾಗ ಜಾಹೀರಾತನ್ನು ಟೀಕಿಸಿತ್ತು. ಬಲಪಂಥೀಯರಲ್ಲಿ ಈ ಜಾಹೀರಾತಿನ ಬಗ್ಗೆ ಕರುಣೆಯಿಲ್ಲದ ರೀತಿಯಲ್ಲಿ ಟ್ರೋಲಿಂಗ್‌ ಮತ್ತು ಬೆದರಿಕೆ ನಡೆದಿತ್ತು. ಇದೆಲ್ಲದರಿಂದಾಗಿ ಡಾಬರ್‌ ಈ ಜಾಹೀರಾತನ್ನು ಹಿಂತೆಗೆದುಕೊಂಡಿದ್ದಲ್ಲದೇ, ಕ್ಷಮೆಯಾಚಿಸಿತ್ತು.

‘ಎರಡು ದಿನಗಳ ಹಿಂದೆ, ಕಂಪನಿಯೊಂದು ‘ಸಲಿಂಗ ದಂಪತಿಗಳ ಕರ್ವಾ ಚೌತ್‌’ ಜಾಹೀರಾತನ್ನು ಹಿಂತೆಗೆದುಕೊಂಡಿದ್ದು ನಿಮ್ಮೆಲ್ಲರಿಗೂ ತಿಳಿದಿರಬಹುದು.  ‘ಸಾರ್ವಜನಿಕ ಅಸಹಿಷ್ಣುತೆ’ಯ ಕಾರಣದಿಂದ ಅದನ್ನು ಹಿಂತೆಗೆದುಕೊಳ್ಳಬೇಕಾಯಿತು’ ಎಂದು ಅವರು ವಿವರಿಸಿದರು.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್‌ ಮಿಶ್ರ ಅವರು ಇತ್ತೀಚಿನ ವಾರಗಳಲ್ಲಿ ಸಿನಿಮಾ ಮತ್ತು ಜಾಹೀರಾತುಗಳಲ್ಲಿ ‘ಆಕ್ಷೇಪಾರ್ಹ’ ವಿಷಯಗಳು ಕಂಡುಬರುತ್ತಿದ್ದು, ಅಂತಹವುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎನ್ನುವ ಮೂಲಕ ಡಾಬರ್‌ ಕಂಪನಿಗೆ ಬೆದರಿಕೆ ಹಾಕಿದ್ದರು.

ಪ್ರತಿದಿನ ಮಹಿಳೆಯರ ಮೇಲೆ ಅನ್ಯಾಯ ನಡೆಯುತ್ತಿರುವುದಕ್ಕೆ ಉದಾಹರಣೆಗಳಿವೆ ಎಂದ ಅವರು, ‘ಭಾರತದಲ್ಲಿ ಆಳವಾಗಿ ಬೇರೂರಿರುವ ಅಸಮಾನತೆಗಳು ಮತ್ತು ಪುರುಷಾಧಿಪತ್ಯಕ್ಕೆ ಸಂವಿಧಾನವು ಪರಿಹಾರಗಳನ್ನು ಹೊಂದಿದೆ. ಯುವ ಪೀಳಿಗೆಯ ಪುರುಷರಲ್ಲಿ ಜಾಗೃತಿ ಮೂಡಿಸಿದರೆ ಮಹಿಳೆಯರ ಹಕ್ಕುಗಳ ಬಗ್ಗೆ ಅರಿವೂ ನಿಜವಾಗಿಯೂ ಅರ್ಥಪೂರ್ಣವಾಗಿರುತ್ತದೆ’ ಎಂದು ಹೇಳಿದರು.

‘ನಮ್ಮ ಸಂವಿಧಾನವು ಪುರುಷಾಧಿಪತ್ಯದಲ್ಲಿ ಬೇರೂರಿರುವ ರಚನಾತ್ಮಕ ಅಸಮಾನತೆಗಳನ್ನು ನಿವಾರಿಸಲು ಪ್ರಯತ್ನಿಸುವ ದಾಖಲೆಯಾಗಿದೆ. ಇದು ಮಹಿಳೆಯರು ಸಮಾನತೆ ಮತ್ತು ಘನತೆಯಿಂದ ಸಾರ್ವಜನಿಕವಾಗಿ ತಮ್ಮ ಹಕ್ಕುಗಳನ್ನು ಚಲಾಯಿಸಲು ಪ್ರಬಲ ಸಾಧನವಾಗಿದೆ. ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಈಡೇರಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಕೌಟುಂಬಿಕ ಹಿಂಸಾಚಾರ ಕಾಯ್ದೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ನಾವು ನಮ್ಮ ಜೀವನದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧ ಅನ್ಯಾಯವನ್ನು ಎದುರಿಸುತ್ತೇವೆ’ ಎಂದು ಹಿರಿಯ ನ್ಯಾಯಾಧೀಶರು ಹೇಳಿದ್ದಾರೆ.


ಇದನ್ನೂ ಓದಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...