Homeಮುಖಪುಟ2070ರ ವೇಳೆಗೆ ಭಾರತದಲ್ಲಿ ಇಂಗಾಲ ವಿಸರ್ಜನೆ ತಟಸ್ಥ; ಮೋದಿ ಭರವಸೆ

2070ರ ವೇಳೆಗೆ ಭಾರತದಲ್ಲಿ ಇಂಗಾಲ ವಿಸರ್ಜನೆ ತಟಸ್ಥ; ಮೋದಿ ಭರವಸೆ

- Advertisement -
- Advertisement -

2070ರ ವೇಳೆಗೆ ಭಾರತವು ನಿವ್ವಳ ಶೂನ್ಯ ಇಂಗಾಲ ಹೊರ ಸೂಸುವಿಕೆಯನ್ನು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಗ್ಲಾಸ್ಗೋದಲ್ಲಿ ನಡೆದ ಕಾನ್ಫರೆನ್ಸ್ ಆಫ್‌ ಪಾರ್ಟೀಸ್‌26 (ಸಿಒಪಿ26) ಶೃಂಗಸಭೆಯಲ್ಲಿ ಭರವಸೆ ನೀಡಿದ್ದಾರೆ.

ಜಾಗತಿಕ ತಾಪಮಾನವನ್ನು ತಡೆಗಟ್ಟಿ ಜಗತ್ತನ್ನು ಉಳಿಸುವ ಶಂಗಸಭೆಯೆಂದೇ ಖ್ಯಾತವಾಗಿದ್ದ ಈ ಸಮಾವೇಶದಲ್ಲಿ, ಹವಾಮಾನ ಪರಿಸ್ಥಿತಿಯನ್ನು ಸುಧಾರಿಸುವ ಭರವಸೆಯನ್ನು ಭಾರತ ಜಗತ್ತಿಗೆ ನೀಡಿದೆ. 2070ರ ವೇಳೆಗೆ ಭಾರತವು ಇಂಗಾಲವನ್ನು ತಟಸ್ಥಗೊಳಿಸುವ ಗುರಿಯನ್ನು ಹೊಂದಿದೆ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

2030ರ ವೇಳೆಗೆ ಭಾರತವು ತನ್ನ ಶಕ್ತಿಯ ಶೇ. 50ರಷ್ಟನ್ನು ನವೀಕರಿಸಬಹುದಾದ ಇಂಧನ ಮೂಲಗಳಿಂದ ಪಡೆಯಲಿದೆ. ಭಾರತವು ತನ್ನ ಇಂಗಾಲದ ಹೊರಸೂಸುವಿಕೆಯನ್ನು 2030ರವರೆಗೆ ಒಂದು ಬಿಲಿಯನ್ ಟನ್‌ಗಳಷ್ಟು ಕಡಿಮೆ ಮಾಡುತ್ತದೆ. ಭಾರತವು 2030ರ ವೇಳೆಗೆ 500 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನವನ್ನು ಸ್ಥಾಪಿಸಲಿದೆ ಎಂದು ತಿಳಿಸಿದ್ದಾರೆ.

ಹವಾಮಾನ ಪರಿಸ್ಥಿತಿಯನ್ನು ಸುಧಾರಿಸಲು, ಶ್ರೀಮಂತ ಅಭಿವೃದ್ಧಿ ಹೊಂದಿದ ದೇಶಗಳು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಮತ್ತು ಹೆಚ್ಚು ದುರ್ಬಲರಿಗೆ ಸಹಾಯ ಮಾಡಲು ಕನಿಷ್ಠ 1 ಟ್ರಿಲಿಯನ್ ಡಾಲರ್‌‌ ಹಣಕಾಸು ಸಹಾಯಹಸ್ತ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಕಾರ್ಬನ್ ತಡೆಯುವ ತಂತ್ರಜ್ಞಾನಗಳು ತುಂಬಾ ದುಬಾರಿಯಾಗಿವೆ. ಹೀಗಾಗಿ ಸದ್ಯಕ್ಕೆ ಕಾರ್ಯಗತಗೊಳಿಸುವುದು ಕಷ್ಟ. ಹೀಗಾಗಿ ಮುಂದಿನ 49 ವರ್ಷಗಳಲ್ಲಿ ಗುರಿ ಮುಟ್ಟುವುದಾಗಿ ಭಾರತ ಹೇಳಿದೆ.

ಭಾರತ ಹಾಗೂ ಇಂಗಾಲ ಸೂಸುವ ಇತರೆ ರಾಷ್ಟ್ರಗಳು ನಿವ್ವಳ ಶೂನ್ಯ ಕಾರ್ಬನ್‌ ಹೊರಸೂಸುವಿಕೆಯ ಗಡುವನ್ನು ತಿಳಿಸಬೇಕು ಎಂದು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಸೂಚಿಸಿದ ಒಂದು ತಿಂಗಳ ಬಳಿಕ ಭಾರತದ ಬದ್ಧತೆ ಹೊರಬಿದ್ದಿದೆ. ಕೇಂದ್ರ ಪರಿಸರ ಸಚಿವಾಲಯದ ಕಾರ್ಯದರ್ಶಿ ಆರ್.ಪಿ.ಗುಪ್ತಾ ಅವರು ಭಾರತವು ನಿವ್ವಳ-ಶೂನ್ಯ ಗುರಿಯನ್ನು ನಿಗದಿಪಡಿಸುವುದಿಲ್ಲ ಎಂದು ಹೇಳಿದ್ದರು. ಏಕೆಂದರೆ ಆ ಗುರಿಯನ್ನು ಸಾಧಿಸುವುದಕ್ಕಿಂತ ಕಡಿಮೆ ಹೊರಸೂಸುವಿಕೆಯ ಮಾರ್ಗವು ಹೆಚ್ಚು ಮುಖ್ಯವೆಂದು ಅವರು ವಾದಿಸಿದ್ದರು.

ಹವಾಮಾನ ಬದಲಾವಣೆಯ ಕುರಿತು ತಜ್ಞರ ನಿರ್ಣಾಯಕ ಸಮಿತಿ – ಯುಎನ್ ಇಂಟರ್‌ಗವರ್ನಮೆಂಟಲ್ ಪ್ಯಾನೆಲ್ ಆನ್ ಕ್ಲೈಮೇಟ್ ಚೇಂಜ್ (ಐಪಿಸಿಸಿ) 2010ರಿಂದ 2030ರ ವೇಳೆಗೆ ಜಾಗತಿಕ ಹೊರಸೂಸುವಿಕೆಗಳು 45%ರಷ್ಟು ಇಳಿಯಬೇಕು ಎಂದು ಈಗಾಗಲೇ ಹೇಳಿದೆ.


ಇದನ್ನೂ ಓದಿರಿ: ಏರುತ್ತಿರುವ ಜಾಗತಿಕ ತಾಪಮಾನ: ಈ ಶತಮಾನದ ಅಂತ್ಯದೊಳಗೆ ಮಂಗಳೂರು-ಮುಂಬೈ ಸಮುದ್ರ ಸಮಾಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...