Homeಕರ್ನಾಟಕಪುನೀತ್‌ ರಾಜ್‌ಕುಮಾರ್‌ಗೆ ಅಪಮಾನ: ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಪುನೀತ್‌ ರಾಜ್‌ಕುಮಾರ್‌ಗೆ ಅಪಮಾನ: ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

- Advertisement -
- Advertisement -

ಪ್ರತಿಭಾನ್ವಿತ ನಟ, ಕನ್ನಡಿಗರ ಅಪ್ಪು ನಮ್ಮನ್ನು ಅಗಲಿ ನಾಲ್ಕು ದಿನಗಳಾಗಿವೆ. ಪುನೀತ್ ಭೌತಿಕವಾಗಿ ನಮ್ಮ ಜೊತೆಗೆ ಇಲ್ಲ ಎಂಬುದನ್ನು ನಂಬುವುದೂ ಕೂಡ ಅಸಾಧ್ಯವೆನಿಸುತ್ತಿದೆ. ಇಂತಹ ಸಮಯದಲ್ಲಿ ಕಿಡಿಗೇಡಿಯೊಬ್ಬ ಪುನೀತ್‌ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದು, ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುನೀತ್‌ ನಿಧನರಾದ ದಿನದಿಂದ ಅಂತ್ಯ ಸಂಸ್ಕಾರದ ದಿನದ ವರೆಗೂ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿತ್ತು. ಡಾ. ರಾಜಕುಮಾರ್ ಸಾವನ್ನಪ್ಪಿದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳು ಮತ್ತೆ ನಡೆಯಬಾರದು, ಅಭಿಮಾನಿಗಳು ಮದ್ಯ ಸೇವಿಸಿ, ಅಚಾತುರ್ಯಗಳನ್ನು ಮಾಡಬಹುದು ಎಂಬ ಮುನ್ನೆಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿತ್ತು.

ಇದನ್ನು ವಿರೋಧಿಸಿದ್ದ ರಿತ್ವಿಕ್ ಎಂಬಾತ, ಹೇಗೋ ಮದ್ಯ ಪಡೆದುಕೊಂಡಿದ್ದ, ತನಗೆ ಮದ್ಯ ಸಿಕ್ಕಿರುವುದಾಗಿ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದ ಆತ, ರಾಜ್​ಕುಮಾರ್​​ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೆನಪಿಟ್ಟುಕೊಳ್ಳಿ. ಮರೆಯಬೇಡಿ. ಯಾಕೆಂದರೆ, ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ನಾವು ಮೂ** ಮಾಡುತ್ತೇವೆ’ ಎಂದು ಬರೆದು ಅವಮಾನ ಮಾಡಿದ್ದರು.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ರಿತ್ವಿಕ್ ಪೋಸ್ಟ್‌ನಿಂದ ಆಕ್ರೋಶಗೊಂಡಿದ್ದ ಅಭಿಮಾನಿಗಳು ಆತನ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು. ಬಳಿಕ ಆರೋಪಿಯ ವಿರುದ್ದ ಬೆಂಗಳೂರು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್ ಮಾಹಿತಿ ನೀಡಿದ್ದಾರೆ.

ಆರೋಪಿ ರಿತ್ವಿಕ್ ಪೋಸ್ಟ್‌ ವಿರುದ್ದ​ ಕಿಚ್ಚ ಸುದೀಪ್​ ಪುತ್ರಿ ಸಾನ್ವಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ‘ಕೇವಲ ಆಲ್ಕೋಹಾಲ್​ಗಾಗಿ ಪುನೀತ್​ ಬಗ್ಗೆ ಇಂಥ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಉಳಿದಿಲ್ಲವೇ?’ ಎಂದು ಸಾನ್ವಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನು ಪುನೀತ್ ರಾಜ್‌ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ. ಇದರಿಂದ ನಾಲ್ವರಿಗೆ ದೃಷ್ಟಿ ಬಂದಿದೆ ಎಂದು ನಾರಾಯಣ  ನೇತ್ರಾಲಯದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಭುಜಂಗ ಶೆಟ್ಟಿ ಸೋಮವಾರ ತಿಳಿಸಿದ್ದರು.


ಇದನ್ನೂ ಓದಿ: ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...