Homeಕರ್ನಾಟಕಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

ಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಜನರು ಹೃದಯದ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿದ್ದಾರೆ. ಹೃದಯ ಪರೀಕ್ಷೆಗೆಂದು ಆಸ್ಪತ್ರೆಗಳಿಗೆ ದೌಡಾಯಿಸುತ್ತಿದ್ದಾರೆ.

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಲವು ಜನರು ಮೊದಲ ಬಾರಿಗೆ ಹೃದ್ರೋಗ ಸಂಬಂಧಿ ಹೊರರೋಗಿಗಳಾಗಿ ಧಾವಿಸಿದ್ದಾರೆ. CT ಆಂಜಿಯೋಗ್ರಾಮ್‌ ಮಾಡಿಸಿಕೊಂಡಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

“ಸಾಮಾನ್ಯವಾಗಿ ದಿನಕ್ಕೆ ಸುಮಾರು 1,200 ರೋಗಿಗಳು ಬರುತ್ತಾರೆ. ರಜೆ ದಿನಗಳಲ್ಲಿ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಕಡಿಮೆ ಹೊರರೋಗಿಗಳು ದಾಖಲಾಗುತ್ತಿದ್ದರು. ಆದರೆ ಆಸ್ಪತ್ರೆಯು ಸೋಮವಾರ ಒಂದೇ ದಿನ ಸುಮಾರು 1,600 ಜನರನ್ನು ಪರೀಕ್ಷಿಸಿದೆ. ಇದು ವೈದ್ಯರು, ದಾದಿಯರು ಮತ್ತು ಸಹಾಯಕ ಸಿಬ್ಬಂದಿಗೆ ಒತ್ತಡ ಉಂಟು ಮಾಡಿದೆ” ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಸೋಮವಾರ ಹೆಚ್ಚಿನ ಸಂಖ್ಯೆಯ ಜನರು ಆಸ್ಪತ್ರೆಗೆ ಆಗಮಿಸಿದ್ದರಿಂದ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೂ ಕಷ್ಟವಾಯಿತು.

ಇದನ್ನೂ ಓದಿರಿ: ಪುನೀತ್‌ ರಾಜ್‌ಕುಮಾರ್‌ಗೆ ಅಪಮಾನ: ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

“ಹೊರರೋಗಿಗಳಾಗಿ ಬಂದವರ ಸಂಖ್ಯೆ ಶೇ. 30ರಷ್ಟು ಹೆಚ್ಚಾಗಿದೆ. ಅದರಲ್ಲಿ ಮೂರನೇ ಒಂದರಷ್ಟು ಮಂದಿಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆಗಳು ಇರಲಿಲ್ಲ. ಶೇ.10ರಿಂದ ಶೇ.20ರಷ್ಟು ಮಂದಿ ಆತಂಕಕ್ಕೆ ಒಳಗಾಗಿ ಆಸ್ಪತ್ರೆಗೆ ಬಂದಿದ್ದರು” ಎಂದು ಹಿರಿಯ ಹೃದ್ರೋಗತಜ್ಞ ಡಾ.ಕೆ.ಎಸ್‌.ರವೀಂದ್ರನಾಥ್‌ ಹೇಳಿದ್ದಾರೆ.

ಡಾ.ಮಂಜುನಾಥ್ ಅವರ ಪ್ರಕಾರ, “ಆಸ್ಪತ್ರೆಗೆ ಭೇಟಿ ನೀಡಿದ ಅನೇಕ ರೋಗಿಗಳು ಪುನೀತ್‌‌ ಸಾವಿನ ಸುದ್ದಿಯಿಂದ ಘಾಸಿಯಾಗಿದ್ದು, ಅದರ ಪರಿಣಾಮವಾಗಿ ರಾತ್ರಿ ಸರಿಯಾಗಿ ನಿದ್ದೆ ಮಾಡಿಲ್ಲ. ಜೊತೆಗೆ ಎದೆ ನೋವು ಅನುಭವಿಸಿದ್ದಾರೆ”.

ಎಚ್‌ಎಎಲ್‌ ಏರ್‌ಪೋರ್ಟ್ ರಸ್ತೆಯಲ್ಲಿನ ಮಣಿಪಾಲ್‌ ಆಸ್ಪತ್ರೆಯ ವೈದ್ಯರಾದ ಡಾ.ರಂಜನ್‌ ಶೆಟ್ಟಿ ಅವರ ಪ್ರಕಾರ, ಡಜನ್‌ಗಟ್ಟಲೆ ರೋಗಿಗಳು 20-45 ವರ್ಷ ವಯಸ್ಸಿನವರಾಗಿದ್ದರು. ಸಕ್ರ ವರ್ಡ್ ಆಸ್ಪತ್ರೆಯ ಡಾ.ಶ್ರೀಕಂಠ ಬಿ.ಶೆಟ್ಟಿ ಅವರು, “30 ವರ್ಷ ವಯೋಮಾನದ ಹೆಚ್ಚು ಮಂದಿ ಆಸ್ಪತ್ರೆಗೆ ಧಾವಿಸಿದ್ದರು” ಎಂದು ತಿಳಿಸಿದ್ದಾರೆ.

“ತಮ್ಮ ಜೀವನದಲ್ಲಿ ಎಂದಿಗೂ ವರ್ಕ್‌‌ಔಟ್‌ ಮಾಡದ, ಇತ್ತೀಚೆಗೆ ಜಿಮ್‌ಗೆ ಸೇರಿದವರು ಕಠಿಣ ವ್ಯಾಯಾಮದ ಕಾರಣ ಎದೆನೋವು ಎಂದು ಆಸ್ಪತ್ರೆಗೆ ಬರುತ್ತಿದ್ದಾರೆ. ಹೃದಯವನ್ನು ಸುಸ್ಥಿತಿಯಲ್ಲಿ ಇಡಲು ಜೀವನಕ್ರಮವನ್ನು ಅನುಸರಿಸಬೇಕು. ನಾವು ಆರೋಗ್ಯಕರ ಆಯ್ಕೆಗಳನ್ನು ಮಾಡಿಕೊಳ್ಳಬೇಕಾಗಿದೆ” ಎಂದಿದ್ದಾರೆ ಡಾ.ಶೆಟ್ಟಿ.

‘ನಾನುಗೌರಿ.ಕಾಂ’ ಜೊತೆ ಮಾತಾಡಿದ ಆಸ್ಟರ್‌ ಸಿಎಂಐ ಆಸ್ಪತ್ರೆಯ ಡಾ.ಸಂಜಯ್‌ ಭಟ್‌ ಅವರು, “ಜನ ಪ್ಯಾನಿಕ್ ಆಗುತ್ತಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗಳು ಇದ್ದೇ ಇರುತ್ತವೆ. ವಾಸ್ತವದಲ್ಲಿ ಕಾಲಕಾಲಕ್ಕೆ ಹೃದಯವನ್ನು ಪರೀಕ್ಷಿಸಿಕೊಳ್ಳುವುದು ಅಗತ್ಯ. ಕೊಲಸ್ಟ್ರಾಲ್‌, ಸಕ್ಕರೆ ಅಂಶವನ್ನು ಪರೀಕ್ಷಿಸಿಕೊಳ್ಳಬೇಕು. 40 ವರ್ಷ ದಾಟಿದ ಮೇಲೆ ವರ್ಷಕ್ಕೊಮ್ಮೆ ಇಸಿಜಿ ಮಾಡಿಸಿಕೊಳ್ಳಬೇಕು. ಜನ ಕಾಳಜಿ ವಹಿಸಬೇಕು. ಆದರೆ ಪ್ಯಾನಿಕ್ ಆಗುವ ಅಗತ್ಯವೇನೂ ಇಲ್ಲ. ಪುನೀತ್‌ ರಾಜ್‌ಕುಮಾರ್‌ ಅವರಿಗೆ ಹೃದಯಾಘಾತವಾಯಿತು ಎಂದ ಮಾತ್ರಕ್ಕೆ ಎಲ್ಲರಿಗೂ ಆಗುತ್ತೆ ಎಂದೇನಿಲ್ಲ” ಎಂದರು.

 ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

“ವ್ಯಾಯಾಮವನ್ನು ಮಿತಿಮೀರಿಯೂ ಮಾಡಬಾರದು. ವ್ಯಾಯಾಮ ಮಾಡದೆ ಒಂದೇ ಕಡೆ ಕೂತರೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತವೆ. ಮಧ್ಯಮ ಪ್ರಮಾಣದಲ್ಲಿ ವ್ಯಾಯಾಮವನ್ನು ಮಾಡಬೇಕು. ದಿನಕ್ಕೆ ಒಂದು ಗಂಟೆಯಂತೆ, ವಾರದಲ್ಲಿ ಕನಿಷ್ಠ ಐದು ಗಂಟೆ ಮಾಡಬಹುದು. ದಿನಕ್ಕೆ ಎರಡು ಅಥವಾ ಮೂರು ಗಂಟೆ ವ್ಯಾಯಾಮ ಮಾಡುವವರಿಗೂ, ಮ್ಯಾರಾಥಾನ್‌ ಓಡುವವರಿಗೂ ಹೃದಯ ಸಂಬಂಧಿ ಕಾಯಿಲೆ ಉಂಟಾಗಬಹುದು” ಎನ್ನುತ್ತಾರೆ ಡಾ.ಸಂಜಯ್‌.

“ಮೊದಲೇ ಹೃದಯ ಸಮಸ್ಯೆ ಇರುವವರು ನಿಗದಿತವಾಗಿ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕು. ಆದರೆ ಹೆದರಿಕೊಂಡು ಎಲ್ಲರೂ ದಿಢೀರನೇ ಡಾಕ್ಟರ್‌ ಬಳಿ ಹೋಗುವ ಅಗತ್ಯವಿಲ್ಲ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ಪ್ಯಾನಿಕ್‌ ಆಗುತ್ತಿದ್ದಾರೆ. ಯುವಜನರು ಧೂಮಪಾನ ಬಿಟ್ಟರೆ ಸಾಕು. ಗಾಬರಿಯಾಗುವ ಅಗತ್ಯವಿಲ್ಲ. ಅತಿಯಾದ ತೂಕ ಇರಬಾರದು. ಮಧುಮೇಹ ಇರುವವರು ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಫ್ಯಾಟ್‌ ಫುಡ್‌, ಕರಿದ ಪದಾರ್ಥ ಸೇವಿಸುವುದು ಕಡಿಮೆ ಮಾಡಬೇಕು” ಎಂದು ತಿಳಿಸಿದರು.

ಪುನೀತ್‌ ನಿಧನ: ಜನರಲ್ಲಿ ಭೀತಿ ಹುಟ್ಟಿಸಿ ದುಡ್ಡು ಕೀಳಲು ಯತ್ನ

ಪುನೀತ್ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನೇ ಬಂಡವಾಳ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ಹೊರಟಿವೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

ಕ್ರೆಡೆನ್‌ ಡಯಗ್ನಾಟಿಕ್ಸ್‌ ಎಂಬ ಸಂಸ್ಥೆಯ ಹೆಸರಿನ ಬ್ಯಾನರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಪುನೀತ್ ರಾಜ್‌ಕುಮಾರ್‌ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿರುವ ಸದರಿ ಸಂಸ್ಥೆಯು, “ಇಸಿಜಿ, ಆರ್‌ಬಿಎಸ್‌, ಕ್ರಿಟಿನೈನ್‌‌, ಬಿಪಿ, ಕೊಲಸ್ಟ್ರಾಲ್‌ ಪರೀಕ್ಷೆ ಮಾಡಿಸಿಕೊಳ್ಳಿ. ಆಫರ್‌ ಫ್ರೈಸ್‌ 300 ರೂ.” ಹೇಳಿದೆ. ಅಕ್ಟೋಬರ್‌ 31ರಂದು ತಪಾಸಣೆ ಶಿಬಿರವನ್ನು ಕೈಗೊಂಡಿರುವುದಾಗಿ ತಿಳಿಸಿರುವ ಈ ಬ್ಯಾನರ್‌‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಬರಹಗಾರ ಧನಂಜಯ್ ಎನ್. ಅವರು ಫೇಸ್‌ಬುಕ್‌ ಪೋಸ್ಟ್ ಹಾಕಿ ಕಟುವಾಗಿ ಟೀಕಿಸಿದ್ದಾರೆ.

ಹೃದಯ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದು ತಪ್ಪಲ್ಲ, ಆದರೆ ನಮ್ಮತ್ರ ಚೆಕ್ ಮಾಡಿಸಿಕೊಳ್ಳಿ ಅಂತ ಆಫರ್ ಇಟ್ಟು ಬಂಡವಾಳ ಮಾಡಿಕೊಳ್ಳುತ್ತಿರುವುದು ದೊಡ್ಡ ತಪ್ಪು” ಎಂದು ಶಿವರಾಜ್‌ ಮೋತಿ ಅಭಿಪ್ರಾಯಟ್ಟಿದ್ದಾರೆ.


ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...