Homeಕರ್ನಾಟಕಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

ಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಜನರು ಹೃದಯದ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿದ್ದಾರೆ. ಹೃದಯ ಪರೀಕ್ಷೆಗೆಂದು ಆಸ್ಪತ್ರೆಗಳಿಗೆ ದೌಡಾಯಿಸುತ್ತಿದ್ದಾರೆ.

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಲವು ಜನರು ಮೊದಲ ಬಾರಿಗೆ ಹೃದ್ರೋಗ ಸಂಬಂಧಿ ಹೊರರೋಗಿಗಳಾಗಿ ಧಾವಿಸಿದ್ದಾರೆ. CT ಆಂಜಿಯೋಗ್ರಾಮ್‌ ಮಾಡಿಸಿಕೊಂಡಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

“ಸಾಮಾನ್ಯವಾಗಿ ದಿನಕ್ಕೆ ಸುಮಾರು 1,200 ರೋಗಿಗಳು ಬರುತ್ತಾರೆ. ರಜೆ ದಿನಗಳಲ್ಲಿ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಕಡಿಮೆ ಹೊರರೋಗಿಗಳು ದಾಖಲಾಗುತ್ತಿದ್ದರು. ಆದರೆ ಆಸ್ಪತ್ರೆಯು ಸೋಮವಾರ ಒಂದೇ ದಿನ ಸುಮಾರು 1,600 ಜನರನ್ನು ಪರೀಕ್ಷಿಸಿದೆ. ಇದು ವೈದ್ಯರು, ದಾದಿಯರು ಮತ್ತು ಸಹಾಯಕ ಸಿಬ್ಬಂದಿಗೆ ಒತ್ತಡ ಉಂಟು ಮಾಡಿದೆ” ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಸೋಮವಾರ ಹೆಚ್ಚಿನ ಸಂಖ್ಯೆಯ ಜನರು ಆಸ್ಪತ್ರೆಗೆ ಆಗಮಿಸಿದ್ದರಿಂದ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೂ ಕಷ್ಟವಾಯಿತು.

ಇದನ್ನೂ ಓದಿರಿ: ಪುನೀತ್‌ ರಾಜ್‌ಕುಮಾರ್‌ಗೆ ಅಪಮಾನ: ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

“ಹೊರರೋಗಿಗಳಾಗಿ ಬಂದವರ ಸಂಖ್ಯೆ ಶೇ. 30ರಷ್ಟು ಹೆಚ್ಚಾಗಿದೆ. ಅದರಲ್ಲಿ ಮೂರನೇ ಒಂದರಷ್ಟು ಮಂದಿಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆಗಳು ಇರಲಿಲ್ಲ. ಶೇ.10ರಿಂದ ಶೇ.20ರಷ್ಟು ಮಂದಿ ಆತಂಕಕ್ಕೆ ಒಳಗಾಗಿ ಆಸ್ಪತ್ರೆಗೆ ಬಂದಿದ್ದರು” ಎಂದು ಹಿರಿಯ ಹೃದ್ರೋಗತಜ್ಞ ಡಾ.ಕೆ.ಎಸ್‌.ರವೀಂದ್ರನಾಥ್‌ ಹೇಳಿದ್ದಾರೆ.

ಡಾ.ಮಂಜುನಾಥ್ ಅವರ ಪ್ರಕಾರ, “ಆಸ್ಪತ್ರೆಗೆ ಭೇಟಿ ನೀಡಿದ ಅನೇಕ ರೋಗಿಗಳು ಪುನೀತ್‌‌ ಸಾವಿನ ಸುದ್ದಿಯಿಂದ ಘಾಸಿಯಾಗಿದ್ದು, ಅದರ ಪರಿಣಾಮವಾಗಿ ರಾತ್ರಿ ಸರಿಯಾಗಿ ನಿದ್ದೆ ಮಾಡಿಲ್ಲ. ಜೊತೆಗೆ ಎದೆ ನೋವು ಅನುಭವಿಸಿದ್ದಾರೆ”.

ಎಚ್‌ಎಎಲ್‌ ಏರ್‌ಪೋರ್ಟ್ ರಸ್ತೆಯಲ್ಲಿನ ಮಣಿಪಾಲ್‌ ಆಸ್ಪತ್ರೆಯ ವೈದ್ಯರಾದ ಡಾ.ರಂಜನ್‌ ಶೆಟ್ಟಿ ಅವರ ಪ್ರಕಾರ, ಡಜನ್‌ಗಟ್ಟಲೆ ರೋಗಿಗಳು 20-45 ವರ್ಷ ವಯಸ್ಸಿನವರಾಗಿದ್ದರು. ಸಕ್ರ ವರ್ಡ್ ಆಸ್ಪತ್ರೆಯ ಡಾ.ಶ್ರೀಕಂಠ ಬಿ.ಶೆಟ್ಟಿ ಅವರು, “30 ವರ್ಷ ವಯೋಮಾನದ ಹೆಚ್ಚು ಮಂದಿ ಆಸ್ಪತ್ರೆಗೆ ಧಾವಿಸಿದ್ದರು” ಎಂದು ತಿಳಿಸಿದ್ದಾರೆ.

“ತಮ್ಮ ಜೀವನದಲ್ಲಿ ಎಂದಿಗೂ ವರ್ಕ್‌‌ಔಟ್‌ ಮಾಡದ, ಇತ್ತೀಚೆಗೆ ಜಿಮ್‌ಗೆ ಸೇರಿದವರು ಕಠಿಣ ವ್ಯಾಯಾಮದ ಕಾರಣ ಎದೆನೋವು ಎಂದು ಆಸ್ಪತ್ರೆಗೆ ಬರುತ್ತಿದ್ದಾರೆ. ಹೃದಯವನ್ನು ಸುಸ್ಥಿತಿಯಲ್ಲಿ ಇಡಲು ಜೀವನಕ್ರಮವನ್ನು ಅನುಸರಿಸಬೇಕು. ನಾವು ಆರೋಗ್ಯಕರ ಆಯ್ಕೆಗಳನ್ನು ಮಾಡಿಕೊಳ್ಳಬೇಕಾಗಿದೆ” ಎಂದಿದ್ದಾರೆ ಡಾ.ಶೆಟ್ಟಿ.

‘ನಾನುಗೌರಿ.ಕಾಂ’ ಜೊತೆ ಮಾತಾಡಿದ ಆಸ್ಟರ್‌ ಸಿಎಂಐ ಆಸ್ಪತ್ರೆಯ ಡಾ.ಸಂಜಯ್‌ ಭಟ್‌ ಅವರು, “ಜನ ಪ್ಯಾನಿಕ್ ಆಗುತ್ತಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗಳು ಇದ್ದೇ ಇರುತ್ತವೆ. ವಾಸ್ತವದಲ್ಲಿ ಕಾಲಕಾಲಕ್ಕೆ ಹೃದಯವನ್ನು ಪರೀಕ್ಷಿಸಿಕೊಳ್ಳುವುದು ಅಗತ್ಯ. ಕೊಲಸ್ಟ್ರಾಲ್‌, ಸಕ್ಕರೆ ಅಂಶವನ್ನು ಪರೀಕ್ಷಿಸಿಕೊಳ್ಳಬೇಕು. 40 ವರ್ಷ ದಾಟಿದ ಮೇಲೆ ವರ್ಷಕ್ಕೊಮ್ಮೆ ಇಸಿಜಿ ಮಾಡಿಸಿಕೊಳ್ಳಬೇಕು. ಜನ ಕಾಳಜಿ ವಹಿಸಬೇಕು. ಆದರೆ ಪ್ಯಾನಿಕ್ ಆಗುವ ಅಗತ್ಯವೇನೂ ಇಲ್ಲ. ಪುನೀತ್‌ ರಾಜ್‌ಕುಮಾರ್‌ ಅವರಿಗೆ ಹೃದಯಾಘಾತವಾಯಿತು ಎಂದ ಮಾತ್ರಕ್ಕೆ ಎಲ್ಲರಿಗೂ ಆಗುತ್ತೆ ಎಂದೇನಿಲ್ಲ” ಎಂದರು.

 ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

“ವ್ಯಾಯಾಮವನ್ನು ಮಿತಿಮೀರಿಯೂ ಮಾಡಬಾರದು. ವ್ಯಾಯಾಮ ಮಾಡದೆ ಒಂದೇ ಕಡೆ ಕೂತರೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತವೆ. ಮಧ್ಯಮ ಪ್ರಮಾಣದಲ್ಲಿ ವ್ಯಾಯಾಮವನ್ನು ಮಾಡಬೇಕು. ದಿನಕ್ಕೆ ಒಂದು ಗಂಟೆಯಂತೆ, ವಾರದಲ್ಲಿ ಕನಿಷ್ಠ ಐದು ಗಂಟೆ ಮಾಡಬಹುದು. ದಿನಕ್ಕೆ ಎರಡು ಅಥವಾ ಮೂರು ಗಂಟೆ ವ್ಯಾಯಾಮ ಮಾಡುವವರಿಗೂ, ಮ್ಯಾರಾಥಾನ್‌ ಓಡುವವರಿಗೂ ಹೃದಯ ಸಂಬಂಧಿ ಕಾಯಿಲೆ ಉಂಟಾಗಬಹುದು” ಎನ್ನುತ್ತಾರೆ ಡಾ.ಸಂಜಯ್‌.

“ಮೊದಲೇ ಹೃದಯ ಸಮಸ್ಯೆ ಇರುವವರು ನಿಗದಿತವಾಗಿ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕು. ಆದರೆ ಹೆದರಿಕೊಂಡು ಎಲ್ಲರೂ ದಿಢೀರನೇ ಡಾಕ್ಟರ್‌ ಬಳಿ ಹೋಗುವ ಅಗತ್ಯವಿಲ್ಲ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ಪ್ಯಾನಿಕ್‌ ಆಗುತ್ತಿದ್ದಾರೆ. ಯುವಜನರು ಧೂಮಪಾನ ಬಿಟ್ಟರೆ ಸಾಕು. ಗಾಬರಿಯಾಗುವ ಅಗತ್ಯವಿಲ್ಲ. ಅತಿಯಾದ ತೂಕ ಇರಬಾರದು. ಮಧುಮೇಹ ಇರುವವರು ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಫ್ಯಾಟ್‌ ಫುಡ್‌, ಕರಿದ ಪದಾರ್ಥ ಸೇವಿಸುವುದು ಕಡಿಮೆ ಮಾಡಬೇಕು” ಎಂದು ತಿಳಿಸಿದರು.

ಪುನೀತ್‌ ನಿಧನ: ಜನರಲ್ಲಿ ಭೀತಿ ಹುಟ್ಟಿಸಿ ದುಡ್ಡು ಕೀಳಲು ಯತ್ನ

ಪುನೀತ್ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನೇ ಬಂಡವಾಳ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ಹೊರಟಿವೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

ಕ್ರೆಡೆನ್‌ ಡಯಗ್ನಾಟಿಕ್ಸ್‌ ಎಂಬ ಸಂಸ್ಥೆಯ ಹೆಸರಿನ ಬ್ಯಾನರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಪುನೀತ್ ರಾಜ್‌ಕುಮಾರ್‌ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿರುವ ಸದರಿ ಸಂಸ್ಥೆಯು, “ಇಸಿಜಿ, ಆರ್‌ಬಿಎಸ್‌, ಕ್ರಿಟಿನೈನ್‌‌, ಬಿಪಿ, ಕೊಲಸ್ಟ್ರಾಲ್‌ ಪರೀಕ್ಷೆ ಮಾಡಿಸಿಕೊಳ್ಳಿ. ಆಫರ್‌ ಫ್ರೈಸ್‌ 300 ರೂ.” ಹೇಳಿದೆ. ಅಕ್ಟೋಬರ್‌ 31ರಂದು ತಪಾಸಣೆ ಶಿಬಿರವನ್ನು ಕೈಗೊಂಡಿರುವುದಾಗಿ ತಿಳಿಸಿರುವ ಈ ಬ್ಯಾನರ್‌‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಬರಹಗಾರ ಧನಂಜಯ್ ಎನ್. ಅವರು ಫೇಸ್‌ಬುಕ್‌ ಪೋಸ್ಟ್ ಹಾಕಿ ಕಟುವಾಗಿ ಟೀಕಿಸಿದ್ದಾರೆ.

ಹೃದಯ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದು ತಪ್ಪಲ್ಲ, ಆದರೆ ನಮ್ಮತ್ರ ಚೆಕ್ ಮಾಡಿಸಿಕೊಳ್ಳಿ ಅಂತ ಆಫರ್ ಇಟ್ಟು ಬಂಡವಾಳ ಮಾಡಿಕೊಳ್ಳುತ್ತಿರುವುದು ದೊಡ್ಡ ತಪ್ಪು” ಎಂದು ಶಿವರಾಜ್‌ ಮೋತಿ ಅಭಿಪ್ರಾಯಟ್ಟಿದ್ದಾರೆ.


ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...