Homeಕರ್ನಾಟಕಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

ಅಪ್ಪು ನಿಧನ: ಹೃದಯಾಘಾತದ ಬಗ್ಗೆ ಪ್ಯಾನಿಕ್‌ ಆಗುವ ಅಗತ್ಯವಿಲ್ಲ- ವೈದ್ಯರು

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಜನರು ಹೃದಯದ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿದ್ದಾರೆ. ಹೃದಯ ಪರೀಕ್ಷೆಗೆಂದು ಆಸ್ಪತ್ರೆಗಳಿಗೆ ದೌಡಾಯಿಸುತ್ತಿದ್ದಾರೆ.

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಹಲವು ಜನರು ಮೊದಲ ಬಾರಿಗೆ ಹೃದ್ರೋಗ ಸಂಬಂಧಿ ಹೊರರೋಗಿಗಳಾಗಿ ಧಾವಿಸಿದ್ದಾರೆ. CT ಆಂಜಿಯೋಗ್ರಾಮ್‌ ಮಾಡಿಸಿಕೊಂಡಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

“ಸಾಮಾನ್ಯವಾಗಿ ದಿನಕ್ಕೆ ಸುಮಾರು 1,200 ರೋಗಿಗಳು ಬರುತ್ತಾರೆ. ರಜೆ ದಿನಗಳಲ್ಲಿ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಕಡಿಮೆ ಹೊರರೋಗಿಗಳು ದಾಖಲಾಗುತ್ತಿದ್ದರು. ಆದರೆ ಆಸ್ಪತ್ರೆಯು ಸೋಮವಾರ ಒಂದೇ ದಿನ ಸುಮಾರು 1,600 ಜನರನ್ನು ಪರೀಕ್ಷಿಸಿದೆ. ಇದು ವೈದ್ಯರು, ದಾದಿಯರು ಮತ್ತು ಸಹಾಯಕ ಸಿಬ್ಬಂದಿಗೆ ಒತ್ತಡ ಉಂಟು ಮಾಡಿದೆ” ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಸೋಮವಾರ ಹೆಚ್ಚಿನ ಸಂಖ್ಯೆಯ ಜನರು ಆಸ್ಪತ್ರೆಗೆ ಆಗಮಿಸಿದ್ದರಿಂದ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದೂ ಕಷ್ಟವಾಯಿತು.

ಇದನ್ನೂ ಓದಿರಿ: ಪುನೀತ್‌ ರಾಜ್‌ಕುಮಾರ್‌ಗೆ ಅಪಮಾನ: ಆರೋಪಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

“ಹೊರರೋಗಿಗಳಾಗಿ ಬಂದವರ ಸಂಖ್ಯೆ ಶೇ. 30ರಷ್ಟು ಹೆಚ್ಚಾಗಿದೆ. ಅದರಲ್ಲಿ ಮೂರನೇ ಒಂದರಷ್ಟು ಮಂದಿಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆಗಳು ಇರಲಿಲ್ಲ. ಶೇ.10ರಿಂದ ಶೇ.20ರಷ್ಟು ಮಂದಿ ಆತಂಕಕ್ಕೆ ಒಳಗಾಗಿ ಆಸ್ಪತ್ರೆಗೆ ಬಂದಿದ್ದರು” ಎಂದು ಹಿರಿಯ ಹೃದ್ರೋಗತಜ್ಞ ಡಾ.ಕೆ.ಎಸ್‌.ರವೀಂದ್ರನಾಥ್‌ ಹೇಳಿದ್ದಾರೆ.

ಡಾ.ಮಂಜುನಾಥ್ ಅವರ ಪ್ರಕಾರ, “ಆಸ್ಪತ್ರೆಗೆ ಭೇಟಿ ನೀಡಿದ ಅನೇಕ ರೋಗಿಗಳು ಪುನೀತ್‌‌ ಸಾವಿನ ಸುದ್ದಿಯಿಂದ ಘಾಸಿಯಾಗಿದ್ದು, ಅದರ ಪರಿಣಾಮವಾಗಿ ರಾತ್ರಿ ಸರಿಯಾಗಿ ನಿದ್ದೆ ಮಾಡಿಲ್ಲ. ಜೊತೆಗೆ ಎದೆ ನೋವು ಅನುಭವಿಸಿದ್ದಾರೆ”.

ಎಚ್‌ಎಎಲ್‌ ಏರ್‌ಪೋರ್ಟ್ ರಸ್ತೆಯಲ್ಲಿನ ಮಣಿಪಾಲ್‌ ಆಸ್ಪತ್ರೆಯ ವೈದ್ಯರಾದ ಡಾ.ರಂಜನ್‌ ಶೆಟ್ಟಿ ಅವರ ಪ್ರಕಾರ, ಡಜನ್‌ಗಟ್ಟಲೆ ರೋಗಿಗಳು 20-45 ವರ್ಷ ವಯಸ್ಸಿನವರಾಗಿದ್ದರು. ಸಕ್ರ ವರ್ಡ್ ಆಸ್ಪತ್ರೆಯ ಡಾ.ಶ್ರೀಕಂಠ ಬಿ.ಶೆಟ್ಟಿ ಅವರು, “30 ವರ್ಷ ವಯೋಮಾನದ ಹೆಚ್ಚು ಮಂದಿ ಆಸ್ಪತ್ರೆಗೆ ಧಾವಿಸಿದ್ದರು” ಎಂದು ತಿಳಿಸಿದ್ದಾರೆ.

“ತಮ್ಮ ಜೀವನದಲ್ಲಿ ಎಂದಿಗೂ ವರ್ಕ್‌‌ಔಟ್‌ ಮಾಡದ, ಇತ್ತೀಚೆಗೆ ಜಿಮ್‌ಗೆ ಸೇರಿದವರು ಕಠಿಣ ವ್ಯಾಯಾಮದ ಕಾರಣ ಎದೆನೋವು ಎಂದು ಆಸ್ಪತ್ರೆಗೆ ಬರುತ್ತಿದ್ದಾರೆ. ಹೃದಯವನ್ನು ಸುಸ್ಥಿತಿಯಲ್ಲಿ ಇಡಲು ಜೀವನಕ್ರಮವನ್ನು ಅನುಸರಿಸಬೇಕು. ನಾವು ಆರೋಗ್ಯಕರ ಆಯ್ಕೆಗಳನ್ನು ಮಾಡಿಕೊಳ್ಳಬೇಕಾಗಿದೆ” ಎಂದಿದ್ದಾರೆ ಡಾ.ಶೆಟ್ಟಿ.

‘ನಾನುಗೌರಿ.ಕಾಂ’ ಜೊತೆ ಮಾತಾಡಿದ ಆಸ್ಟರ್‌ ಸಿಎಂಐ ಆಸ್ಪತ್ರೆಯ ಡಾ.ಸಂಜಯ್‌ ಭಟ್‌ ಅವರು, “ಜನ ಪ್ಯಾನಿಕ್ ಆಗುತ್ತಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗಳು ಇದ್ದೇ ಇರುತ್ತವೆ. ವಾಸ್ತವದಲ್ಲಿ ಕಾಲಕಾಲಕ್ಕೆ ಹೃದಯವನ್ನು ಪರೀಕ್ಷಿಸಿಕೊಳ್ಳುವುದು ಅಗತ್ಯ. ಕೊಲಸ್ಟ್ರಾಲ್‌, ಸಕ್ಕರೆ ಅಂಶವನ್ನು ಪರೀಕ್ಷಿಸಿಕೊಳ್ಳಬೇಕು. 40 ವರ್ಷ ದಾಟಿದ ಮೇಲೆ ವರ್ಷಕ್ಕೊಮ್ಮೆ ಇಸಿಜಿ ಮಾಡಿಸಿಕೊಳ್ಳಬೇಕು. ಜನ ಕಾಳಜಿ ವಹಿಸಬೇಕು. ಆದರೆ ಪ್ಯಾನಿಕ್ ಆಗುವ ಅಗತ್ಯವೇನೂ ಇಲ್ಲ. ಪುನೀತ್‌ ರಾಜ್‌ಕುಮಾರ್‌ ಅವರಿಗೆ ಹೃದಯಾಘಾತವಾಯಿತು ಎಂದ ಮಾತ್ರಕ್ಕೆ ಎಲ್ಲರಿಗೂ ಆಗುತ್ತೆ ಎಂದೇನಿಲ್ಲ” ಎಂದರು.

 ಇದನ್ನೂ ಓದಿರಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

“ವ್ಯಾಯಾಮವನ್ನು ಮಿತಿಮೀರಿಯೂ ಮಾಡಬಾರದು. ವ್ಯಾಯಾಮ ಮಾಡದೆ ಒಂದೇ ಕಡೆ ಕೂತರೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತವೆ. ಮಧ್ಯಮ ಪ್ರಮಾಣದಲ್ಲಿ ವ್ಯಾಯಾಮವನ್ನು ಮಾಡಬೇಕು. ದಿನಕ್ಕೆ ಒಂದು ಗಂಟೆಯಂತೆ, ವಾರದಲ್ಲಿ ಕನಿಷ್ಠ ಐದು ಗಂಟೆ ಮಾಡಬಹುದು. ದಿನಕ್ಕೆ ಎರಡು ಅಥವಾ ಮೂರು ಗಂಟೆ ವ್ಯಾಯಾಮ ಮಾಡುವವರಿಗೂ, ಮ್ಯಾರಾಥಾನ್‌ ಓಡುವವರಿಗೂ ಹೃದಯ ಸಂಬಂಧಿ ಕಾಯಿಲೆ ಉಂಟಾಗಬಹುದು” ಎನ್ನುತ್ತಾರೆ ಡಾ.ಸಂಜಯ್‌.

“ಮೊದಲೇ ಹೃದಯ ಸಮಸ್ಯೆ ಇರುವವರು ನಿಗದಿತವಾಗಿ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕು. ಆದರೆ ಹೆದರಿಕೊಂಡು ಎಲ್ಲರೂ ದಿಢೀರನೇ ಡಾಕ್ಟರ್‌ ಬಳಿ ಹೋಗುವ ಅಗತ್ಯವಿಲ್ಲ. ಯುವಕರು ಹೆಚ್ಚಿನ ಪ್ರಮಾಣದಲ್ಲಿ ಪ್ಯಾನಿಕ್‌ ಆಗುತ್ತಿದ್ದಾರೆ. ಯುವಜನರು ಧೂಮಪಾನ ಬಿಟ್ಟರೆ ಸಾಕು. ಗಾಬರಿಯಾಗುವ ಅಗತ್ಯವಿಲ್ಲ. ಅತಿಯಾದ ತೂಕ ಇರಬಾರದು. ಮಧುಮೇಹ ಇರುವವರು ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಫ್ಯಾಟ್‌ ಫುಡ್‌, ಕರಿದ ಪದಾರ್ಥ ಸೇವಿಸುವುದು ಕಡಿಮೆ ಮಾಡಬೇಕು” ಎಂದು ತಿಳಿಸಿದರು.

ಪುನೀತ್‌ ನಿಧನ: ಜನರಲ್ಲಿ ಭೀತಿ ಹುಟ್ಟಿಸಿ ದುಡ್ಡು ಕೀಳಲು ಯತ್ನ

ಪುನೀತ್ ರಾಜ್‌ಕುಮಾರ್‌ ಅವರು ಹೃದಯಾಘಾತದಿಂದ ನಿಧನರಾಗಿರುವುದನ್ನೇ ಬಂಡವಾಳ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ಹೊರಟಿವೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

ಕ್ರೆಡೆನ್‌ ಡಯಗ್ನಾಟಿಕ್ಸ್‌ ಎಂಬ ಸಂಸ್ಥೆಯ ಹೆಸರಿನ ಬ್ಯಾನರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಪುನೀತ್ ರಾಜ್‌ಕುಮಾರ್‌ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿರುವ ಸದರಿ ಸಂಸ್ಥೆಯು, “ಇಸಿಜಿ, ಆರ್‌ಬಿಎಸ್‌, ಕ್ರಿಟಿನೈನ್‌‌, ಬಿಪಿ, ಕೊಲಸ್ಟ್ರಾಲ್‌ ಪರೀಕ್ಷೆ ಮಾಡಿಸಿಕೊಳ್ಳಿ. ಆಫರ್‌ ಫ್ರೈಸ್‌ 300 ರೂ.” ಹೇಳಿದೆ. ಅಕ್ಟೋಬರ್‌ 31ರಂದು ತಪಾಸಣೆ ಶಿಬಿರವನ್ನು ಕೈಗೊಂಡಿರುವುದಾಗಿ ತಿಳಿಸಿರುವ ಈ ಬ್ಯಾನರ್‌‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಬರಹಗಾರ ಧನಂಜಯ್ ಎನ್. ಅವರು ಫೇಸ್‌ಬುಕ್‌ ಪೋಸ್ಟ್ ಹಾಕಿ ಕಟುವಾಗಿ ಟೀಕಿಸಿದ್ದಾರೆ.

ಹೃದಯ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದು ತಪ್ಪಲ್ಲ, ಆದರೆ ನಮ್ಮತ್ರ ಚೆಕ್ ಮಾಡಿಸಿಕೊಳ್ಳಿ ಅಂತ ಆಫರ್ ಇಟ್ಟು ಬಂಡವಾಳ ಮಾಡಿಕೊಳ್ಳುತ್ತಿರುವುದು ದೊಡ್ಡ ತಪ್ಪು” ಎಂದು ಶಿವರಾಜ್‌ ಮೋತಿ ಅಭಿಪ್ರಾಯಟ್ಟಿದ್ದಾರೆ.


ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...