HomeಮುಖಪುಟBJP ನಾಯಕ ಕಪಿಲ್ ಮಿಶ್ರಾ ವಿರುದ್ಧ ಕ್ರಮಕ್ಕೆ ಕೋರಿದ್ದ ಅಧಿಕಾರಿಯ ಅಮಾನತು ಹಿಂಪಡೆದ ರಾಷ್ಟ್ರಪತಿ

BJP ನಾಯಕ ಕಪಿಲ್ ಮಿಶ್ರಾ ವಿರುದ್ಧ ಕ್ರಮಕ್ಕೆ ಕೋರಿದ್ದ ಅಧಿಕಾರಿಯ ಅಮಾನತು ಹಿಂಪಡೆದ ರಾಷ್ಟ್ರಪತಿ

- Advertisement -
- Advertisement -

2019 ರಲ್ಲಿ ಆಮ್‌ ಆದ್ಮಿ ಪಕ್ಷದಲ್ಲಿದ್ದ ದೆಹಲಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಹರಿಬಿಟ್ಟಿದ್ದ ವೀಡಿಯೊ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿದ್ದಕ್ಕಾಗಿ ದೂರಸಂಪರ್ಕ ಇಲಾಖೆ ಅಧಿಕಾರಿ ಆಶಿಶ್ ಜೋಶಿ ದಂಡನೆಗೆ ಒಳಗಾಗಿದ್ದು ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಅವರನ್ನು ಅಮಾನತುಗೊಳಿಸಿದ್ದ ಇಲಾಖೆಯ ಆದೇಶವನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ ರದ್ದುಗೊಳಿಸಿದ್ದಾರೆ.

ಅವರನ್ನು ಮತ್ತೇ ದೂರಸಂಪರ್ಕ ಇಲಾಖೆಗೆ ನೇಮಿಸಲಾಗಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಅವರು ಯಾವುದೆ ಪ್ರತಿಕ್ರಿಯೆಗೆ ಸಿಗಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. 2019 ರಲ್ಲಿ ಕಪಿಲ್ ಮಿಶ್ರಾ ಅವರ ದ್ವೇಷ ಕಾರುವ ವಿಡಿಯೊ ಬಗ್ಗೆ ಆಶಿಶ್‌ ಜೋಶಿ ದೆಹಲಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

ಕಪಿಲ್ ಮಿಶ್ರಾ 2019 ರ ಫೆಬ್ರವರಿ 24 ರಂದು ಟ್ವಿಟರ್‌‌ನಲ್ಲಿ ಕವಿತೆಯೊಂದನ್ನು ಓದಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದರು. ಅದರಲ್ಲಿ ಅವರು, “ದೇಶದ್ರೋಹಿಗಳ ವಿರುದ್ಧ ಯುದ್ಧ ಮಾಡುವುದಾಗಿ” ಪ್ರತಿಜ್ಞೆ ಮಾಡಿದ್ದರು.

ಅವರು ವಿಡಿಯೊದಲ್ಲಿ “ದೇಶದ್ರೋಹಿಗಳು” ಎಂದು ಪತ್ರಕರ್ತೆ ಬರ್ಖಾ ದತ್, ಹೋರಾಟಗಾರ್ತಿ ಕವಿತಾ ಕೃಷ್ಣನ್, ಶೆಹ್ಲಾ ರಶೀದ್, ರಾಜಕಾರಣಿ ನವಜೋತ್ ಸಿಂಗ್ ಸಿಧು ಮತ್ತು ನಟ ನಾಸಿರುದ್ದೀನ್ ಶಾ ಅವರ ಹೆಸರನ್ನು ಉಲ್ಲೇಖಿಸಿದ್ದರು. ಈ ವಿಡಿಯೊವನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು, ನಂತರ ಆಕ್ಷೇಪ ಬಂದದ್ದರಿಂದ ಅವನ್ನು ಡಿಲೀಟ್ ಮಾಡಿದ್ದರು.

ಈ ಸಮಯ ಡೆಹ್ರಾಡೂನ್‌ನಲ್ಲಿ ಸಂವಹನ ಖಾತೆಯ ನಿಯಂತ್ರಕರಾಗಿದ್ದ ಆಶಿಶ್‌ ಜೋಶಿ ಕಳವಳ ವ್ಯಕ್ತಪಡಿಸಿ ದೆಹಲಿ ಪೊಲೀಸ್‌ ಕಮಿಷನರ್‌ ಆಗಿದ್ದ ಅಮೂಲ್ಯ ಪಟ್ನಾಯಕ್‌ಗೆ ಪತ್ರ ಬರೆದಿದ್ದರು. ಪತ್ರದಲ್ಲಿ, “ವೀಡಿಯೊ ವಿಷಯವು ಸ್ವಯಂ ವಿವರಣಾತ್ಮಕವಾಗಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಐಟಿ ಕಾಯ್ದೆಯನ್ನು ಉಲ್ಲಂಘಿಸುತ್ತದೆ. ದ್ವೇಷ ಕಾರುವ ವಿಡಿಯೊ ಜನರನ್ನು ದಾಳಿ ಮಾಡಲು ಪ್ರೇರೇಪಿಸುತ್ತದೆ” ಎಂದು ಉಲ್ಲೇಖಿಸಿದ್ದರು.

ಇದನ್ನೂ ಓದಿ: 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಈ ಪತ್ರ 2019 ಫೆಬ್ರವರಿ 26 ರಂದು ವ್ಯಾಪಕವಾಗಿ ಹರಿದಾಡಿದ ನಂತರ ಅವರನ್ನು ಐಎಎಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಕಪಿಲ್ ಮಿಶ್ರಾ ಟ್ವೀಟ್ ಮಾಡಿದ್ದರು.

ಸರ್ಕಾರದ ಲೆಟರ್‌ಹೆಡ್ ಅನ್ನು ದುರುಪಯೋಗಪಡಿಸಿಕೊಂಡು ಅಂದಿನ ದೆಹಲಿ ಪೊಲೀಸ್ ಕಮಿಷನರ್ ಅಮೂಲ್ಯ ಪಟ್ನಾಯಕ್ ಪತ್ರ ಬರೆದಿದ್ದಕ್ಕಾಗಿ ದೂರಸಂಪರ್ಕ ಇಲಾಖೆಯು ಆಶಿಶ್‌ ಜೋಶಿಯನ್ನು ಅಮಾನತುಗೊಳಿಸಿತ್ತು ಹಾಗೂ ಅಧಿಕಾರ ವ್ಯಾಪ್ತಿಯನ್ನು ಮೀರಿ ವರ್ತಿಸಿದ್ದಕ್ಕಾಗಿ ಇಲಾಖೆಯು ಜೋಶಿ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.

ಕಪಿಲ್ ಮಿಶ್ರಾ ಕೊನೆಗೆ ಎಎಪಿ ತೊರೆದು ಬಿಜೆಪಿಯನ್ನು ಸೇರಿದ್ದರು. ಇದರ ನಂತರ ಅವರು ವಿವಾದಾತ್ಮಕ ಹೇಳಿಕೆ ನೀಡುವುದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. 2020 ರಲ್ಲಿ ಈಶಾನ್ಯ ದೆಹಲಿಯ ಮೌಜ್‌ಪುರದಲ್ಲಿ ಕೋಮು ಹಿಂಸಾಚಾರ ಭುಗಿಲೇಳುವ ಮುನ್ನ ಅವರು ಮಾಡಿದ ಭಾಷಣದಿಂದಾಗಿ ಫೆಬ್ರವರಿಯಲ್ಲಿ ಕೋಮುಗಲಭೆ ಭುಗಿಲೆದ್ದತ್ತು ಎಂದು ಆರೋಪಿಸಲಾಗಿದೆ. ಇಡೀ ಗಲಭೆಯನ್ನು ಅವರೇ ಪ್ರಚೋದಿಸಿದ್ದರು ಎಂಬ ಆರೋಪ ಕೂಡಾ ಅವರ ಮೇಲಿದೆ.

ಇದನ್ನೂ ಓದಿ: ಆಪ್ ಮುಖಂಡರ ಮೇಲೆ ಆರೋಪ: ಬೇಷರತ್ ಕ್ಷಮೆ ಕೇಳಿದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...