Homeಮುಖಪುಟಉತ್ತರ ಪ್ರದೇಶ: ಜೈ ಶ್ರೀರಾಮ್‌ ಘೋಷಣೆ ಕೂಗದ ಬೀದಿ ವ್ಯಾಪಾರಿ ಮೇಲೆ ಹಲ್ಲೆ - ಮತೀಯ...

ಉತ್ತರ ಪ್ರದೇಶ: ಜೈ ಶ್ರೀರಾಮ್‌ ಘೋಷಣೆ ಕೂಗದ ಬೀದಿ ವ್ಯಾಪಾರಿ ಮೇಲೆ ಹಲ್ಲೆ – ಮತೀಯ ಗೂಂಡಾಗಿರಿ

ಈ ಘಟನೆ ನಡೆಯುತ್ತಿದ್ದಾಗ ಸ್ಥಳೀಯ ಮಹಿಳಾ ನಿವಾಸಿಗಳು ಅಮೀರ್‌ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದರೂ ಬಜರಂಗದಳದ ಗೂಂಡಾಗಳನ್ನು ತಡೆಯಲು ಸಾಧ್ಯವಾಗಿಲ್ಲ.

- Advertisement -
- Advertisement -

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ, ಬಟ್ಟೆ ಮಾರುತ್ತಿದ್ದ ವ್ಯಕ್ತಿಯೊಬ್ಬ ‘ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗಲು ನಿರಾಕರಿಸಿದ್ದಕ್ಕಾಗಿ ಅವರನ್ನು, ಬಜರಂಗದಳದ ಕಾರ್ಯಕರ್ತರಿಬ್ಬರು ಲಾಠಿಯಿಂದ ತಳಿಸಿ, ಮತೀಯ ಗೂಂಡಾಗಿರಿ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಆಲಿಗಡದಲ್ಲಿ ಭಾನುವಾರ ಸಂಜೆ ನಡೆದಿದೆ.

ಅಮೀರ್‌ ಖಾನ್‌ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಜೆ.ಎನ್. ವೈದ್ಯಕೀಯ ಕಾಲೇಜಿಗೆ ಸೇರಿಸಲಾಗಿದೆ. ಘಟನೆ ನಂತರ ಆರೋಪಿಗಳಾದ ಬಜರಂಗದಳದ ಕಾರ್ಯಕರ್ತರಾದ ತಂದೆ ಮತ್ತು ಮಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ವಾಸ್ತವವಾಗಿ ನಡೆದಿದ್ದೇನು?

ಆಲಿಗಡದ ಹರ್ದುವಾಗಂಜ್‌ನ ನಿವಾಸಿ ಅಮೀರ್‌ ಖಾನ್‌ ಬೀದಿ ಬದಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದು, ಭಾನುವಾರ ಸಂಜೆ  ಮನೆಗೆ ಹೋಗುವ ದಾರಿಯಲ್ಲಿ ನಾಗ್ಲಾ ಖೇಮ್‌ ಪ್ರದೇಶದಲ್ಲಿ ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದರು.

ಆ ಸ್ಥಳಕ್ಕೆ ಧಾವಿಸಿದ ಆರೋಪಿಗಳಿಬ್ಬರು, ವ್ಯಾಪಾರಿಯ ಬಳಿ ಹೋಗಿ ಅವರ ಹೆಸರು ಕೇಳಿದ್ದಾರೆ. ಅಮೀರ್‌ ಮುಸ್ಲಿಂ ಎಂದು ತಿಳಿದ ನಂತರ, ಇಬ್ಬರು ಅಮೀರ್‌ ಅವರನ್ನು ‘ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ತ ಹೇಳುವಂತೆ, ಆರೋಪಿಗಳಿಬ್ಬರು ಕ್ಯಾಲೆಂಡರ್‌ ಒಂದನ್ನು ಕೈಯಲ್ಲಿ ಹಿಡಿದು, ಅದರಲ್ಲಿರುವ ದೇವರ ಫೋಟೊದ ಪಾದಗಳನ್ನು ಮುಟ್ಟುವಂತೆ ಹೇಳಿದ್ದಾರೆ. ಇದಲ್ಲದೇ ಆರೋಪಿಗಳು ಅಮೀರ್‌ ಅವರ ಬೈಕ್‌ಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ ಎಂದು ದಿ ಕ್ವಿಂಟ್‌ ವರದಿ ಮಾಡಿದೆ.

ಈ ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಮಹಿಳಾ ನಿವಾಸಿಗಳು ಅಮೀರ್‌ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದರೂ, ಗೂಂಡಾಗಳನ್ನು ತಡೆಯಲು ಸಾಧ್ಯವಾಗಿಲ್ಲ.

‘ನನ್ನ ಸೋದರಳಿಯ ಅಮೀರ್‌ ಬಟ್ಟೆ ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದಾನೆ. ನಾಗ್ಲಾ ಖೇಮ್‌ನಲ್ಲಿ ಗೂಂಡಾಗಳು ಆತನನ್ನು ಥಳಿಸಿದ್ದಾರೆ. ಘಟನೆ ಸಮಯದಲ್ಲಿ ಆ ಗ್ರಾಮದಲ್ಲಿ ಜನಸಂದಣಿ ಇತ್ತು. ಗ್ರಾಮಸ್ಥರ ಪ್ರಕಾರ, ಅಮೀರ್‌ ಮೇಲೆ ದಾಳಿ ಮಾಡಿದ ಗೂಂಡಾಗಳು ಬಜರಂಗದಳಕ್ಕೆ ಸೇರಿದವರು’ ಎಂದು ಅಮೀರ್‌ ಅವರ ಸಂಬಂಧಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್‌ 223 ಮತ್ತು 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಮೀರ್‌ ಮಾರುತ್ತಿದ್ದ ಬಟ್ಟೆಗಳ ಬೆಲೆಯ ವಿವಾದದಿಂದಾಗಿ ನಡೆದ ಜಗಳ ಪರಿಣಾಮವಾಗಿ ಈ ಘಟನೆ ನಡೆದಿದೆ ಎಂದು ಆಲಿಗಡ ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದ್ದು ಆರೋಪಿಗಳಾದ ರಾಜು ಮತ್ತವರ ಮಗ ದೇವೇಶ್‌ ಅವರನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ದಲಿತ, ಶೋಷಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದೌರ್ಜನ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ. ಜಾತಿ, ಧರ್ಮದ ಹೆಸರಿನಲ್ಲಿ ಶೋಷಿತರನ್ನು, ಅಲ್ಪಸಂಖ್ಯಾತ ಸಮುದಾಯದವರನ್ನು ಹಲ್ಲೆಗೈಯ್ಯುವಂತಹ ಅಮಾನವೀಯ ಘಟನೆಗಳು ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೌನವಾಗಿರುವುದು ಬೇಸರದ ಸಂಗತಿ. ಸರ್ಕಾರಗಳು ಈ ಬಗ್ಗೆ ಗಮನ ಹರಿಸಬೇಕು.


ಇದನ್ನು ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...