Homeಮುಖಪುಟಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

ಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ದ ಉಪಕುಲಪತಿಗಳಿಗೆ ವಿಭಾಗಗಳ ಅಧ್ಯಕ್ಷರನ್ನು ನೇಮಿಸುವ ಅಧಿಕಾರವಿಲ್ಲ ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ, ವಿವಿಧ ವಿಭಾಗಗಳಿಗೆ ಉಪಕುಲಪತಿ ಪ್ರೊ.ಎಂ.ಜಗದೇಶ್ ಕುಮಾರ್ ಅವರು ನೇಮಿಸಿದ್ದ ಒಂಬತ್ತು ಅಧ್ಯಕ್ಷರುಗಳು ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಕೋರ್ಟ್‌ ನಿರ್ಬಂಧ ಹೇರಿದೆ.

ನ್ಯಾಯಮೂರ್ತಿ ರಾಜೀವ್ ಶಕ್ಧೇರ್ ಮತ್ತು ನ್ಯಾಯಮೂರ್ತಿ ತಲವಂತ್ ಸಿಂಗ್ ಅವರ ವಿಭಾಗೀಯ ಪೀಠವು, ಅಧ್ಯಕ್ಷರನ್ನು ನೇಮಿಸುವ ಅಧಿಕಾರವು ಕಾರ್ಯಕಾರಿ ಮಂಡಳಿಗೆ ಮಾತ್ರ ಇದೆಯೇ ಹೊರತು ಉಪಕುಲಪತಿಗಳಿಗೆ ಇಲ್ಲ. ಹೀಗಾಗಿ ಉಪ ಕುಲಪತಿಗಳಿಂದ ನೇಮಕವಾಗಿರುವವರು, ಆಯ್ಕೆ ಸಮಿತಿಗಳ ಸಭೆ ನಡೆಸುವುದು, ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದೆ.

ಪ್ರೊಫೆಸರ್ ಅತುಲ್ ಸೂದ್ ಅವರು ಕುಲಪತಿಗಳು ಮಾಡಿದ ಒಂಬತ್ತು ನೇಮಕಾತಿಗಳಿಗೆ ಕಾರ್ಯಕಾರಿ ಮಂಡಳಿಯ ಅನುಮೋದನೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ, ಉಪ ಕುಲಪತಿಗಳು ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಅಧ್ಯಕ್ಷರನ್ನಾಗಿ ಪ್ರಾಧ್ಯಾಪಕರನ್ನು ನೇಮಿಸುವ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವಿಶ್ವವಿದ್ಯಾನಿಲಯ ಶಾಸನ 4 (5) ರ ಅಡಿಯಲ್ಲಿ ಕುಲಪತಿಗಳು ಅಧಿಕಾರವನ್ನು ಚಲಾಯಿಸಿದ್ದಾರೆ ಎಂದು ವಿವಿಯು ವಾದಿಸಿತ್ತು. ಆದರೆ ಈ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. “ತುರ್ತು ಪರಿಸ್ಥಿತಿಯ ಕಾರಣದಲ್ಲಿ” ತಕ್ಷಣದ ಕ್ರಮ ಅಗತ್ಯವಿದ್ದಾಗ ಮಾತ್ರ ವಿಸಿ ಅಂತಹ ಅಧಿಕಾರವನ್ನು ಚಲಾಯಿಸಬಹುದು ಎಂದು ಕೋರ್ಟ್‌ ಹೇಳಿದೆ.

ಕಾರ್ಯಕಾರಿ ಮಂಡಳಿಯ 296ನೇ ಸಭೆಯ ಕಾರ್ಯಸೂಚಿಗೆ ಸೂದ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಗಮನಿಸಿದ ನ್ಯಾಯಾಲಯ, ವಿಸಿ ಅವರು ಮಾಡಿರುವ ನೇಮಕದಲ್ಲಿ ದೋಷವಿದೆ ಎಂದು ಹೇಳಿದೆ.

ವಿಸಿ ಮಾಡಿದ ಒಂಬತ್ತು ನೇಮಕಾತಿಗಳಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್‌ನ ಏಕ ಪೀಠ ನಿರಾಕರಿಸಿದ ನಂತರ, ಅಕ್ಟೋಬರ್ 08 ರಂದು ಸ್ಪ್ಯಾನಿಷ್, ಪೋರ್ಚುಗೀಸ್, ಇಟಾಲಿಯನ್ ಮತ್ತು ಲ್ಯಾಟಿನ್ ಅಮೇರಿಕನ್ ಸ್ಟಡೀಸ್/ಸ್ಕೂಲ್ ಆಫ್ ಲ್ಯಾಂಗ್ವೇಜ್, ಸಾಹಿತ್ಯ ಮತ್ತು ಸಾಂಸ್ಕೃತಿಕ ಅಧ್ಯಯನಗಳ ಕೇಂದ್ರದ ಅಧ್ಯಕ್ಷರಾಗಿ ಇನ್ನೊಬ್ಬ ವ್ಯಕ್ತಿಯನ್ನು ನೇಮಿಸಲು ಅವರು ಮುಂದಾದರು ಎಂದು ಸೂದ್ ಅವರ ವಕೀಲ ಅಭಿಕ್ ಚಿಮ್ನಿ ಸಲ್ಲಿಸಿದ ಸಲ್ಲಿಕೆಯನ್ನು ವಿಭಾಗೀಯ ಪೀಠವು ಗಮನಿಸಿದೆ.

ಏಕ ನ್ಯಾಯಾಧೀಶರ ಮುಂದೆ ವಿಷಯ ಬಾಕಿ ಇರುವ ಕಾರಣ, ಸೂದ್ ಅವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ. ನವೆಂಬರ್ 10 ರಂದು ನಡೆಯುವ ವಿಚಾರಣೆಗೆ ಆ ವಿಷಯವನ್ನೂ ನ್ಯಾಯಾಲಯದ ಮುಂದೆ ನಿರ್ದೇಶನಕ್ಕಾಗಿ ಪಟ್ಟಿ ಮಾಡಿದೆ.


ಇದನ್ನೂ ಓದಿ: ದೇಶದಲ್ಲಿ ಕೋವಿಡ್ ಇಳಿಮುಖ: ಕಳೆದ 24 ಗಂಟೆಗಳಲ್ಲಿ 10,423 ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...