Homeಮುಖಪುಟಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ಇದು 2023ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಪ್ರಶ್ನೆಯನ್ನು ಮತ್ತೊಮ್ಮೆ ಮುನ್ನಲೆಗೆ ತರಲಿದೆ.

- Advertisement -
- Advertisement -

ಭಾರೀ ಕೂತುಹಲ ಕೆರಳಿಸಿದ್ದ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲ ಸಾಧಿಸಿವೆ. ಸಿಂದಗಿಯಲ್ಲಿ ಬಿಜೆಪಿ ಗೆದ್ದು ಬೀಗಿದರೆ, ಹಾನಗಲ್‌ನಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಆದರೆ ಎರಡೂ ಕಡೆ ಠೇವಣಿ ಕಳೆದುಕೊಂಡಿರುವ ಜೆಡಿಎಸ್ ಹೀನಾಯ ಸೋಲು ಕಂಡಿದೆ. ಈ ಉಪ ಚುನಾವಣೆ ಫಲಿತಾಂಶ ಹಾಲಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ನುಂಗಲಾರದ ತುತ್ತಾಗಿದೆ. ಏಕೆಂದರೆ ಅವರ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿದೆ.

ಮಾಜಿ ಸಚಿವ ಸಿ.ಎಂ.ಉದಾಸಿಯವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರದಲ್ಲಿ, ಕಾಂಗ್ರೆಸ್ ಪಕ್ಷವು ಕ್ಷತ್ರಿಯ ಮರಾಠ ಸಮುದಾಯದ ಶ್ರೀನಿವಾಸ ಮಾನೆಯವರಿಗೆ ಟಿಕೆಟ್ ನೀಡಿತ್ತು. ಬಿಜೆಪಿಯಿಂದ ಗಾಣಿಗ ಸಮುದಾಯದ ಶಿವರಾಜ್ ಸಜ್ಜನರ ಕಣಕ್ಕಿಳಿದಿದ್ದರು. ಸಿ.ಎಂ. ಉದಾಸಿಯವರ ಭದ್ರಕೋಟೆಯಾಗಿದ್ದ ಹಾನಗಲ್‌ನಲ್ಲಿ ಅನೇಕ ಸಲ ಕಾಂಗ್ರೆಸ್ ಅಭ್ಯರ್ಥಿಗಳೂ ಮೇಲುಗೈ ಸಾಧಿಸಿದ್ದಿದೆ. ಜೆಡಿಎಸ್ ಇಲ್ಲಿ ಮುಸ್ಲಿಂ ವ್ಯಕ್ತಿ ನಿಯಾಜ್ ಶೇಖ್ ಅವರನ್ನು ಈ ಬಾರಿ ಕಣಕ್ಕಿಳಿಸಿತ್ತು.

ಮತ ಎಣಿಕೆಯ 18ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು 83,324 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರರವರು 75,999 ಮತಗಳಿಗೆ ಸೀಮಿತವಾದರು. ಇನ್ನು ಜೆಡಿಎಸ್‌ನ ನಿಯಾಜ್ ಶೇಖ್ ಕೇವಲ 566 ಮತಗಳನ್ನು ಪಡೆದರು.

ಹಾನಗಲ್‌ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪ್ರತಿಷ್ಠೆಯ ಕಣವಾಗಿತ್ತು. ತವರು ಜಿಲ್ಲೆ ಎಂಬುದು ಒಂದು ಕಾರಣವಾದರೆ ಅವರು ಸಿಎಂ ಆದ ಬಳಿಕ ನಡೆಯುತ್ತಿರುವ ಮಹತ್ವದ ಉಪಚುನಾವಣೆ ಇದಾಗಿದೆ. ಆದರೆ ತವರು ಕ್ಷೇತ್ರದಲ್ಲಿಯೇ ಅವರು ಮುಖಭಂಗ ಅನುಭವಿಸಿದ್ದಾರೆ. ಇದು 2023ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಪ್ರಶ್ನೆಯನ್ನು ಮತ್ತೊಮ್ಮೆ ಮುನ್ನಲೆಗೆ ತರಲಿದೆ.

ಈ ಫಲಿತಾಂಶ ಬೊಮ್ಮಾಯಿ ಪಾಲಿಗೆ ದುಸ್ವಪ್ನವಾಗಲಿದೆ. ಬೆನ್ನಿಗೆ ದೊಡ್ಡ ಬೆಂಬಲಿಗ ಶಾಸಕರ ಪಡೆಯಿಲ್ಲದೆಯೂ ಮುಖ್ಯಮಂತ್ರಿಯಾಗಿರುವ ಅವರ ನಾಯಕತ್ವದ ಪರೀಕ್ಷೆಯಲ್ಲಿ ಅವರು ಶೇ.50 ಮಾತ್ರ ಪಡೆದಿದ್ದಾರೆ. ಸಿಂದಗಿಯಲ್ಲಿ ಬಿಜೆಪಿಗೆ ಗೆಲುವಿಗೆ ಪಕ್ಷಕ್ಕಿಂತ ಮುಖ್ಯವಾಗಿ ರಮೇಶ್ ಭೂಸನೂರರವರ ವರ್ಚಸ್ಸು ಕಾರಣ ಎಂಬ ವಿಶ್ಲೇಷಣೆಗಳು ಸಹ ಕೇಳಿ ಬರುತ್ತಿವೆ. ಹೀಗಿರುವಾಗ ಹಿಂದೆ ಬಿಜೆಪಿ ಗೆದ್ದಿದ್ದ ತವರು ಕ್ಷೇತ್ರದಲ್ಲಿ ಬಿಜೆಪಿ ಸೋತಿರುವುದಕ್ಕೆ ಸಿಎಂ ಸಹ ಹೊಣೆ ಹೊರಬೇಕಿದೆ.


ಇದನ್ನೂ ಓದಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...