Homeಮುಖಪುಟಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

- Advertisement -
- Advertisement -

ಇತ್ತೀಚೆಗೆ ದೇಶದಾದ್ಯಂತ ನಡೆದ 30 ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇವುಗಳಲ್ಲಿ ಪಶ್ಚಿಮ ಬಂಗಾಳದ 4 ವಿಧಾನಸಭೆಗೆ ನಡೆದಿದ್ದ ಉಪಚುನಾವಣೆಯಲ್ಲಿ ಆಡಳಿತ ಪಕ್ಷವಾದ ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದೆ. ಆರು ತಿಂಗಳ ಮುಂಚೆ ಚುನಾವಣೆ ನಡೆದಿದ್ದ ಈ ನಾಲ್ಕು ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಕೇವಲ ಆರು ತಿಂಗಳಲ್ಲಿ ಅಲ್ಲಿನ ಜನರು ತಮ್ಮ ತೀರ್ಮಾನವನ್ನು ಬದಲಿಸಿ ಟಿಎಂಸಿಯನ್ನು ಗೆಲ್ಲಿಸಿದ್ದಾರೆ.

ದೀನ್‌ಹಟಾ, ಶಾಂತಿಪುರ್‌, ಖಾರ್ದಹೊ ಮತ್ತು ಗೋಸಬಾದ ನಾಲ್ಕು ಕ್ಷೇತ್ರಗಳಲ್ಲೂ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದೆ.

ದೀನ್‌ಹಟಾ ಕ್ಷೇತ್ರದಲ್ಲಿ ಬಿಜೆಪಿಯ ನಿಸಿತ್ ಪ್ರಮಾಣಿಕ್ ಒಕ್ಕೂಟ ಸರ್ಕಾರದ ಕಿರಿಯ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ತಾನು ಗೆದ್ದದ್ದ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರದಲ್ಲಿ ಟಿಎಂಸಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, 1.89 ಲಕ್ಷ ಮತಗಳನ್ನು ಪಡೆದಿದೆ. ಬಿಜೆಪಿ ಇಲ್ಲಿ ಕೇವಲ 25 ಸಾವಿರ ಮತಗಳನ್ನಷ್ಟೇ ಪಡೆದಿದೆ. ಇಲ್ಲಿ ಟಿಎಂಸಿಯಲ್ಲಿ ಉದ್ಯಾನ್‌ ಗುಹಾ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಅಶೋಕ್ ಮಂಡಲ್‌ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ’ಇದು ರೈತರ ಗೆಲುವು’ ಎಂದ ಅಭ್ಯರ್ಥಿ ಅಭಯ್ ಚೌಟಾಲಾ

ಶಾಂತಿಪುರ್‌ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಅವರು ತಾನು ಗೆದ್ದ ವಿಧಾನಸಭೆಗೆ ರಾಜೀನಾಮೆ ನೀಡಿದ್ದರಿಂದ ಕ್ಷೇತ್ರವು ತೆರವಾಗಿತ್ತು. ಟಿಎಂಸಿಯ ಬ್ರಜಾ ಕಿಶೋರ್‌ ಗೋಸ್ವಾಮಿ 11.1 ಲಕ್ಷ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ನಿರಂಜನ್ ಬಿಸ್ವಾಸ್‌ ಕೇವಲ 47 ಸಾವಿರ ಮತಗಳನ್ನು ಪಡೆದಿದ್ದಾರೆ.

ಖಾರ್ದಹೊ ಕ್ಷೇತ್ರವು ಕೋಲ್ಕತ್ತಾದ ಮಾಜಿ ಮೇಯರ್ ಸೋವಂದೇಬ್ ಚಟ್ಟೋಪಾಧ್ಯಾಯ ಸ್ಪರ್ಧಿಸುತ್ತಿರುವ ಕ್ಷೇತ್ರವಾಗಿದೆ. ಅವರು ಮಮತಾ ಬ್ಯಾನರ್ಜಿಗಾಗಿ ಕೋಲ್ಕತ್ತಾದ ಭವಾನಿಪುರ್‌ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. ಇಲ್ಲಿ ಅವರು 1.14 ಲಕ್ಷ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯಲ್ಲಿ ಸ್ಪರ್ಧಿಸಿದ್ದ ಜೋತ್‌ ಶಾ 20 ಸಾವಿರ ಮತಗಳನ್ನಷ್ಟೇ ಪಡೆದಿದ್ದಾರೆ.

ಗೋಸಬಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಸ್ಪರ್ಧಿಸಿದ್ದ ಸುಬ್ರತಾ ಮಂಡಲ್‌ 1.60 ಲಕ್ಷ ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಪಲಾಶಾ ರಾಣಾ 18 ಸಾವಿರ ಮತ ಪಡೆದು ಹೀನಾಯವಾಗಿ ಸೋಲುಂಡಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಯ ಚುನಾವಣೆಯ ನಂತರ ಬಿಜೆಪಿ ಹಲವರು ಟಿಎಂಸಿಗೆ ಸೇರಿಕೊಂಡಿದ್ದರು. ಬಿಜೆಪಿಗೆ ಈ ಮುಖಭಂಗ ಉಪಚುನಾವಣೆಯಲ್ಲೂ ಮುಂದುವರೆದಿದೆ. ಜೊತೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿಯು ಮುಂದುವರಿದಿದೆ.

ಚುನಾವಣಾ ಗೆಲುವನ್ನು ಸಂಭ್ರಮಿಸಿರುವ ಮಮತಾ ಬ್ಯಾನರ್ಜಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. “ಎಲ್ಲಾ ನಾಲ್ಕು ವಿಜೇತ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಈ ವಿಜಯವು ಜನರ ವಿಜಯವಾಗಿದೆ. ಇದು ಬಂಗಾಳ ಯಾವಾಗಲೂ ಪ್ರೊಪಾಗಾಂಡ ಮತ್ತು ದ್ವೇಷದ ರಾಜಕೀಯಕ್ಕಿಂತ ಅಭಿವೃದ್ಧಿ ಮತ್ತು ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ತೋರಿಸಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುದಾಗಿ ನಾವು ಭರವಸೆ ನೀಡುತ್ತೇವೆ!” ಎಂದು ಅವರು ಹೇಳಿದ್ದಾರೆ.

ಈ ನಾಲ್ಕು ಕ್ಷೇತ್ರಗಳೊಂದಿಗೆ ರಾಜ್ಯದ ವಿಧಾನಸಭೆಯಲ್ಲಿ ಟಿಎಂಸಿಯ ಸೀಟು 213 ಕ್ಕೆ ಏರಿದೆ.

ಇದನ್ನೂ ಓದಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...