Homeಮುಖಪುಟಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

- Advertisement -
- Advertisement -

ಇತ್ತೀಚೆಗೆ ದೇಶದಾದ್ಯಂತ ನಡೆದ 30 ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇವುಗಳಲ್ಲಿ ಪಶ್ಚಿಮ ಬಂಗಾಳದ 4 ವಿಧಾನಸಭೆಗೆ ನಡೆದಿದ್ದ ಉಪಚುನಾವಣೆಯಲ್ಲಿ ಆಡಳಿತ ಪಕ್ಷವಾದ ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದೆ. ಆರು ತಿಂಗಳ ಮುಂಚೆ ಚುನಾವಣೆ ನಡೆದಿದ್ದ ಈ ನಾಲ್ಕು ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಕೇವಲ ಆರು ತಿಂಗಳಲ್ಲಿ ಅಲ್ಲಿನ ಜನರು ತಮ್ಮ ತೀರ್ಮಾನವನ್ನು ಬದಲಿಸಿ ಟಿಎಂಸಿಯನ್ನು ಗೆಲ್ಲಿಸಿದ್ದಾರೆ.

ದೀನ್‌ಹಟಾ, ಶಾಂತಿಪುರ್‌, ಖಾರ್ದಹೊ ಮತ್ತು ಗೋಸಬಾದ ನಾಲ್ಕು ಕ್ಷೇತ್ರಗಳಲ್ಲೂ ಟಿಎಂಸಿ ಭರ್ಜರಿ ಗೆಲುವು ಸಾಧಿಸಿದೆ.

ದೀನ್‌ಹಟಾ ಕ್ಷೇತ್ರದಲ್ಲಿ ಬಿಜೆಪಿಯ ನಿಸಿತ್ ಪ್ರಮಾಣಿಕ್ ಒಕ್ಕೂಟ ಸರ್ಕಾರದ ಕಿರಿಯ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ತಾನು ಗೆದ್ದದ್ದ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರದಲ್ಲಿ ಟಿಎಂಸಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, 1.89 ಲಕ್ಷ ಮತಗಳನ್ನು ಪಡೆದಿದೆ. ಬಿಜೆಪಿ ಇಲ್ಲಿ ಕೇವಲ 25 ಸಾವಿರ ಮತಗಳನ್ನಷ್ಟೇ ಪಡೆದಿದೆ. ಇಲ್ಲಿ ಟಿಎಂಸಿಯಲ್ಲಿ ಉದ್ಯಾನ್‌ ಗುಹಾ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ಅಶೋಕ್ ಮಂಡಲ್‌ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ’ಇದು ರೈತರ ಗೆಲುವು’ ಎಂದ ಅಭ್ಯರ್ಥಿ ಅಭಯ್ ಚೌಟಾಲಾ

ಶಾಂತಿಪುರ್‌ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಅವರು ತಾನು ಗೆದ್ದ ವಿಧಾನಸಭೆಗೆ ರಾಜೀನಾಮೆ ನೀಡಿದ್ದರಿಂದ ಕ್ಷೇತ್ರವು ತೆರವಾಗಿತ್ತು. ಟಿಎಂಸಿಯ ಬ್ರಜಾ ಕಿಶೋರ್‌ ಗೋಸ್ವಾಮಿ 11.1 ಲಕ್ಷ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ನಿರಂಜನ್ ಬಿಸ್ವಾಸ್‌ ಕೇವಲ 47 ಸಾವಿರ ಮತಗಳನ್ನು ಪಡೆದಿದ್ದಾರೆ.

ಖಾರ್ದಹೊ ಕ್ಷೇತ್ರವು ಕೋಲ್ಕತ್ತಾದ ಮಾಜಿ ಮೇಯರ್ ಸೋವಂದೇಬ್ ಚಟ್ಟೋಪಾಧ್ಯಾಯ ಸ್ಪರ್ಧಿಸುತ್ತಿರುವ ಕ್ಷೇತ್ರವಾಗಿದೆ. ಅವರು ಮಮತಾ ಬ್ಯಾನರ್ಜಿಗಾಗಿ ಕೋಲ್ಕತ್ತಾದ ಭವಾನಿಪುರ್‌ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. ಇಲ್ಲಿ ಅವರು 1.14 ಲಕ್ಷ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯಲ್ಲಿ ಸ್ಪರ್ಧಿಸಿದ್ದ ಜೋತ್‌ ಶಾ 20 ಸಾವಿರ ಮತಗಳನ್ನಷ್ಟೇ ಪಡೆದಿದ್ದಾರೆ.

ಗೋಸಬಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಸ್ಪರ್ಧಿಸಿದ್ದ ಸುಬ್ರತಾ ಮಂಡಲ್‌ 1.60 ಲಕ್ಷ ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಪಲಾಶಾ ರಾಣಾ 18 ಸಾವಿರ ಮತ ಪಡೆದು ಹೀನಾಯವಾಗಿ ಸೋಲುಂಡಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆಯ ಚುನಾವಣೆಯ ನಂತರ ಬಿಜೆಪಿ ಹಲವರು ಟಿಎಂಸಿಗೆ ಸೇರಿಕೊಂಡಿದ್ದರು. ಬಿಜೆಪಿಗೆ ಈ ಮುಖಭಂಗ ಉಪಚುನಾವಣೆಯಲ್ಲೂ ಮುಂದುವರೆದಿದೆ. ಜೊತೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಗೆಲುವಿನ ಸರಣಿಯು ಮುಂದುವರಿದಿದೆ.

ಚುನಾವಣಾ ಗೆಲುವನ್ನು ಸಂಭ್ರಮಿಸಿರುವ ಮಮತಾ ಬ್ಯಾನರ್ಜಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. “ಎಲ್ಲಾ ನಾಲ್ಕು ವಿಜೇತ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ಈ ವಿಜಯವು ಜನರ ವಿಜಯವಾಗಿದೆ. ಇದು ಬಂಗಾಳ ಯಾವಾಗಲೂ ಪ್ರೊಪಾಗಾಂಡ ಮತ್ತು ದ್ವೇಷದ ರಾಜಕೀಯಕ್ಕಿಂತ ಅಭಿವೃದ್ಧಿ ಮತ್ತು ಏಕತೆಯನ್ನು ಹೇಗೆ ಆರಿಸಿಕೊಳ್ಳುತ್ತದೆ ತೋರಿಸಿದೆ. ಜನರ ಆಶೀರ್ವಾದದೊಂದಿಗೆ, ಬಂಗಾಳವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುದಾಗಿ ನಾವು ಭರವಸೆ ನೀಡುತ್ತೇವೆ!” ಎಂದು ಅವರು ಹೇಳಿದ್ದಾರೆ.

ಈ ನಾಲ್ಕು ಕ್ಷೇತ್ರಗಳೊಂದಿಗೆ ರಾಜ್ಯದ ವಿಧಾನಸಭೆಯಲ್ಲಿ ಟಿಎಂಸಿಯ ಸೀಟು 213 ಕ್ಕೆ ಏರಿದೆ.

ಇದನ್ನೂ ಓದಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...