Homeಮುಖಪುಟನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ಮಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಾಲಿವುಡ್ ನಟಿ ಕಂಗನಾ ರಣಾವತ್‌ ಸ್ಪರ್ಧಿಸುವ ಕುರಿತು ಚರ್ಚೆಗಳು ಎದ್ದಿದ್ದವು.

- Advertisement -
- Advertisement -

ಹಿಮಾಚಲ ಪ್ರದೇಶದ ಮೂರು ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ನಾಲ್ಕು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಬೇರಿ ಭಾರಿಸಿದೆ. ಮಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಾಲಿವುಡ್ ನಟಿ ಕಂಗನಾ ರಣಾವತ್‌ ಸ್ಪರ್ಧಿಸುವ ಕುರಿತು ಚರ್ಚೆಗಳು ಎದ್ದಿದ್ದವು. ಕೊನೆ ಕ್ಷಣದಲ್ಲಿ ಬಿಜೆಪಿಯು ಬೇರೆಯವರಿಗೆ ಟಿಕೆಟ್ ನೀಡಿದರೂ ಬಹಳಷ್ಟು ಜನ ಕಂಗನಾ ಹೆಸರಲ್ಲಿ ಮತ ಕೇಳಿದ್ದರು. ಆದರೆ ಆ ಕ್ಷೇತ್ರದಲ್ಲಿಯೂ ಬಿಜೆಪಿ ಸೋಲನ್ನು ಅನುಭವಿಸಿದೆ.

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಆ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಇದು ಆಡಳಿತರೂಢ ಬಿಜೆಪಿಗೆ ದೊಡ್ಡ ಹೊಡೆತವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿಮಾಚಲ ಪ್ರದೇಶ ಸಿಎಂ ಜೈರಾಂ ಠಾಕೂರ್, ಸೋಲನ್ನು ಸ್ವೀಕರಿಸುತ್ತೇನೆ, ನಾನೇ ಸೋಲಿನ ಹೊಣೆಯನ್ನು ಹೊತ್ತುಕೊಳ್ಳುತ್ತೇನೆ ಎಂದಿದ್ದಾರೆ.

ಇಂದು ಕಾಂಗ್ರೆಸ್ ಗೆದ್ದಿರುವುದರಿಂದ 2022ರ ಚುನಾವಣೆಯಲ್ಲಿಯೂ ಗೆಲ್ಲುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮಧ್ಯಂತರ ಚುನಾವಣೆಗಳಲ್ಲಿ ಸೋತ ಪಕ್ಷವು ಅಂತಿಮ ಚುನಾವಣೆಯಲ್ಲಿ ಗೆಲ್ಲುವುದನ್ನು ನಾವು ಆಗಾಗ್ಗೆ ನೋಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 4 ಲಕ್ಷ ಮತಗಳ ಅಂತರದಲ್ಲಿ ಸೋಲನ್ನು ಅನುಭವಿಸಿತ್ತು. ಬಿಜೆಪಿಯ ರಾಮ್ ಸ್ವರೂಪ್ ಶರ್ಮಾ ವಿಜಯಿಯಾಗಿದ್ದರು. ಆದರೆ ಅವರು 2021ರ ಮಾರ್ಚ್‌ನಲ್ಲಿ ನಿಧನ ಹೊಂದಿದ್ದರು. ಹಾಗಾಗಿ ಅಲ್ಲಿ ಕಾಂಗ್ರೆಸ್‌ನ ಮಾಜಿ ಸಿಎಂ ವೀರಭದ್ರ ಸಿಂಗ್‌ರವರ ಪತ್ನಿ ಪ್ರತಿಭಾ ಸಿಂಗ್ ಈ ಬಾರಿ ಕಣಕ್ಕಿಳಿದಿದ್ದರು. ಅವರು ಗೆಲುವು ಸಾಧಿಸಿದ್ದಾರೆ.

ಕಂಗನಾ ರಾಣಾವತ್ ಮಂಡಿ ಜಿಲ್ಲೆಯಲ್ಲಿಯೇ ಬೆಳೆದವರು. ಮುಂಬೈನಲ್ಲಿ ನೆಲೆಸಿದರೂ ಆಗಾಗ್ಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿರುತ್ತಾರೆ. ಬಿಜೆಪಿ ಪರವಾಗಿ ಹಲವಾರು ಬಾರಿ ಹೇಳಿಕೆ ನೀಡಿದ್ದರು.

ಮುಂಬೈನಲ್ಲಿ ಆಕೆಯ ಅನಧಿಕೃತ ಕಚೇರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಕಂಗನಾ ಮುಗಿಬಿದ್ದಿದ್ದರು. ಆಗ ಬಿಜೆಪಿ ಅವರ ಬೆಂಬಲಕ್ಕೆ ನಿಂತಿತ್ತು. ಆದರೆ ಎನ್‌ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆ ಕಂಗನಾ ವಿರುದ್ಧ ಯುದ್ಧವನ್ನೇ ಸಾರಿತ್ತು. ನಂತರ ಒಕ್ಕೂಟ ಸರ್ಕಾರವು ಕಂಗನಾಗೆ ಭಾರೀ ಭದ್ರತೆ ಒದಗಿಸಿತ್ತು.

ಕಂಗನಾ ಹೋರಾಟ ನಿರತ ರೈತರನ್ನು ಅವಮಾನಿಸಿ ಹೇಳಿಕೆ ನೀಡಿದ್ದರು. ಟ್ವಿಟರ್, ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು. ಹಾಗಾಗಿ ಅವರ ವಿರುದ್ಧ ಕರ್ನಾಟಕ ಸೇರಿದಂತೆ ಹಲವೆಡೆ ದೂರುಗಳು ದಾಖಲಾಗಿವೆ. ಟ್ವಿಟರ್ ಕಂಗನಾರನ್ನು ಬ್ಯಾನ್ ಮಾಡಿದೆ.

ಈಗ ಹಿಮಾಚಲ ಪ್ರದೇಶದ ಫತೇಪುರ್, ಆರ್ಕಿ ಮತ್ತು ಜುಬ್ಬಲ್ ಕೋತ್ಕೈ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ.


ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...