Homeಕರ್ನಾಟಕಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

- Advertisement -
- Advertisement -

ಒಂದು ಕಡೆ ಬೆಲೆ ಏರಿಕೆ, ಮತ್ತೊಂದು ಕಡೆ ಸಂವಿಧಾನಿಕ ಚೌಕಟ್ಟು ಮೀರಿದ ರಾಜಕೀಯ ಮಾತುಗಾರಿಕೆ. ಇದರ ನಡುವೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯಾದ ಹಾವೇರಿಯ ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ.

ಉಪಚುನಾವಣೆ ಎಂದ ಮೇಲೆ ಆಡಳಿತರೂಢ ಪಕ್ಷಕ್ಕೆ ಪ್ರತಿಷ್ಟೆಯದ್ದಾಗಿರುತ್ತದೆ. ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯೂ ಆಗಿರುವುದರಿಂದ ಹಾನಗಲ್‌ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ಅವರು ಮುಖ್ಯಮಂತ್ರಿಯಾದ ಬಳಿಕ ಎದುರಿಸಿದ ಮೊದಲ ವಿಧಾನಸಭಾ ಉಪ ಚುನಾವಣೆಯೂ ಇದಾಗಿದ್ದು, ಪ್ರತಿಷ್ಠೆಯ ಕಣವಾಗಿತ್ತು.

ಮಾಜಿ ಸಚಿವ ಸಿ.ಎಂ.ಉದಾಸಿಯವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರದಲ್ಲಿ, ಕಾಂಗ್ರೆಸ್‌ ಪಕ್ಷವು ಕ್ಷತ್ರೀಯ ಮರಾಠ ಸಮುದಾಯದ ಶ್ರೀನಿವಾಸ ಮಾನೆಯವರಿಗೆ ಟಿಕೆಟ್ ನೀಡಿತ್ತು. ಬಿಜೆಪಿಯಿಂದ ಗಾಣಿಗ ಸಮುದಾಯದ ಶಿವರಾಜ್‌ ಸಜ್ಜನರ್‌‌ ಕಣಕ್ಕಿಳಿದಿದ್ದರು. ಸಿ.ಎಂ. ಉದಾಸಿಯವರ ಭದ್ರಕೋಟೆಯಾಗಿದ್ದ ಹಾನಗಲ್‌ನಲ್ಲಿ ಅನೇಕ ಸಲ ಕಾಂಗ್ರೆಸ್ ಅಭ್ಯರ್ಥಿಗಳೂ ಮೇಲುಗೈ ಸಾಧಿಸಿದ್ದಾರೆ. ಈ ಹಿಂದೆ ಉದಾಸಿಯವರ ವರ್ಚಿಸ್ಸಿನಿಂದಾಗಿ ನೆಲೆ ಕಂಡಿದ್ದ ಜೆಡಿಎಸ್‌, ಮುಸ್ಲಿಂ ವ್ಯಕ್ತಿ ನಿಯಾಜ್‌ ಶೇಖ್‌ ಅವರನ್ನು ಈ ಬಾರಿ ಕಣಕ್ಕಿಳಿಸಿತ್ತು.

ಇದನ್ನೂ ಓದಿರಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಸಿ.ಎಂ. ಉದಾಸಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದರೆ, ಕಾಂಗ್ರೆಸ್‌ನ ಮನೋಹರ ತಹಸೀಲ್ದಾರ್ ನಾಲ್ಕು ಬಾರಿ ಶಾಸಕರಾಗಿದ್ದರು. ಸಿ.ಎಂ. ಉದಾಸಿ ಜನತಾಪಕ್ಷ, ಜಾ.ದಳ, ಬಿಜೆಪಿ ಹಾಗೂ ಒಮ್ಮೆ ಪಕ್ಷೇತರರಾಗಿ ಗೆದ್ದಿದ್ದರು. ಹೀಗೆ ಸಿ.ಎಂ. ಉದಾಸಿಯವರಿಗೆ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದರು. ಬಿಜೆಪಿಯ ಭದ್ರಕೋಟೆಯಾಗಿಯೂ ಉದಾಸಿ ಕ್ಷೇತ್ರವನ್ನು ಬಲಪಡಿಸಿದ್ದರು. ಆದರೆ ಉದಾಸಿಯವರ ನಿಧನದ ನಂತರ ನಡೆದ ಚುನಾವಣೆ ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆಯ ಘಂಟೆಯಾಗಿ ಪರಿಣಮಿಸಿದೆ.

ಶ್ರೀನಿವಾಸ ಮಾನೆ ಮತ್ತು ಶಿವರಾಜ್‌ ಸಜ್ಜನರ್‌‌

ಮತ ಎಣಿಕೆಯ 19ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು 87,300 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್‌‌ 79,874 ಮತಗಳಿಗೆ ಸೀಮಿತವಾದರು. ಇನ್ನು ಜೆಡಿಎಸ್‌ನ ನಿಯಾಜ್ ಶೇಖ್ ಕೇವಲ 923 ಮತಗಳನ್ನು ಪಡೆದಿದ್ದಾರೆ. 7,426 ಮತಗಳ ಅಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ.

ಬಿಜೆಪಿಯ ಸೋಲಿಗೆ ಕಾರಣಗಳು

  1. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಕೋವಿಡ್ ಸಮಯದಲ್ಲಿ ಮಾಡಿರುವ ಕೆಲಸಗಳು ಕಾಂಗ್ರೆಸ್‌ ಪರ ಮತದಾರರು ವಾಲಲು ಕಾರಣವಾಯಿತು. ಶ್ರೀನಿವಾಸ ಮಾನೆ ಹಾಗೂ ಮನೋಹರ ತಹಸಿಲ್ದಾರ್‌ ಬಣದ ನಡುವಿನ ಕಿತ್ತಾಟಗಳು ಕೊನೆ ಹಂತದಲ್ಲಿ ತಣ್ಣಗಾಗಿದ್ದವು.
  2. ಎಲ್ಲ ಪಕ್ಷಗಳ ಅಭ್ಯರ್ಥಿಗಳೂ ಹೊರಗಿನವರಾಗಿದ್ದರು. ದುಡ್ಡು ಹೊರಗಿನದ್ದಾಗಿತ್ತು. ಪ್ರಚಾರದಲ್ಲಿ ಪಾಲ್ಗೊಂಡ ಬಹುತೇಕ ಕಾರ್ಯಕರ್ತರೂ ಹೊರಗಿನವರಾಗಿದ್ದರು. ವಾಹನಗಳೂ ಹೊರಗಿನವು, ಘೋಷಣೆ ಕೂಗುವವರು ಹೊರಗಿನವರಾಗಿದ್ದರು. ಮಾನೆಯವರು ಕ್ಷೇತ್ರದ ಹೊರಗಿನವರಾದರೂ ದೀರ್ಘಕಾಲದ ಸಂಪರ್ಕ ಸಾಧಿಸಿ, ಜನರಿಗೆ ಹತ್ತಿರವಾಗಿದ್ದರು.ಇದನ್ನೂ ಓದಿರಿ: ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು
  3. ಮಾನೆಯವರು ಕೋವಿಡ್ ಸಂದರ್ಭದಲ್ಲಿ ಮಾಡಿಸಿದ ಕೆಲಸಗಳನ್ನು ಮುನ್ನೆಲೆಗೆ ತಂದು ಪ್ರಚಾರ ಪಡೆದರು. ಶಿವರಾಜ್‌ ಸಜ್ಜನರ್‌ ಅವರು ದಿಢೀರನೆ ಕ್ಷೇತ್ರಕ್ಕೆ ಬಂದವರು. ಅವರ ಮೇಲೆ ಸಂಗೂರು ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪಗಳಿದ್ದವು.
  4. ಕಾಂಗ್ರೆಸ್‌ ಮತ್ತು ಬಿಜೆಪಿ ಎರಡರಲ್ಲೂ ಬಿ ಟೀಮ್‌ಗಳು ಕೆಲಸ ಮಾಡಿದ್ದವು. ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಬಿ ಟೀಮ್‌ನ ಕೆಲಸಗಳು ಸ್ಪಲ್ಪ ಗೌಣವಾಗಿಯಿತು. ಬಿಜೆಪಿ ಕಾರ್ಯಕರ್ತರೇ ‘ಬಿ’ ಟೀಮ್‌ ಆಗಿ ಪರಿವರ್ತನೆಯಾಗಿದ್ದರು. ಶಿವರಾಜ್‌ ಸಜ್ಜನರ್‌ ಆರ್‌‌ಎಸ್‌ಎಸ್‌ ಕಾರ್ಯಕರ್ತನಲ್ಲ, ಕ್ಷೇತ್ರದ ವ್ಯಕ್ತಿಯಲ್ಲ. ಆತ ತಮ್ಮ ಸಂಪರ್ಕದಲ್ಲೇ ಇಲ್ಲ ಎಂಬ ಭಾವನೆ ಕಾರ್ಯಕರ್ತರಿಗಿತ್ತು. ಸ್ಥಳೀಯ ಬಿಜೆಪಿ ಮುಖಂಡರಲ್ಲಿ ಯಾರನ್ನಾದರೂ ಚುನಾವಣೆಗೆ ನಿಲ್ಲಿಸಿದ್ದರೂ ಗೆಲುವು ಸಾಧಿಸಬಹುದಿತ್ತು ಎಂದು ಕೆಲವರು ಹೇಳುತ್ತಾರೆ.
  5. ಹಾನಗಲ್ ತಾಲ್ಲೂಕಿನಲ್ಲಿ ದುಡ್ಡು ಇಂದು ನಡೆದಿಲ್ಲ, ಹಿಂದೆಯೂ ನಡೆದಿಲ್ಲ, ಮುಂದೆಯೂ ನಡೆಯಲ್ಲ. ಸೋಲಿಸುವ ಚುನಾವಣೆಗಳನ್ನು ನಡೆಸುವುದು ಕ್ಷೇತ್ರದ ವೈಶಿಷ್ಟ್ಯ. ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್‌ ಉದಾಸಿಯವರ ಒಟ್ಟು ತಂಡವನ್ನು ಸೋಲಿಸುವ ಚುನಾವಣೆ ಇದಾಗಿತ್ತು. ಮಾನೆಯನ್ನು ಗೆಲ್ಲಿಸುವ ಚುನಾವಣೆ ಎಂಬುದಕ್ಕಿಂತ ಉದಾಸಿಯನ್ನು ಸೋಲಿಸುವ ಚುನಾವಣೆ ಇದಾಗಿತ್ತು ಎನ್ನುತ್ತಾರೆ ನೋಟಾ ಮತದಾನ ಜಾಗೃತಿ ಮೂಡಿಸುತ್ತಿರುವ ಪ್ರಶಾಂತ್‌ ಮುಚ್ಚಂಡಿ.
  6. ದುಡ್ಡು ತೆಗೆದುಕೊಂಡು ಬಂದು, ಜಾತಿ ಮುಂದೆ ಮಾಡಿ ಚುನಾವಣೆ ನಡೆಸುತ್ತೇನೆಂದರೆ ಇಲ್ಲಿ ನಡೆಯಲ್ಲ. ಕಡಿಮೆ ಅವಧಿಯ ತಂತ್ರಗಾರಿಕೆ ಫಲಿಸುವುದಿಲ್ಲ. ದೀರ್ಘಕಾಲೀನ ತಂತ್ರಗಾರಿಕೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತದೆ. ಇದು ಸಿ.ಎಂ.ಉದಾಸಿಯವರಿಗೂ ತಿಳಿದಿತ್ತು. ಉದಾಸಿಯವರು ಒಮ್ಮೆ ಸೋತಾಗ ಬೆಳೆ ವಿಮೆ ಹೋರಾಟವನ್ನು ಆರಂಭಿಸಿದ್ದರು. ನಂತರದ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದರು. ಬೆಳೆ ವಿಮೆ ಹೋರಾಟ ಯಾವ ಮಟ್ಟಕ್ಕೆ ಆಗಿತ್ತೆಂದರೆ, ಹಣವನ್ನು ಹೆಚ್ಚಾಗಿ ಖರ್ಚು ಮಾಡುವ ಪ್ರಮೇಯವೇ ಅವರಿಗೆ ಬಂದಿರಲಿಲ್ಲ ಎಂದು ನೆನೆಯುತ್ತಾರೆ ಪ್ರಶಾಂತ್‌ ಮುಚ್ಚಂಡಿ.
  7. ಶಿವರಾಜ್ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ಕರೆತಂದಿದ್ದು ಬಿಜೆಪಿ ಮಾಡಿದ ತಪ್ಪೇನಲ್ಲ. ಆದರೆ ಕಡಿಮೆ ಅವಧಿಯಲ್ಲಿ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ತಂದರು. ಮೊದಲೇ ಕ್ಷೇತ್ರಕ್ಕೆ ಸಜ್ಜನರ್‌ ಬಂದು, ಜನರೊಂದಿಗೆ ಒಡನಾಡಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಾಷಣಗಳನ್ನು ಮಾಡಿ ವರ್ಚಸ್ಸು ವೃದ್ಧಿಸಿಕೊಳ್ಳಬೇಕಿತ್ತು. ಒಂದು ತಂಡವನ್ನು ರೂಪಿಸಿಕೊಳ್ಳಬೇಕಿತ್ತು, ಜನರಲ್ಲಿ ಭರವಸೆಗಳನ್ನು ಬಿತ್ತಬೇಕಿತ್ತು. ಇಷ್ಟಾದರೂ ಮಾಡಿದ್ದರೂ ಬಿಜೆಪಿಗೆ ಅನುಕೂಲವಾಗುತ್ತಿತ್ತು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ.

ಇದನ್ನೂ ಓದಿರಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಶಿವಕುಮಾರ್‌ ಉದಾಸಿ ಕಡೆಗಣಿಸಲು ಸಾಧ್ಯವೆ?

ಬಿಜೆಪಿ ಅಭ್ಯರ್ಥಿಯಾಗಿರುವ ಶಿವರಾಜ್‌ ಸಜ್ಜನರ್ ಉದಾಸಿಯವರ ಕುಟುಂಬಕ್ಕೆ ಆಪ್ತರು. ಸಿ.ಎಂ.ಉದಾಸಿಯವರ ಮಾನಸಪುತ್ರ ಎಂದೇ ಖ್ಯಾತರಾಗಿದ್ದರು. ಸಜ್ಜನರ್‌ ಅವರಿಗೆ ನೀಡಿದ ಟಿಕೆಟ್‌, ಉದಾಸಿ ಕುಟುಂಬಕ್ಕೇ ನೀಡಿದ ಟಿಕೆಟ್ ಅಲ್ಲದೇ ಬೇರೇನೂ ಅಲ್ಲ ಎಂದು ಭಾವಿಸಲಾಗಿತ್ತು. ಈ ಸೋಲಿನ ನಂತರ ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್ ಉದಾಸಿಯವರನ್ನು ಬಿಜೆಪಿ ಕಡೆಗಣಿಸಲಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ಈ ಸೋಲಿನ ನಂತದಲ್ಲಿ ಶಿವಕುಮಾರ್‌ ಉದಾಸಿ ಅವರನ್ನು  ಪರಿಗಣನೆಗೆ ತೆಗೆದುಕೊಳ್ಳದಿದ್ದರೆ ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತಿರುಗುಬಾಣವೂ ಆಗಬಹುದು ಎನ್ನುತ್ತಾರೆ ಕ್ಷೇತ್ರದ ಮುಖಂಡರು. ಒಂದು ದೊಡ್ಡ ತಂಡವನ್ನೇ ಬೇರೆ ಪಕ್ಷಕ್ಕೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಶಿವಕುಮಾರ್‌ ಉದಾಸಿಯವರಿಗಿದೆ. ಕಾಂಗ್ರೆಸ್‌ಗೆ ಹೋದರೂ ಹೋಗಬಹುದು. “ಎಂಎಲ್‌ಎ ಟಿಕೆಟ್‌ ನನ್ನ ಪತ್ನಿಗೆ ಕೊಡಿ, ಎಂಪಿ ಟಿಕೆಟ್‌ ನನಗೆ ಕೊಡಿ” ಎಂದು ಕಾಂಗ್ರೆಸ್‌ ಮುಂದೆ ಉದಾಸಿಯವರು ಬೇಡಿಕೆ ಇಡಬಹುದು. ಕಾಂಗ್ರೆಸ್‌ನವರು ಸುಲಭವಾಗಿ ಟಿಕೆಟ್‌ ಕೊಟ್ಟುಬಿಡುವ ಸಾಧ್ಯತೆಯೂ ಇದೆ. ಹೀಗಾಗಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡುವುದು ಖಚಿತ. ಒಂದು ವೇಳೆ ಉದಾಸಿಯವರನ್ನು ನಿರ್ಲಕ್ಷಿಸಿದರೆ ಕ್ಷೇತ್ರದಲ್ಲಿ ಬಿಜೆಪಿ ಒಡೆದುಹೋಗುವ ಸಾಧ್ಯತೆಯೇ ಹೆಚ್ಚು ಎನ್ನುತ್ತಾರೆ ವಿಶ್ಲೇಷಕರು.

ಮಾನೆ ಮುಂದಿದೆ ಸವಾಲು

ಶ್ರೀನಿವಾಸ ಮಾನೆಯವರ ಮುಂದೆ ಸಾಕಷ್ಟು ಸವಾಲುಗಳಿವೆ. ಕಡಿಮೆ ಅವಧಿಯಲ್ಲಿ ಮತ್ತೆ ಚುನಾವಣೆ ಎದುರಾಗಲಿದೆ. ಬಡವರ ಬೇಡಿಕೆಗಳನ್ನು ಬೇಗನೆ ಈಡೇರಿಸದಿದ್ದರೆ ಮುಂದಿನ ಚುಣಾವಣೆಯಲ್ಲಿ ಮಾನೆಯವರಿಗೆ ತಿರುಗುಬಾಣವಾಗಲು ಸಾಧ್ಯತೆಗಳಿವೆ. ಜೊತೆಗೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗದೆ ಇರಬಹುದು. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಸಂಘಟಿತವಾಗಲು ಇದು ಸರಿಯಾದ ಸಮಯ.


ಇದನ್ನೂ ಓದಿರಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...