Homeಕರ್ನಾಟಕಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

- Advertisement -
- Advertisement -

ಒಂದು ಕಡೆ ಬೆಲೆ ಏರಿಕೆ, ಮತ್ತೊಂದು ಕಡೆ ಸಂವಿಧಾನಿಕ ಚೌಕಟ್ಟು ಮೀರಿದ ರಾಜಕೀಯ ಮಾತುಗಾರಿಕೆ. ಇದರ ನಡುವೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯಾದ ಹಾವೇರಿಯ ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ.

ಉಪಚುನಾವಣೆ ಎಂದ ಮೇಲೆ ಆಡಳಿತರೂಢ ಪಕ್ಷಕ್ಕೆ ಪ್ರತಿಷ್ಟೆಯದ್ದಾಗಿರುತ್ತದೆ. ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯೂ ಆಗಿರುವುದರಿಂದ ಹಾನಗಲ್‌ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ಅವರು ಮುಖ್ಯಮಂತ್ರಿಯಾದ ಬಳಿಕ ಎದುರಿಸಿದ ಮೊದಲ ವಿಧಾನಸಭಾ ಉಪ ಚುನಾವಣೆಯೂ ಇದಾಗಿದ್ದು, ಪ್ರತಿಷ್ಠೆಯ ಕಣವಾಗಿತ್ತು.

ಮಾಜಿ ಸಚಿವ ಸಿ.ಎಂ.ಉದಾಸಿಯವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರದಲ್ಲಿ, ಕಾಂಗ್ರೆಸ್‌ ಪಕ್ಷವು ಕ್ಷತ್ರೀಯ ಮರಾಠ ಸಮುದಾಯದ ಶ್ರೀನಿವಾಸ ಮಾನೆಯವರಿಗೆ ಟಿಕೆಟ್ ನೀಡಿತ್ತು. ಬಿಜೆಪಿಯಿಂದ ಗಾಣಿಗ ಸಮುದಾಯದ ಶಿವರಾಜ್‌ ಸಜ್ಜನರ್‌‌ ಕಣಕ್ಕಿಳಿದಿದ್ದರು. ಸಿ.ಎಂ. ಉದಾಸಿಯವರ ಭದ್ರಕೋಟೆಯಾಗಿದ್ದ ಹಾನಗಲ್‌ನಲ್ಲಿ ಅನೇಕ ಸಲ ಕಾಂಗ್ರೆಸ್ ಅಭ್ಯರ್ಥಿಗಳೂ ಮೇಲುಗೈ ಸಾಧಿಸಿದ್ದಾರೆ. ಈ ಹಿಂದೆ ಉದಾಸಿಯವರ ವರ್ಚಿಸ್ಸಿನಿಂದಾಗಿ ನೆಲೆ ಕಂಡಿದ್ದ ಜೆಡಿಎಸ್‌, ಮುಸ್ಲಿಂ ವ್ಯಕ್ತಿ ನಿಯಾಜ್‌ ಶೇಖ್‌ ಅವರನ್ನು ಈ ಬಾರಿ ಕಣಕ್ಕಿಳಿಸಿತ್ತು.

ಇದನ್ನೂ ಓದಿರಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಸಿ.ಎಂ. ಉದಾಸಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದರೆ, ಕಾಂಗ್ರೆಸ್‌ನ ಮನೋಹರ ತಹಸೀಲ್ದಾರ್ ನಾಲ್ಕು ಬಾರಿ ಶಾಸಕರಾಗಿದ್ದರು. ಸಿ.ಎಂ. ಉದಾಸಿ ಜನತಾಪಕ್ಷ, ಜಾ.ದಳ, ಬಿಜೆಪಿ ಹಾಗೂ ಒಮ್ಮೆ ಪಕ್ಷೇತರರಾಗಿ ಗೆದ್ದಿದ್ದರು. ಹೀಗೆ ಸಿ.ಎಂ. ಉದಾಸಿಯವರಿಗೆ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದರು. ಬಿಜೆಪಿಯ ಭದ್ರಕೋಟೆಯಾಗಿಯೂ ಉದಾಸಿ ಕ್ಷೇತ್ರವನ್ನು ಬಲಪಡಿಸಿದ್ದರು. ಆದರೆ ಉದಾಸಿಯವರ ನಿಧನದ ನಂತರ ನಡೆದ ಚುನಾವಣೆ ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆಯ ಘಂಟೆಯಾಗಿ ಪರಿಣಮಿಸಿದೆ.

ಶ್ರೀನಿವಾಸ ಮಾನೆ ಮತ್ತು ಶಿವರಾಜ್‌ ಸಜ್ಜನರ್‌‌

ಮತ ಎಣಿಕೆಯ 19ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು 87,300 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್‌‌ 79,874 ಮತಗಳಿಗೆ ಸೀಮಿತವಾದರು. ಇನ್ನು ಜೆಡಿಎಸ್‌ನ ನಿಯಾಜ್ ಶೇಖ್ ಕೇವಲ 923 ಮತಗಳನ್ನು ಪಡೆದಿದ್ದಾರೆ. 7,426 ಮತಗಳ ಅಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ.

ಬಿಜೆಪಿಯ ಸೋಲಿಗೆ ಕಾರಣಗಳು

  1. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಕೋವಿಡ್ ಸಮಯದಲ್ಲಿ ಮಾಡಿರುವ ಕೆಲಸಗಳು ಕಾಂಗ್ರೆಸ್‌ ಪರ ಮತದಾರರು ವಾಲಲು ಕಾರಣವಾಯಿತು. ಶ್ರೀನಿವಾಸ ಮಾನೆ ಹಾಗೂ ಮನೋಹರ ತಹಸಿಲ್ದಾರ್‌ ಬಣದ ನಡುವಿನ ಕಿತ್ತಾಟಗಳು ಕೊನೆ ಹಂತದಲ್ಲಿ ತಣ್ಣಗಾಗಿದ್ದವು.
  2. ಎಲ್ಲ ಪಕ್ಷಗಳ ಅಭ್ಯರ್ಥಿಗಳೂ ಹೊರಗಿನವರಾಗಿದ್ದರು. ದುಡ್ಡು ಹೊರಗಿನದ್ದಾಗಿತ್ತು. ಪ್ರಚಾರದಲ್ಲಿ ಪಾಲ್ಗೊಂಡ ಬಹುತೇಕ ಕಾರ್ಯಕರ್ತರೂ ಹೊರಗಿನವರಾಗಿದ್ದರು. ವಾಹನಗಳೂ ಹೊರಗಿನವು, ಘೋಷಣೆ ಕೂಗುವವರು ಹೊರಗಿನವರಾಗಿದ್ದರು. ಮಾನೆಯವರು ಕ್ಷೇತ್ರದ ಹೊರಗಿನವರಾದರೂ ದೀರ್ಘಕಾಲದ ಸಂಪರ್ಕ ಸಾಧಿಸಿ, ಜನರಿಗೆ ಹತ್ತಿರವಾಗಿದ್ದರು.ಇದನ್ನೂ ಓದಿರಿ: ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು
  3. ಮಾನೆಯವರು ಕೋವಿಡ್ ಸಂದರ್ಭದಲ್ಲಿ ಮಾಡಿಸಿದ ಕೆಲಸಗಳನ್ನು ಮುನ್ನೆಲೆಗೆ ತಂದು ಪ್ರಚಾರ ಪಡೆದರು. ಶಿವರಾಜ್‌ ಸಜ್ಜನರ್‌ ಅವರು ದಿಢೀರನೆ ಕ್ಷೇತ್ರಕ್ಕೆ ಬಂದವರು. ಅವರ ಮೇಲೆ ಸಂಗೂರು ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪಗಳಿದ್ದವು.
  4. ಕಾಂಗ್ರೆಸ್‌ ಮತ್ತು ಬಿಜೆಪಿ ಎರಡರಲ್ಲೂ ಬಿ ಟೀಮ್‌ಗಳು ಕೆಲಸ ಮಾಡಿದ್ದವು. ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಬಿ ಟೀಮ್‌ನ ಕೆಲಸಗಳು ಸ್ಪಲ್ಪ ಗೌಣವಾಗಿಯಿತು. ಬಿಜೆಪಿ ಕಾರ್ಯಕರ್ತರೇ ‘ಬಿ’ ಟೀಮ್‌ ಆಗಿ ಪರಿವರ್ತನೆಯಾಗಿದ್ದರು. ಶಿವರಾಜ್‌ ಸಜ್ಜನರ್‌ ಆರ್‌‌ಎಸ್‌ಎಸ್‌ ಕಾರ್ಯಕರ್ತನಲ್ಲ, ಕ್ಷೇತ್ರದ ವ್ಯಕ್ತಿಯಲ್ಲ. ಆತ ತಮ್ಮ ಸಂಪರ್ಕದಲ್ಲೇ ಇಲ್ಲ ಎಂಬ ಭಾವನೆ ಕಾರ್ಯಕರ್ತರಿಗಿತ್ತು. ಸ್ಥಳೀಯ ಬಿಜೆಪಿ ಮುಖಂಡರಲ್ಲಿ ಯಾರನ್ನಾದರೂ ಚುನಾವಣೆಗೆ ನಿಲ್ಲಿಸಿದ್ದರೂ ಗೆಲುವು ಸಾಧಿಸಬಹುದಿತ್ತು ಎಂದು ಕೆಲವರು ಹೇಳುತ್ತಾರೆ.
  5. ಹಾನಗಲ್ ತಾಲ್ಲೂಕಿನಲ್ಲಿ ದುಡ್ಡು ಇಂದು ನಡೆದಿಲ್ಲ, ಹಿಂದೆಯೂ ನಡೆದಿಲ್ಲ, ಮುಂದೆಯೂ ನಡೆಯಲ್ಲ. ಸೋಲಿಸುವ ಚುನಾವಣೆಗಳನ್ನು ನಡೆಸುವುದು ಕ್ಷೇತ್ರದ ವೈಶಿಷ್ಟ್ಯ. ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್‌ ಉದಾಸಿಯವರ ಒಟ್ಟು ತಂಡವನ್ನು ಸೋಲಿಸುವ ಚುನಾವಣೆ ಇದಾಗಿತ್ತು. ಮಾನೆಯನ್ನು ಗೆಲ್ಲಿಸುವ ಚುನಾವಣೆ ಎಂಬುದಕ್ಕಿಂತ ಉದಾಸಿಯನ್ನು ಸೋಲಿಸುವ ಚುನಾವಣೆ ಇದಾಗಿತ್ತು ಎನ್ನುತ್ತಾರೆ ನೋಟಾ ಮತದಾನ ಜಾಗೃತಿ ಮೂಡಿಸುತ್ತಿರುವ ಪ್ರಶಾಂತ್‌ ಮುಚ್ಚಂಡಿ.
  6. ದುಡ್ಡು ತೆಗೆದುಕೊಂಡು ಬಂದು, ಜಾತಿ ಮುಂದೆ ಮಾಡಿ ಚುನಾವಣೆ ನಡೆಸುತ್ತೇನೆಂದರೆ ಇಲ್ಲಿ ನಡೆಯಲ್ಲ. ಕಡಿಮೆ ಅವಧಿಯ ತಂತ್ರಗಾರಿಕೆ ಫಲಿಸುವುದಿಲ್ಲ. ದೀರ್ಘಕಾಲೀನ ತಂತ್ರಗಾರಿಕೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತದೆ. ಇದು ಸಿ.ಎಂ.ಉದಾಸಿಯವರಿಗೂ ತಿಳಿದಿತ್ತು. ಉದಾಸಿಯವರು ಒಮ್ಮೆ ಸೋತಾಗ ಬೆಳೆ ವಿಮೆ ಹೋರಾಟವನ್ನು ಆರಂಭಿಸಿದ್ದರು. ನಂತರದ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದರು. ಬೆಳೆ ವಿಮೆ ಹೋರಾಟ ಯಾವ ಮಟ್ಟಕ್ಕೆ ಆಗಿತ್ತೆಂದರೆ, ಹಣವನ್ನು ಹೆಚ್ಚಾಗಿ ಖರ್ಚು ಮಾಡುವ ಪ್ರಮೇಯವೇ ಅವರಿಗೆ ಬಂದಿರಲಿಲ್ಲ ಎಂದು ನೆನೆಯುತ್ತಾರೆ ಪ್ರಶಾಂತ್‌ ಮುಚ್ಚಂಡಿ.
  7. ಶಿವರಾಜ್ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ಕರೆತಂದಿದ್ದು ಬಿಜೆಪಿ ಮಾಡಿದ ತಪ್ಪೇನಲ್ಲ. ಆದರೆ ಕಡಿಮೆ ಅವಧಿಯಲ್ಲಿ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ತಂದರು. ಮೊದಲೇ ಕ್ಷೇತ್ರಕ್ಕೆ ಸಜ್ಜನರ್‌ ಬಂದು, ಜನರೊಂದಿಗೆ ಒಡನಾಡಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಾಷಣಗಳನ್ನು ಮಾಡಿ ವರ್ಚಸ್ಸು ವೃದ್ಧಿಸಿಕೊಳ್ಳಬೇಕಿತ್ತು. ಒಂದು ತಂಡವನ್ನು ರೂಪಿಸಿಕೊಳ್ಳಬೇಕಿತ್ತು, ಜನರಲ್ಲಿ ಭರವಸೆಗಳನ್ನು ಬಿತ್ತಬೇಕಿತ್ತು. ಇಷ್ಟಾದರೂ ಮಾಡಿದ್ದರೂ ಬಿಜೆಪಿಗೆ ಅನುಕೂಲವಾಗುತ್ತಿತ್ತು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ.

ಇದನ್ನೂ ಓದಿರಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಶಿವಕುಮಾರ್‌ ಉದಾಸಿ ಕಡೆಗಣಿಸಲು ಸಾಧ್ಯವೆ?

ಬಿಜೆಪಿ ಅಭ್ಯರ್ಥಿಯಾಗಿರುವ ಶಿವರಾಜ್‌ ಸಜ್ಜನರ್ ಉದಾಸಿಯವರ ಕುಟುಂಬಕ್ಕೆ ಆಪ್ತರು. ಸಿ.ಎಂ.ಉದಾಸಿಯವರ ಮಾನಸಪುತ್ರ ಎಂದೇ ಖ್ಯಾತರಾಗಿದ್ದರು. ಸಜ್ಜನರ್‌ ಅವರಿಗೆ ನೀಡಿದ ಟಿಕೆಟ್‌, ಉದಾಸಿ ಕುಟುಂಬಕ್ಕೇ ನೀಡಿದ ಟಿಕೆಟ್ ಅಲ್ಲದೇ ಬೇರೇನೂ ಅಲ್ಲ ಎಂದು ಭಾವಿಸಲಾಗಿತ್ತು. ಈ ಸೋಲಿನ ನಂತರ ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್ ಉದಾಸಿಯವರನ್ನು ಬಿಜೆಪಿ ಕಡೆಗಣಿಸಲಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ಈ ಸೋಲಿನ ನಂತದಲ್ಲಿ ಶಿವಕುಮಾರ್‌ ಉದಾಸಿ ಅವರನ್ನು  ಪರಿಗಣನೆಗೆ ತೆಗೆದುಕೊಳ್ಳದಿದ್ದರೆ ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತಿರುಗುಬಾಣವೂ ಆಗಬಹುದು ಎನ್ನುತ್ತಾರೆ ಕ್ಷೇತ್ರದ ಮುಖಂಡರು. ಒಂದು ದೊಡ್ಡ ತಂಡವನ್ನೇ ಬೇರೆ ಪಕ್ಷಕ್ಕೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಶಿವಕುಮಾರ್‌ ಉದಾಸಿಯವರಿಗಿದೆ. ಕಾಂಗ್ರೆಸ್‌ಗೆ ಹೋದರೂ ಹೋಗಬಹುದು. “ಎಂಎಲ್‌ಎ ಟಿಕೆಟ್‌ ನನ್ನ ಪತ್ನಿಗೆ ಕೊಡಿ, ಎಂಪಿ ಟಿಕೆಟ್‌ ನನಗೆ ಕೊಡಿ” ಎಂದು ಕಾಂಗ್ರೆಸ್‌ ಮುಂದೆ ಉದಾಸಿಯವರು ಬೇಡಿಕೆ ಇಡಬಹುದು. ಕಾಂಗ್ರೆಸ್‌ನವರು ಸುಲಭವಾಗಿ ಟಿಕೆಟ್‌ ಕೊಟ್ಟುಬಿಡುವ ಸಾಧ್ಯತೆಯೂ ಇದೆ. ಹೀಗಾಗಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡುವುದು ಖಚಿತ. ಒಂದು ವೇಳೆ ಉದಾಸಿಯವರನ್ನು ನಿರ್ಲಕ್ಷಿಸಿದರೆ ಕ್ಷೇತ್ರದಲ್ಲಿ ಬಿಜೆಪಿ ಒಡೆದುಹೋಗುವ ಸಾಧ್ಯತೆಯೇ ಹೆಚ್ಚು ಎನ್ನುತ್ತಾರೆ ವಿಶ್ಲೇಷಕರು.

ಮಾನೆ ಮುಂದಿದೆ ಸವಾಲು

ಶ್ರೀನಿವಾಸ ಮಾನೆಯವರ ಮುಂದೆ ಸಾಕಷ್ಟು ಸವಾಲುಗಳಿವೆ. ಕಡಿಮೆ ಅವಧಿಯಲ್ಲಿ ಮತ್ತೆ ಚುನಾವಣೆ ಎದುರಾಗಲಿದೆ. ಬಡವರ ಬೇಡಿಕೆಗಳನ್ನು ಬೇಗನೆ ಈಡೇರಿಸದಿದ್ದರೆ ಮುಂದಿನ ಚುಣಾವಣೆಯಲ್ಲಿ ಮಾನೆಯವರಿಗೆ ತಿರುಗುಬಾಣವಾಗಲು ಸಾಧ್ಯತೆಗಳಿವೆ. ಜೊತೆಗೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗದೆ ಇರಬಹುದು. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಸಂಘಟಿತವಾಗಲು ಇದು ಸರಿಯಾದ ಸಮಯ.


ಇದನ್ನೂ ಓದಿರಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...