Homeಮುಖಪುಟಲೋಕಸಭಾ ಉಪ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

ಲೋಕಸಭಾ ಉಪ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

- Advertisement -
- Advertisement -

ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ದಾದ್ರ ನಗರ ಹಾವೇಲಿಯ ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.

ಹಿಮಾಚಲ ಪ್ರದೇಶ – ಮಂಡಿ

ಮಂಡಿ ಲೋಕಸಭಾ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 4 ಲಕ್ಷ ಮತಗಳ ಅಂತರದಲ್ಲಿ ಸೋಲನ್ನು ಅನುಭವಿಸಿತ್ತು. ಆಗ ಬಿಜೆಪಿಯ ರಾಮ್ ಸ್ವರೂಪ್ ಶರ್ಮಾ ವಿಜಯಿಯಾಗಿದ್ದರು. ಆದರೆ ಅವರು 2021ರ ಮಾರ್ಚ್‌ನಲ್ಲಿ ನಿಧನ ಹೊಂದಿದ್ದರು. ಹಾಗಾಗಿ ಅಲ್ಲಿ ಉಪಚುನಾವಣೆ ಘೋಷಣೆಯಾಗಿತ್ತು. ಬಿಜೆಪಿಯು ಬ್ರಿಗೇಡಿಯರ್ ಖುಶಾಲ್ ಸಿಂಗ್ ಠಾಕೂರ್ ರವರಿಗೆ ಟಿಕೆಟ್ ನೀಡಿತ್ತು. ಕಾಂಗ್ರೆಸ್‌ ಪಕ್ಷವು ಮಾಜಿ ಸಿಎಂ ವೀರಭದ್ರ ಸಿಂಗ್‌ರವರ ಪತ್ನಿ ಪ್ರತಿಭಾ ಸಿಂಗ್ ರವರನ್ನು ಕಣಕ್ಕಿಳಿಸಿದ್ದರು. ನೇರಾ ನೇರ ಪೈಪೋಟಿ ನಡೆದು ಕೊನೆಗೆ ಕಾಂಗ್ರೆಸ್‌ನ ಪ್ರತಿಭಾ ಸಿಂಗ್ 7,490 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲಿಗೆ ಬಿಜೆಪಿ ಸ್ಥಾನ ಕಾಂಗ್ರೆಸ್ ಪಾಲಾಗಿದೆ.

ಮಧ್ಯಪ್ರದೇಶ – ಖಾಂಡ್ವಾ

ಬಿಜೆಪಿ ಅಭ್ಯರ್ಥಿ ಜ್ಞಾನೇಶ್ವರ್ ಪಾಟೀಲ್ ಅವರು ತಮ್ಮ ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಾಜನಾರಾಯಣ್ ಸಿಂಗ್ ಅವರನ್ನು 80,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ನಂದಕುಮಾರ್ ಸಿಂಗ್ ಚೌಹಾಣ್ ಅವರ ನಿಧನದ ನಂತರ ಖಾಂಡ್ವಾ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಈ ಗೆಲುವಿನ ಮೂಲಕ ಆ ಸ್ಥಾನವನ್ನು ಬಿಜೆಪಿ ಉಳಿಸಿಕೊಂಡಿದೆ.

ದಾದ್ರ ಮತ್ತು ನಗರ ಹಾವೇಲಿ

ಮಾಜಿ ಸ್ವತಂತ್ರ ಸಂಸದ ದಿವಂಗತ ಮೋಹನ್ ದೇಲ್ಕರ್ ಅವರ ಪತ್ನಿ, ಶಿವಸೇನಾ ಅಭ್ಯರ್ಥಿ ಕಲಾಬೆನ್ ದೇಲ್ಕರ್ ಅವರು ದಾದ್ರಾ ಮತ್ತು ನಗರ ಹಾವೇಲಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ 51,269 ಮತಗಳಿಂದ ಗೆದ್ದಿದ್ದಾರೆ.

2019 ರಲ್ಲಿ ಸ್ವತಂತ್ರ ಅಭ್ಯರ್ಥಿ ಮೋಹನ್ ದೇಲ್ಕರ್ ಬಿಜೆಪಿಯ ನಾಥುಭೈ ಪಟೇಲ್ ಅವರನ್ನು 9001 ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ ಈ ವರ್ಷದ ಫೆಬ್ರವರಿ 22 ರಂದು ಸಂಸದರಾಗಿದ್ದ ಮೋಹನ್ ದೇಲ್ಕರ್ ಹೋಟೆಲ್ ಒಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಹಾಗಾಗಿ ಇಲ್ಲಿ ಉಪಚುನಾವಣೆ ನಡೆಸಲಾಯಿತು. ಅವರ ಪತ್ನಿ ಶಿವಸೇನೆ ಟಿಕೆಟ್ ಅಡಿಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಅಲ್ಲಿಗೆ ಸ್ವತಂತ್ರ ಅಭ್ಯರ್ಥಿಯ ಸ್ಥಾನ ಶಿವಸೇನೆ ಪಾಲಾಗಿದೆ.


ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...