Homeಮುಖಪುಟದೇಶದ 30 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶ; ಯಾರಿಗೆ ಎಷ್ಟು? ಯಾರಿಗೆ ಲಾಭ?

ದೇಶದ 30 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶ; ಯಾರಿಗೆ ಎಷ್ಟು? ಯಾರಿಗೆ ಲಾಭ?

- Advertisement -
- Advertisement -

ದೇಶದ 14 ರಾಜ್ಯಗಳ 30 ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಫಲಿತಾಂಶಗಳನ್ನು ಪಕ್ಷವಾರು ಆಧಾರಲ್ಲಿ ನೋಡಿದರೆ ಮೂವತ್ತು ಸ್ಥಾನಗಳಲ್ಲಿ ಅತೀ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರ ಹೊಮ್ಮಿದೆ. ಬಿಜೆಪಿಗೆ ಏಳು ಸ್ಥಾನಗಳು ದಕ್ಕಿದರೆ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ನಾಲ್ಕು ಸ್ಥಾನಗಳು ಟಿಎಂಸಿಯ ಪಾಲಾಗಿದೆ.

ಒಟ್ಟು ಉಪಚುನಾವಣೆಯ ಫಲಿತಾಂಶ ಹೀಗಿದೆ

1. ಆಂಧ್ರಪ್ರದೇಶ

  • ಬದ್ವೇಲ್‌ ಕ್ಷೇತ್ರ – ವೈಎಸ್‌ಆರ್‌‌ ಕಾಂಗ್ರೆಸ್‌

ಕ್ಷೇತ್ರವು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಹಿಡಿತದಲ್ಲಿತ್ತು. ಉಪಚುನಾವಣೆಯಲ್ಲಿ ತನ್ನಲ್ಲೇ ಉಳಿಸಿಕೊಂಡಿದೆ.

2. ಅಸ್ಸಾಂ

  • ಭನಾನಿಪುರ್‌ – ಬಿಜೆಪಿ
  • ಗೋಸಾಯಿಗಾಂವ್ –  ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಮರಿಯಾನಿ – ಬಿಜೆಪಿ
  • ತಮುಲ್‌ಪುರ್‌ – ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
  • ಥೌರಾ – ಬಿಜೆಪಿ

ಬಿಜೆಪಿ ಗೆದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌‌ನ ಹಿಡಿತದಲ್ಲಿದ್ದ ಕ್ಷೇತ್ರಗಳಾಗಿದ್ದು, ಒಂದು ಕ್ಷೇತ್ರ AIUDF ಹಿಡಿತದಲ್ಲಿದ್ದವು. ಯುಪಿಪಿಎಲ್‌ ಗೆದ್ದ ಎರಡು ಕ್ಷೇತ್ರಗಳಲ್ಲಿ ಒಂದು ತನ್ನದೇ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಮತ್ತೊಂದನ್ನು ಬೇರೆ ಪಕ್ಷದಿಂದ ತನ್ನ ತೆಕ್ಕೆಗೆ ಪಡೆದು ಕೊಂಡಿದೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

3. ಬಿಹಾರ

  • ಕುಶೇಶ್ವರ ಆಸ್ಥಾನ – JDU
  • ತಾರಾಪುರ – JDU

ಕುಶೇಶ್ವರ ಆಸ್ಥಾನ ಕ್ಷೇತ್ರದಲ್ಲಿ ಜೆಡಿಯು ತನ್ನ ಕ್ಷೇತ್ರವನ್ನು ಉಳಿಕೊಂಡರೆ, ತಾರಾಪುರದಲ್ಲಿ ಕಳೆದುಕೊಂಡಿದೆ.

4. ಹರಿಯಾಣ

  • ಎಲ್ಲೇನಾಬಾದ್ – INLD ತನ್ನದೇ ಕ್ಷೇತ್ರವನ್ನು ಮತ್ತೇ ಗೆದ್ದುಕೊಂಡಿದೆ.

5. ಹಿಮಾಚಲ ಪ್ರದೇಶ

  • ಅರ್ಕಿ – ಕಾಂಗ್ರೆಸ್
  • ಫತೇಪುರ್ – ಕಾಂಗ್ರೆಸ್
  • ಜುಟ್ಟಬ್ – ಕಾಂಗ್ರೆಸ್

ಅರ್ಕಿ ಮತ್ತು ಫೆತೇಪುರ್‌ನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಜುಟ್ಟಬ್‌ನಲ್ಲಿ ಹೊಸದಾಗಿ ಕ್ಷೇತ್ರವನ್ನು ಗೆದ್ದುಕೊಂಡಿದೆ.

6. ಕರ್ನಾಟಕ

  • ಹಾನಗಲ್‌ – ಕಾಂಗ್ರೆಸ್
  • ಸಿಂದಗಿ – ಬಿಜೆಪಿ

ಕರ್ನಾಟಕದಲ್ಲಿ ಬಿಜೆಪಿ ವಶದಲ್ಲಿ ಇದ್ದ ಹಾನಗಲ್‌ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡರೆ, ಜೆಡಿಎಸ್‌ ವಶದಲ್ಲಿದ್ದ ಸಿಂದಗಿಯನ್ನು ಬಿಜೆಪಿ ಗೆದ್ದುಕೊಂಡಿದೆ.

ಇದನ್ನೂ ಓದಿ: ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

7. ಮಧ್ಯಪ್ರದೇಶ

  • ಜೋಬತ್ – ಬಿಜೆಪಿ
  • ಪೃಥ್ವಿಪುರ – ಬಿಜೆಪಿ
  • ರಾಯಗಾಂವ್ – ಕಾಂಗ್ರೆಸ್

ಜೋಬತ್ ಮತ್ತು ಪೃಥ್ವಿಪುರ ಕ್ಷೇತ್ರವನ್ನು ಬಿಜೆಪಿ ಬೇರೆ ಪಕ್ಷದಿಂದ ವಶಪಡಿಸಿಕೊಂಡರೆ, ಕಾಂಗ್ರೆಸ್‌ ರಾಯಗಾಂವ್ ಕ್ಷೇತ್ರವನ್ನು ಅನ್ನು ಹೊಸದಾಗ ಗೆದ್ದುಕೊಂಡಿದೆ.

8. ಮಹಾರಾಷ್ಟ್ರ

  • ದೆಗ್ಲೂರ್ – ಕಾಂಗ್ರೆಸ್

ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನಲ್ಲೇ ಉಳಿಸಕೊಂಡಿದೆ.

9. ಮೇಘಾಲಯ

  • ಮಾವ್‌ಫ್ಲಾಂಗ್‌ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ಮೌರಿಂಗ್‌ಕೆಂಗ್ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
  • ರಾಜಬಾಲಾ – ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ

10. ಮಿಜೋರಾಂ

  • ಟುಯಿರಿಯಲ್ – ಮಿಜೋ ನ್ಯಾಶನಲ್ ಫ್ರಂಟ್

ಬೇರೆ ಪಕ್ಷದಿಂದ ಕ್ಷೇತ್ರವನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

11. ನಾಗಾಲ್ಯಾಂಡ್

  • ಶಮ್ಟೋರ್ – ನ್ಯಾಶನಲಿಸ್ಟಿಕ್‌ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಾರ್ಟಿ

ಅವಿರೋಧ ಆಯ್ಕೆ!

12. ರಾಜಸ್ಥಾನ

  • ಧರಿಯಾವಾಡ – ಕಾಂಗ್ರೆಸ್
  • ವಲ್ಲಭನಗರ – ಕಾಂಗ್ರೆಸ್

ಇಲ್ಲಿ ಕಾಂಗ್ರೆಸ್ ಒಂದು ತನ್ನದೇ ಕ್ಷೇತ್ರನ್ನು ಉಳಿಸಿಕೊಂಡು, ಮತ್ತೊಂದು ಕ್ಷೇತ್ರವನ್ನು ಬೇರೆ ಪಕ್ಷದಿಂದ ವಶಕ್ಕೆ ಪಡೆದಿದೆ.

13. ತೆಲಂಗಾಣ

  • ಹುಜೂರಾಬಾದ್ – ಬಿಜೆಪಿ

ಟಿಆರ್‌ಎಸ್‌ ಪಕ್ಷದಿಂದ ಬಿಜೆಪಿಯು ಈ ಕ್ಷೇತ್ರವನ್ನು ಗೆದ್ದುಕೊಂಡಿದೆ.

14. ಪಶ್ಚಿಮ ಬಂಗಾಳ

  • ದೀನ್‌ಹಟಾ – ಟಿಎಂಸಿ
  • ಗೋಸಾಬ – ಟಿಎಂಸಿ
  • ಖಾರ್ದಹೊ – ಟಿಎಂಸಿ
  • ಶಾಂತಿಪುರ – ಟಿಎಂಸಿ

ಇಲ್ಲಿ ಎರಡು ಕ್ಷೇತ್ರಗಳನ್ನು ಟಿಎಂಸಿ ತನ್ನದೇ ಕ್ಷೇತ್ರವನ್ನು ಗೆದ್ದುಕೊಂಡು, ಮತ್ತೆರೆಡು ಕ್ಷೇತ್ರವನ್ನು ಬಿಜೆಪಿಯಿಂದ ಗೆದ್ದುಕೊಂಡಿದೆ.

ಇದನ್ನೂ ಓದಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...