Homeಮುಖಪುಟಶೃಂಗಸಭೆ: ಮೋದಿ ಭೇಟಿ ವಿರೋಧಿಸಿ ಅನಿವಾಸಿ ಭಾರತೀಯರ ಪ್ರತಿಭಟನೆ

ಶೃಂಗಸಭೆ: ಮೋದಿ ಭೇಟಿ ವಿರೋಧಿಸಿ ಅನಿವಾಸಿ ಭಾರತೀಯರ ಪ್ರತಿಭಟನೆ

- Advertisement -
- Advertisement -

ಜಾಗತಿಕ ತಾಪಮಾನ ತಡೆಗಾಗಿ ಗ್ಲಾಸ್ಗೋದಲ್ಲಿ ನಡೆದ ಸಿಒಪಿ26 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಂದರ್ಭದಲ್ಲಿ ಯುನೈಟೆಡ್‌ ಕಿಮ್‌ಡಮ್‌‌ (ಯುಕೆ)ನಲ್ಲಿರುವ ದೊಡ್ಡ ಸಂಖ್ಯೆಯ ಭಾರತೀಯರು ಐತಿಹಾಸಿಕ ರೈತ ಚಳವಳಿಯನ್ನು ಬೆಂಬಲಿಸಿ, ಮೋದಿಯವರನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.

“ಭಾರತೀಯ ರೈತರ ಹೋರಾಟವೇ ನಮ್ಮ ಹೋರಾಟ” ಎಂಬ ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಲಾಯಿತು. “ನೂರಾರು ಹೋರಾಟಗಾರರನ್ನು ಮೋದಿ ಕೊಂದಿದ್ದಾರೆ” ಎಂದು ಆರೋಪಿಸಿ, ಭಾರತೀಯ ಮೂಲದ ನಿವಾಸಿಗಳು ಪ್ರತಿಭಟನೆ ನಡೆಸಿದ್ದು, ‘ಸ್ಕಾಟ್‌ಲ್ಯಾಂಡ್‌ಗೆ ಮೋದಿ ಬರಬಾರದು’ ಆಗ್ರಹಿಸಿದ್ದಾರೆ.

ಕೃಷಿಯನ್ನು ಕಾರ್ಪೊರೇಟ್‌ ಕೈಗೆ ನೀಡುತ್ತಿರುವುದನ್ನು ವಿರೋಧಿಸಿ ರೈತರು ಹೋರಾಟ ಮಾಡುತ್ತಿದ್ದಾರೆ. ಎಂಎಸ್‌ಪಿ ನಿಗದಿಪಡಿಸಬೇಕೆಂದು ಹೋರಾಡುತ್ತಿದ್ದಾರೆ.

ವಿವಿಧ ದೇಶಗಳಲ್ಲಿರುವ ಭಾರತೀಯರು ರೈತ ಹೋರಾಟವನ್ನು ಬೆಂಬಲಿಸುತ್ತಿರುವುದನ್ನು ಸಂಯುಕ್ತ ಕಿಸಾನ್‌ ಮೋರ್ಚಾ ಶ್ಲಾಘಿಸಿದೆ. ಇದು ಸರ್ಕಾರದ ಮೇಲೆ ಒತ್ತಡ ತರಲು ಸಹಕರಿಸಲಿದೆ. ಹೆಚ್ಚಿನ ಸಮಯ ವ್ಯರ್ಥ ಮಾಡದೆ ರೈತರ ಬೇಡಿಕೆಯನ್ನು ಸರ್ಕಾರ ಸ್ವೀಕರಿಸಬೇಕು ಎಂದು ಎಸ್‌ಕೆಎಂ ಆಗ್ರಹಿಸಿದೆ.

ಇದನ್ನೂ ಓದಿರಿ: ರೈತ ಹೋರಾಟ: ಪ್ರತಿಭಟನಾ ಸ್ಥಳವನ್ನು ತೊರೆಯುವುದಿಲ್ಲ ಎಂದ ನಿಹಾಂಗ್ ಸದಸ್ಯರು

ರೈತರ ಹೋರಾಟವನ್ನು ತಡೆಯಲು ಸರ್ಕಾರ ಇನ್ನಿಲ್ಲದಂತೆ ಪ್ರಯತ್ನಿಸುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ರೈತರ ಮೇಲೆ ಆಗುತ್ತಿರುವ ಕ್ರೌರ್ಯವನ್ನು ಕಂಡು ಕಾಣದಂತೆ ಇದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರ ಅವರ ಪುತ್ರ ಆಶೀಶ್‌ನನ್ನು ಬಂಧಿಸಲಾಗಿದೆ. ಈ ಘಟನೆಯನ್ನೇ ನೆಪ ಮಾಡಿಕೊಂಡು ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ಬಲವಂತವಾಗಿ ಹೊರಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ.

“ದೆಹಲಿ ಗಡಿಗಳಿಂದ ಪ್ರತಿಭಟನಾಕಾರರನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಒಕ್ಕೂಟ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.

ರೈತರನ್ನು ಗಡಿಗಳಿಂದ ಹೊರ ಹಾಕಲು ಪ್ರಯತ್ನಿಸಿದರೆ, ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು “ಗಲ್ಲಾ ಮಂಡಿಗಳನ್ನಾಗಿ” (ಧಾನ್ಯ ಮಾರುಕಟ್ಟೆಗಳು) ಆಗಿ ಪರಿವರ್ತಿಸಬೇಕಾಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್‌ ಟಿಕಾಯತ್ ಹೇಳಿದ್ದಾರೆ.

ಹೋರಾಟಕ್ಕೆ ಒಂದು ವರ್ಷಗಳಾಗಿದ್ದು, ಸುದೀರ್ಘ ಹೋರಾಟದ ಫಲವಾಗಿ ರೈತರಿಗೆ ವಿಶ್ವದ ಮೂಲೆಮೂಲೆಗಳಿಂದ ಬೆಂಬಲಗಳು ವ್ಯಕ್ತವಾಗುತ್ತಿವೆ. ಮೋದಿಯವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಅಲ್ಲಿನ ಭಾರತೀಯರು ಪ್ರತಿಭಟನೆ ನಡೆಸಿದ್ದರು.


ಇದನ್ನೂ ಓದಿರಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...