Homeಮುಖಪುಟಉಪಚುನಾವಣೆ: ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ, ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು

ಉಪಚುನಾವಣೆ: ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ, ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು

ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.

- Advertisement -
- Advertisement -

ದೇಶದ 14 ರಾಜ್ಯಗಳ 30 ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಫಲಿತಾಂಶಗಳನ್ನು ಪಕ್ಷವಾರು ಆಧಾರಲ್ಲಿ ನೋಡಿದರೆ ಮೂವತ್ತು ಸ್ಥಾನಗಳಲ್ಲಿ ಅತೀ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರ ಹೊಮ್ಮಿದೆ. ಅದು 8 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಬಿಜೆಪಿಗೆ ಏಳು ಸ್ಥಾನಗಳು ದಕ್ಕಿದರೆ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ನಾಲ್ಕು ಸ್ಥಾನಗಳು ಟಿಎಂಸಿಯ ಪಾಲಾಗಿದೆ.

ಒಟ್ಟು ಉಪಚುನಾವಣೆಯ ಫಲಿತಾಂಶ ಹೀಗಿದೆ

1. ಆಂಧ್ರಪ್ರದೇಶ

ಬದ್ವೇಲ್‌ ಕ್ಷೇತ್ರ – ವೈಎಸ್‌ಆರ್‌‌ ಕಾಂಗ್ರೆಸ್‌
ಕ್ಷೇತ್ರವು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಹಿಡಿತದಲ್ಲಿತ್ತು. ಉಪಚುನಾವಣೆಯಲ್ಲಿ ತನ್ನಲ್ಲೇ ಉಳಿಸಿಕೊಂಡಿದೆ.

2. ಅಸ್ಸಾಂ

ಭನಾನಿಪುರ್‌ – ಬಿಜೆಪಿ
ಗೋಸಾಯಿಗಾಂವ್ –  ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
ಮರಿಯಾನಿ – ಬಿಜೆಪಿ
ತಮುಲ್‌ಪುರ್‌ – ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
ಥೌರಾ – ಬಿಜೆಪಿ
ಬಿಜೆಪಿ ಗೆದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌‌ನ ಹಿಡಿತದಲ್ಲಿದ್ದ ಕ್ಷೇತ್ರಗಳಾಗಿದ್ದು, ಒಂದು ಕ್ಷೇತ್ರ AIUDF ಹಿಡಿತದಲ್ಲಿದ್ದವು. ಯುಪಿಪಿಎಲ್‌ ಗೆದ್ದ ಎರಡು ಕ್ಷೇತ್ರಗಳಲ್ಲಿ ಒಂದು ತನ್ನದೇ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಮತ್ತೊಂದನ್ನು ಬೇರೆ ಪಕ್ಷದಿಂದ ತನ್ನ ತೆಕ್ಕೆಗೆ ಪಡೆದು ಕೊಂಡಿದೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

3. ಬಿಹಾರ

ಕುಶೇಶ್ವರ ಆಸ್ಥಾನ – JDU
ತಾರಾಪುರ – JDU
ಕುಶೇಶ್ವರ ಆಸ್ಥಾನ ಮತ್ತು ತಾರಾಪುರದಲ್ಲಿ ಕ್ಷೇತ್ರಗಳಲ್ಲಿ ಜೆಡಿಯು ತನ್ನ ಸ್ಥಾನ ಉಳಿಸಿಕೊಂಡಿದೆ.

4. ಹರಿಯಾಣ

ಎಲ್ಲೇನಾಬಾದ್ – INLD ತನ್ನದೇ ಕ್ಷೇತ್ರವನ್ನು ಮತ್ತೇ ಗೆದ್ದುಕೊಂಡಿದೆ.

5. ಹಿಮಾಚಲ ಪ್ರದೇಶ

ಅರ್ಕಿ – ಕಾಂಗ್ರೆಸ್
ಫತೇಪುರ್ – ಕಾಂಗ್ರೆಸ್
ಜುಟ್ಟಬ್ – ಕಾಂಗ್ರೆಸ್
ಅರ್ಕಿ ಮತ್ತು ಫೆತೇಪುರ್‌ನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಜುಟ್ಟಬ್‌ನಲ್ಲಿ ಹೊಸದಾಗಿ ಕ್ಷೇತ್ರವನ್ನು ಗೆದ್ದುಕೊಂಡಿದೆ.

6. ಕರ್ನಾಟಕ

ಹಾನಗಲ್‌ – ಕಾಂಗ್ರೆಸ್
ಸಿಂದಗಿ – ಬಿಜೆಪಿ
ಕರ್ನಾಟಕದಲ್ಲಿ ಬಿಜೆಪಿ ವಶದಲ್ಲಿ ಇದ್ದ ಹಾನಗಲ್‌ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡರೆ, ಜೆಡಿಎಸ್‌ ವಶದಲ್ಲಿದ್ದ ಸಿಂದಗಿಯನ್ನು ಬಿಜೆಪಿ ಗೆದ್ದುಕೊಂಡಿದೆ.

7. ಮಧ್ಯಪ್ರದೇಶ

ಜೋಬತ್ – ಬಿಜೆಪಿ
ಪೃಥ್ವಿಪುರ – ಬಿಜೆಪಿ
ರಾಯಗಾಂವ್ – ಕಾಂಗ್ರೆಸ್
ಜೋಬತ್ ಮತ್ತು ಪೃಥ್ವಿಪುರ ಕ್ಷೇತ್ರವನ್ನು ಬಿಜೆಪಿ ಬೇರೆ ಪಕ್ಷದಿಂದ ವಶಪಡಿಸಿಕೊಂಡರೆ, ಕಾಂಗ್ರೆಸ್‌ ರಾಯಗಾಂವ್ ಕ್ಷೇತ್ರವನ್ನು ಅನ್ನು ಹೊಸದಾಗಿ ಗೆದ್ದುಕೊಂಡಿದೆ.

8. ಮಹಾರಾಷ್ಟ್ರ

ದೆಗ್ಲೂರ್ – ಕಾಂಗ್ರೆಸ್
ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನಲ್ಲೇ ಉಳಿಸಿಕೊಂಡಿದೆ.

9. ಮೇಘಾಲಯ

ಮಾವ್‌ಫ್ಲಾಂಗ್‌ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
ಮೌರಿಂಗ್‌ಕೆಂಗ್ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
ರಾಜಬಾಲಾ – ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ

10. ಮಿಜೋರಾಂ

ಟುಯಿರಿಯಲ್ – ಮಿಜೋ ನ್ಯಾಶನಲ್ ಫ್ರಂಟ್
ಬೇರೆ ಪಕ್ಷದಿಂದ ಕ್ಷೇತ್ರವನ್ನು ಗೆದ್ದುಕೊಂಡಿದೆ.

11. ನಾಗಾಲ್ಯಾಂಡ್

ಶಮ್ಟೋರ್ – ನ್ಯಾಶನಲಿಸ್ಟಿಕ್‌ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಾರ್ಟಿ
ಅವಿರೋಧ ಆಯ್ಕೆ!

12. ರಾಜಸ್ಥಾನ

ಧರಿಯಾವಾಡ – ಕಾಂಗ್ರೆಸ್
ವಲ್ಲಭನಗರ – ಕಾಂಗ್ರೆಸ್
ಇಲ್ಲಿ ಕಾಂಗ್ರೆಸ್ ಒಂದು ತನ್ನದೇ ಕ್ಷೇತ್ರನ್ನು ಉಳಿಸಿಕೊಂಡು, ಮತ್ತೊಂದು ಕ್ಷೇತ್ರವನ್ನು ಬೇರೆ ಪಕ್ಷದಿಂದ ವಶಕ್ಕೆ ಪಡೆದಿದೆ.

13. ತೆಲಂಗಾಣ

ಹುಜೂರಾಬಾದ್ – ಬಿಜೆಪಿ
ಟಿಆರ್‌ಎಸ್‌ ಪಕ್ಷದಿಂದ ಬಿಜೆಪಿಯು ಈ ಕ್ಷೇತ್ರವನ್ನು ಗೆದ್ದುಕೊಂಡಿದೆ.

14. ಪಶ್ಚಿಮ ಬಂಗಾಳ

ದೀನ್‌ಹಟಾ – ಟಿಎಂಸಿ
ಗೋಸಾಬ – ಟಿಎಂಸಿ
ಖಾರ್ದಹೊ – ಟಿಎಂಸಿ
ಶಾಂತಿಪುರ – ಟಿಎಂಸಿ
ಇಲ್ಲಿ ಎರಡು ಕ್ಷೇತ್ರಗಳನ್ನು ಟಿಎಂಸಿ ತನ್ನದೇ ಕ್ಷೇತ್ರವನ್ನು ಗೆದ್ದುಕೊಂಡು, ಮತ್ತೆರೆಡು ಕ್ಷೇತ್ರವನ್ನು ಬಿಜೆಪಿಯಿಂದ ಗೆದ್ದುಕೊಂಡಿದೆ.

ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ದಾದ್ರ ನಗರ ಹಾವೇಲಿಯ ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.


ಇದನ್ನೂ ಓದಿ; ’ಪಂಜಾಬ್ ಲೋಕ್ ಕಾಂಗ್ರೆಸ್’: ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೊಸ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...