Homeಚಳವಳಿಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

- Advertisement -
- Advertisement -

ದೇಶದಲ್ಲಿ ಹಿಂದಿ ಹೇರಿಕೆ ವಿರುದ್ಧ ಮೊದಲಿನಿಂದಲೂ ಗಟ್ಟಿಯಾಗಿ ಪ್ರತಿರೋಧ ಒಡ್ಡುತ್ತಿರುವುದು ತಮಿಳುನಾಡು. ದ್ರಾವಿಡ ಭಾಷೆಗಳಿಗೆ ಮನ್ನಣೆ ಸಿಗಬೇಕು. ಹಿಂದಿ ಹೇರಿಕೆ ಸಹಿಸುವುದಿಲ್ಲ ಎಂಬುದನ್ನು ಪ್ರತಿ ಬಾರಿಯು ಒಂದಲ್ಲ ಒಂದು ವೇದಿಕೆ ಮೂಲಕ ತಿಳಿಸುತ್ತಿದ್ದಾರೆ. ಇದನ್ನೇ ’ಜೈ ಭೀಮ್’ ಚಿತ್ರದಲ್ಲೂ ಅಳವಡಿಸಿದ್ದಾರೆ.

ಈ ಬಾರಿ ನಟ ಸೂರ್ಯ ಅಭಿನಯದ ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ’ಜೈ ಭೀಮ್’ ಚಿತ್ರದಲ್ಲಿ ಮತ್ತೆ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ವ್ಯಕ್ತವಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಹಿಂದಿ ಭಾಷೆಯಲ್ಲಿ ಉತ್ತರ ನೀಡುವ ವ್ಯಕ್ತಿಯ ಕೆನ್ನೆಗೆ  ಹೊಡೆಯುವ ದೃಶ್ಯವೊಂದು ಜೈ ಭೀಮ್ ಚಿತ್ರದಲ್ಲಿದೆ. ಈ ದೃಶ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಚಿತ್ರದಲ್ಲಿ ಉನ್ನತ ಪೊಲೀಸ್ ಅಧಿಕಾರಿ ಪೆರುಮಾಳ್‌ಸ್ವಾಮಿ (ಪರಮೇಶ್ವರಪ್ಪ) ಪಾತ್ರ ನಿರ್ವಹಿಸಿರುವ ಪ್ರಕಾಶ್‌ ರಾಜ್ ಅವರು ಪಾತ್ರದಾರಿಯೊಬ್ಬರಿಂದ ಮಾಹಿತಿ ಪಡೆಯುವ ವೇಳೆ ಆತ ಹಿಂದಿಯಲ್ಲಿ ಉತ್ತರಿಸಲು ಪ್ರಯತ್ನಿಸುತ್ತಾರೆ. ಆಗ ಪ್ರಕಾಶ್ ರೈ ಪಾತ್ರಧಾರಿಗೆ ಕಪಾಳಕ್ಕೆ ಹೊಡೆಯುವ ದೃಶ್ಯ ಇದೆ. ಯಾಕೆ ನನಗೆ ಹೊಡೆಯುತ್ತೀರಿ ಎಂದು ಆತ ತಮಿಳಿನಲ್ಲೇ ಪ್ರಕಾಶ್ ರೈಗೆ ಪ್ರಶ್ನಿಸುತ್ತಾನೆ. ಆಗ ‘ತಮಿಳಿನಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಉತ್ತರಿಸುತ್ತಾರೆ.

ಈ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಕನ್ನಡದಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ. ಇದೇ ಸಿನಿಮಾದ ತೆಲುಗು ಅವತರಣಿಕೆಯಲ್ಲಿ ‘ಯಾಕೆ ಕಪಾಳಕ್ಕೆ ಹೊಡೆಯುತ್ತೀರಿ’ ಎಂದು ತೆಲುಗಿನಲ್ಲೇ ಕೇಳಿದಾಗ ‘ತೆಲುಗಿನಲ್ಲಿ ಮಾತಾಡು’ ಎಂದು ಎಚ್ಚರಿಸುತ್ತಾರೆ ಪ್ರಕಾಶ್ ರೈ. ಮಲಯಾಳಂ ಅವತರಣಿಕೆಯಲ್ಲೂ ಇದೇ ರೀತಿಯ ಸಂಭಾಷಣೆ ಬಂದು ಹೋಗುತ್ತದೆ. ಈ ದೃಶ್ಯಗಳು ಈಗ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿವೆ.

ಟ್ವಿಟರ್‌ ಬಳಕೆದಾರ ಅಮಿತ್ ಕುಮಾರ್‌ ಅವರು, ’ಜೈ ಭೀಮ್‌ ಚಿತ್ರದಲ್ಲಿ ಹಿಂದಿ ಮಾತಾಡುವ ವ್ಯಕ್ತಿಗೆ ಹೊಡೆಯುವ ಮೂಲಕ ಪ್ರಕಾಶ್‌ ರಾಜ್ ಅವರ ಪ್ರಪೊಗಾಂಡಾದೊಂದಿಗೆ ಕಾಣಿಸಿಕೊಂಡಿದ್ದಾರೆ’ ಎಂದು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಈ ಟ್ವೀಟ್‌ಗಳಿಗೆ ಟಾಂಗ್ ಕೊಟ್ಟಿರುವ ’ಹಿಂದಿ ಹೇರಿಕೆ ನಿಲ್ಲಿಸಿ’ (Stop hindi imposition) ಬಳಗ ಹಿಂದಿ ಚಿತ್ರಗಳಲ್ಲಿ ತಮಿಳು ಮಾತಾಡುವವರನ್ನು ಹೇಗೆ ಹಿಂದಿ ಮಾತಾಡುವಂತೆ ಒತ್ತಾಯಿಸಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

“ರಕ್ತಸ್ರಾವವಾದಾಗ ಹಿಂದಿಯವರಿಗೆ ಬರುವುದು ರಕ್ತ ಮತ್ತು ಹಿಂದಿಯೇತರರಿಗೆ ಟೊಮೇಟೊ ಚಟ್ನಿ ಹರಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
“ಸ್ಕ್ಯಾಮ್ 1992 ವೆಬ್ ಸರಣಿಯಲ್ಲಿ ಹಿಂದಿ ಗೊತ್ತಿಲ್ಲದ ಕಾರಣಕ್ಕಾಗಿ ಹಿಂದಿಯೇತರ ಭಾರತೀಯನಿಗೆ ಬೆದರಿಕೆ ಹಾಕುವುದು, ಬೆದರಿಸುವುದು ಸಂಪೂರ್ಣವಾಗಿ ಸರಿಯಾಗಿದೆ. ಆದರೆ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯೇತರ ಭಾರತೀಯನೊಬ್ಬ ಹಿಂದಿಯವರಿಗೆ ಅದನ್ನೇ ಮಾಡಿದರೆ ನೋವಾಗುತ್ತದೆ” ಎಂದು ಎರಡು ಚಿತ್ರದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಿಂದಿ ಹೇರಿಕೆ ವಿರುದ್ಧ ಇರುವ ಈ ದೃಶ್ಯವನ್ನು ಹಲವು ದ್ರಾವಿಡ ಭಾಷಿಗರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇದಕ್ಕಿಂತ ಇನ್ನೆನ್ನು ಮನರಂಜನೆ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಸಿನಿಮಾ ಹಿಂದಿಯಲ್ಲಿಯೂ ಬಿಡುಗಡೆಯಾಗಿದೆ. ಆದರೆ, ಹಿಂದಿ ಅವತರಣಿಕೆಯ ಈ ದೃಶ್ಯದ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಸತ್ಯ ಹೇಳು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ.

ದ್ರಾವಿಡ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಿರುವುದನ್ನು ಪ್ರತಿ ಹಂತದಲ್ಲೂ ವಿರೋಧಿಸಲಾಗುತ್ತಿದ್ದು, ಹಿಂದಿ ದಿವಸ್ ಆಚರಣೆಗೂ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...