Homeಚಳವಳಿಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

- Advertisement -
- Advertisement -

ದೇಶದಲ್ಲಿ ಹಿಂದಿ ಹೇರಿಕೆ ವಿರುದ್ಧ ಮೊದಲಿನಿಂದಲೂ ಗಟ್ಟಿಯಾಗಿ ಪ್ರತಿರೋಧ ಒಡ್ಡುತ್ತಿರುವುದು ತಮಿಳುನಾಡು. ದ್ರಾವಿಡ ಭಾಷೆಗಳಿಗೆ ಮನ್ನಣೆ ಸಿಗಬೇಕು. ಹಿಂದಿ ಹೇರಿಕೆ ಸಹಿಸುವುದಿಲ್ಲ ಎಂಬುದನ್ನು ಪ್ರತಿ ಬಾರಿಯು ಒಂದಲ್ಲ ಒಂದು ವೇದಿಕೆ ಮೂಲಕ ತಿಳಿಸುತ್ತಿದ್ದಾರೆ. ಇದನ್ನೇ ’ಜೈ ಭೀಮ್’ ಚಿತ್ರದಲ್ಲೂ ಅಳವಡಿಸಿದ್ದಾರೆ.

ಈ ಬಾರಿ ನಟ ಸೂರ್ಯ ಅಭಿನಯದ ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ’ಜೈ ಭೀಮ್’ ಚಿತ್ರದಲ್ಲಿ ಮತ್ತೆ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ವ್ಯಕ್ತವಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಹಿಂದಿ ಭಾಷೆಯಲ್ಲಿ ಉತ್ತರ ನೀಡುವ ವ್ಯಕ್ತಿಯ ಕೆನ್ನೆಗೆ  ಹೊಡೆಯುವ ದೃಶ್ಯವೊಂದು ಜೈ ಭೀಮ್ ಚಿತ್ರದಲ್ಲಿದೆ. ಈ ದೃಶ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಚಿತ್ರದಲ್ಲಿ ಉನ್ನತ ಪೊಲೀಸ್ ಅಧಿಕಾರಿ ಪೆರುಮಾಳ್‌ಸ್ವಾಮಿ (ಪರಮೇಶ್ವರಪ್ಪ) ಪಾತ್ರ ನಿರ್ವಹಿಸಿರುವ ಪ್ರಕಾಶ್‌ ರಾಜ್ ಅವರು ಪಾತ್ರದಾರಿಯೊಬ್ಬರಿಂದ ಮಾಹಿತಿ ಪಡೆಯುವ ವೇಳೆ ಆತ ಹಿಂದಿಯಲ್ಲಿ ಉತ್ತರಿಸಲು ಪ್ರಯತ್ನಿಸುತ್ತಾರೆ. ಆಗ ಪ್ರಕಾಶ್ ರೈ ಪಾತ್ರಧಾರಿಗೆ ಕಪಾಳಕ್ಕೆ ಹೊಡೆಯುವ ದೃಶ್ಯ ಇದೆ. ಯಾಕೆ ನನಗೆ ಹೊಡೆಯುತ್ತೀರಿ ಎಂದು ಆತ ತಮಿಳಿನಲ್ಲೇ ಪ್ರಕಾಶ್ ರೈಗೆ ಪ್ರಶ್ನಿಸುತ್ತಾನೆ. ಆಗ ‘ತಮಿಳಿನಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಉತ್ತರಿಸುತ್ತಾರೆ.

ಈ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಕನ್ನಡದಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ. ಇದೇ ಸಿನಿಮಾದ ತೆಲುಗು ಅವತರಣಿಕೆಯಲ್ಲಿ ‘ಯಾಕೆ ಕಪಾಳಕ್ಕೆ ಹೊಡೆಯುತ್ತೀರಿ’ ಎಂದು ತೆಲುಗಿನಲ್ಲೇ ಕೇಳಿದಾಗ ‘ತೆಲುಗಿನಲ್ಲಿ ಮಾತಾಡು’ ಎಂದು ಎಚ್ಚರಿಸುತ್ತಾರೆ ಪ್ರಕಾಶ್ ರೈ. ಮಲಯಾಳಂ ಅವತರಣಿಕೆಯಲ್ಲೂ ಇದೇ ರೀತಿಯ ಸಂಭಾಷಣೆ ಬಂದು ಹೋಗುತ್ತದೆ. ಈ ದೃಶ್ಯಗಳು ಈಗ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿವೆ.

ಟ್ವಿಟರ್‌ ಬಳಕೆದಾರ ಅಮಿತ್ ಕುಮಾರ್‌ ಅವರು, ’ಜೈ ಭೀಮ್‌ ಚಿತ್ರದಲ್ಲಿ ಹಿಂದಿ ಮಾತಾಡುವ ವ್ಯಕ್ತಿಗೆ ಹೊಡೆಯುವ ಮೂಲಕ ಪ್ರಕಾಶ್‌ ರಾಜ್ ಅವರ ಪ್ರಪೊಗಾಂಡಾದೊಂದಿಗೆ ಕಾಣಿಸಿಕೊಂಡಿದ್ದಾರೆ’ ಎಂದು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಈ ಟ್ವೀಟ್‌ಗಳಿಗೆ ಟಾಂಗ್ ಕೊಟ್ಟಿರುವ ’ಹಿಂದಿ ಹೇರಿಕೆ ನಿಲ್ಲಿಸಿ’ (Stop hindi imposition) ಬಳಗ ಹಿಂದಿ ಚಿತ್ರಗಳಲ್ಲಿ ತಮಿಳು ಮಾತಾಡುವವರನ್ನು ಹೇಗೆ ಹಿಂದಿ ಮಾತಾಡುವಂತೆ ಒತ್ತಾಯಿಸಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

“ರಕ್ತಸ್ರಾವವಾದಾಗ ಹಿಂದಿಯವರಿಗೆ ಬರುವುದು ರಕ್ತ ಮತ್ತು ಹಿಂದಿಯೇತರರಿಗೆ ಟೊಮೇಟೊ ಚಟ್ನಿ ಹರಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
“ಸ್ಕ್ಯಾಮ್ 1992 ವೆಬ್ ಸರಣಿಯಲ್ಲಿ ಹಿಂದಿ ಗೊತ್ತಿಲ್ಲದ ಕಾರಣಕ್ಕಾಗಿ ಹಿಂದಿಯೇತರ ಭಾರತೀಯನಿಗೆ ಬೆದರಿಕೆ ಹಾಕುವುದು, ಬೆದರಿಸುವುದು ಸಂಪೂರ್ಣವಾಗಿ ಸರಿಯಾಗಿದೆ. ಆದರೆ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯೇತರ ಭಾರತೀಯನೊಬ್ಬ ಹಿಂದಿಯವರಿಗೆ ಅದನ್ನೇ ಮಾಡಿದರೆ ನೋವಾಗುತ್ತದೆ” ಎಂದು ಎರಡು ಚಿತ್ರದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಿಂದಿ ಹೇರಿಕೆ ವಿರುದ್ಧ ಇರುವ ಈ ದೃಶ್ಯವನ್ನು ಹಲವು ದ್ರಾವಿಡ ಭಾಷಿಗರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇದಕ್ಕಿಂತ ಇನ್ನೆನ್ನು ಮನರಂಜನೆ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಸಿನಿಮಾ ಹಿಂದಿಯಲ್ಲಿಯೂ ಬಿಡುಗಡೆಯಾಗಿದೆ. ಆದರೆ, ಹಿಂದಿ ಅವತರಣಿಕೆಯ ಈ ದೃಶ್ಯದ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಸತ್ಯ ಹೇಳು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ.

ದ್ರಾವಿಡ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಿರುವುದನ್ನು ಪ್ರತಿ ಹಂತದಲ್ಲೂ ವಿರೋಧಿಸಲಾಗುತ್ತಿದ್ದು, ಹಿಂದಿ ದಿವಸ್ ಆಚರಣೆಗೂ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...