Homeಮುಖಪುಟಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕೋವಿಡ್‌ ಲಸಿಕೆ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆಯುವುದು ಅಪಾಯಕಾರಿ ಎಂದು ಹೇಳಿರುವ ಕೇರಳ ಹೈಕೋರ್ಟ್, “ಇಂದು ಮೋದಿ ಫೋಟೋ ತೆಗೆಯಿರಿ ಎಂದು ಕೇಳುತ್ತಾರೆ. ನಾಳೆ ಮಹಾತ್ಮಗಾಂಧಿಯವರ ಫೋಟೋವನ್ನು ಕರೆನ್ಸಿ ನೋಟಿನಿಂದ ತೆಗೆಯಿರಿ ಎಂದು ಯಾರಾದರೂ ಬಂದರೆ?” ಎಂದು ಕೇಳಿದೆ.

“ಮೋದಿಯವರ ಫೋಟೋವನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಹಾಕಿರುವುದು ಸರಿಯೇ” ಎಂದು ಪ್ರಶ್ನಿಸಿ ನಾಗರಿಕರೊಬ್ಬರು ಅರ್ಜಿ ಸಲ್ಲಿಸಿದ್ದರು. “ನಾನು ಎರಡು ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಯಿಂದ ತೆಗೆದುಕೊಂಡು ಹಣ ಪಾವತಿಸಿದ್ದೇನೆ. ಮೋದಿ ಫೋಟೋವನ್ನು ದೃಢೀಕರಣ ಪತ್ರದ ಮೇಲೆ ಹಾಕುವುದು ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತೆ” ಎಂದು ಅರ್ಜಿದಾರರು ವಾದಿಸಿದ್ದರು ಎಂದು ಲೈವ್‌ಲಾ ವರದಿ ಮಾಡಿದೆ.

ವಿಚಾರಣೆ ಕೈಗೆತ್ತಿಕೊಂಡ ಜಸ್ಟೀಸ್‌ ಎನ್‌.ನಗರೇಶ್‌‌ ಅವರಿದ್ದ ಪೀಠವು, “ಲಸಿಕೆ ಸರ್ಟಿಫಿಕೇಟ್‌ನಿಂದ ಮೋದಿ ಫೋಟೋವನ್ನು ತೆಗೆಯುವುದು ಅಪಾಯಕಾರಿ ಪ್ರತಿಪಾದನೆ” ಎಂದು ಅಭಿಪ್ರಾಯಪಟ್ಟಿದೆ.

“ಇದು ಅತ್ಯಂತ ಅಪಾಯಕಾರಿ ಪ್ರತಿಪಾದನೆ. ನಾಳೆ ಮತ್ತೊಬ್ಬ ಬಂದು ಪ್ರತಿಭಟನೆ ನಡೆಸಿ, ನನಗೆ ಮಹಾತ್ಮ ಗಾಂಧಿಯವರನ್ನು ಕಂಡರೆ ಇಷ್ಟವಿಲ್ಲ. ನನ್ನ ಬೆವರು ಮತ್ತು ರಕ್ತದಿಂದ ಸಂಪಾದಿಸಿದ ಹಣದಲ್ಲಿ ಗಾಂಧೀಜಿಯರ ಫೋಟೋವನ್ನು ಹಾಕಬೇಡಿ. ಅದನ್ನು ತೆಗೆಯಿರಿ ಎಂದರೆ ಏನು ಮಾಡುವುದು?” ಎಂದು ಕೋರ್ಟ್ ಕೇಳಿದೆ. ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ಅರ್ಜಿದಾರರ ವಕೀಲ ಅಜಿತ್ ರಾಯ್ ಪ್ರತಿಕ್ರಿಯಿಸಿ, “ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಕರೆನ್ಸಿಯಲ್ಲಿ ಗಾಂಧಿಯವರ ಮುಖವನ್ನು ಮುದ್ರಿಸಲಾಗಿದೆ. ಆದರೆ ಲಸಿಕೆ ಪ್ರಮಾಣಪತ್ರಗಳಲ್ಲಿ ಮೋದಿಯವರ ಮುಖದ ಅಗತ್ಯವಿರುವ ಯಾವುದೇ ರೀತಿಯ ಶಾಸನಬದ್ಧ ನಿಬಂಧನೆಗಳಿಲ್ಲ” ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಲು ನ್ಯಾಯಾಲಯ ಹೆಚ್ಚಿನ ಸಮಯವನ್ನು ನೀಡಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೋರಿದರು. ಹೀಗಾಗಿ ಪೀಠವು ನವೆಂಬರ್ 23ಕ್ಕೆ ಪ್ರಕರಣವನ್ನು ಮುಂದೂಡಿತು.

ದಿ ವೈರ್ ವಿಶ್ಲೇಷಿಸಿದಂತೆ, “ತನ್ನದೇ ಆದ ರಾಜಕೀಯ ಮತ್ತು ವ್ಯಕ್ತಿತ್ವದ ಆರಾಧನೆಯನ್ನು ಉತ್ತೇಜಿಸಲು” ಒಬ್ಬ ನಾಯಕ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಬಳಸುತ್ತಿರುವ ಏಕೈಕ ದೇಶ ಬಹುಶಃ ಭಾರತ ಮಾತ್ರ. ಯುಎಸ್, ಇಸ್ರೇಲ್ ಮತ್ತು ಇತರ ಕೆಲವು ದೇಶಗಳು ಲಸಿಕೆ ಸ್ವೀಕರಿಸಿದವರಿಗೆ ನೀಡಿದ ಪ್ರಮಾಣಪತ್ರ ಅಥವಾ ಕಾರ್ಡ್‌ಗಳಿಗೆ ಹೋಲಿಸಿದರೆ ಭಾರತದ ಪ್ರಮಾಣಪತ್ರ ಸಂಪೂರ್ಣ ಭಿನ್ನವಾಗಿದೆ.

ಕೇಂದ್ರ ಸರ್ಕಾರವು ದೇಶದಾದ್ಯಂತ ಬೀದಿಗಳಲ್ಲಿ, ಭಾರತದ ಸಾಮೂಹಿಕ ಲಸಿಕೆ ಅಭಿಯಾನಕ್ಕಾಗಿ ಮೋದಿಯವರಿಗೆ “ಧನ್ಯವಾದ” ಸಲ್ಲಿಸುವ ಪೋಸ್ಟರ್‌ಗಳನ್ನು ಹಾಕಿದೆ. ವಿದೇಶಗಳಿಗೆ ತೆರಳಿದ ಭಾರತೀಯರು  ಆ ದೇಶಗಳಿಗೆ ಸಲ್ಲಿಸುವ ವ್ಯಾಕ್ಸಿನೇಷನ್ ಸರ್ಟಿಫಿಕೇಟ್‌ ನೋಡಿ ಅಲ್ಲಿನ ಆಡಳಿತ ಸಿಬ್ಬಂದಿ ಗೊಂದಲಕ್ಕೊಳಗಾಗುತ್ತಿದ್ದಾರೆ ಎಂಬ ವರದಿಗಳಾಗಿವೆ.

ಹೈಕೋರ್ಟ್ ನಿಲುವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದ್ದಾರೆ.”ನ್ಯಾಯಾಧೀಶರು ಲಸಿಕೆ ಪ್ರಮಾಣಪತ್ರ ಮತ್ತು ಸರ್ಕಾರ ನೀಡಿದ ಕರೆನ್ಸಿ ನೋಟುಗಳ ನಡುವೆ ವ್ಯತ್ಯಾಸವನ್ನು ಮಾಡಲು ಸಾಧ್ಯವಾಗದಿರುವುದು ದುಃಖಕರವಾಗಿದೆ. ಯಾವ ನಿಯಮಗಳ ಪ್ರಕಾರ ಪ್ರಮಾಣಪತ್ರದಲ್ಲಿ ಪ್ರಧಾನ ಮಂತ್ರಿಯ ಫೋಟೋ ಇದೆ..” ಎಂದು ಕೆ.ಎಸ್.ನರೇಂದ್ರನ್‌ ಎಂಬವರು ಕೇಳಿದ್ದಾರೆ.


ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...