Homeಮುಖಪುಟಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕೋವಿಡ್‌ ಲಸಿಕೆ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆಯುವುದು ಅಪಾಯಕಾರಿ ಎಂದು ಹೇಳಿರುವ ಕೇರಳ ಹೈಕೋರ್ಟ್, “ಇಂದು ಮೋದಿ ಫೋಟೋ ತೆಗೆಯಿರಿ ಎಂದು ಕೇಳುತ್ತಾರೆ. ನಾಳೆ ಮಹಾತ್ಮಗಾಂಧಿಯವರ ಫೋಟೋವನ್ನು ಕರೆನ್ಸಿ ನೋಟಿನಿಂದ ತೆಗೆಯಿರಿ ಎಂದು ಯಾರಾದರೂ ಬಂದರೆ?” ಎಂದು ಕೇಳಿದೆ.

“ಮೋದಿಯವರ ಫೋಟೋವನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಹಾಕಿರುವುದು ಸರಿಯೇ” ಎಂದು ಪ್ರಶ್ನಿಸಿ ನಾಗರಿಕರೊಬ್ಬರು ಅರ್ಜಿ ಸಲ್ಲಿಸಿದ್ದರು. “ನಾನು ಎರಡು ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಯಿಂದ ತೆಗೆದುಕೊಂಡು ಹಣ ಪಾವತಿಸಿದ್ದೇನೆ. ಮೋದಿ ಫೋಟೋವನ್ನು ದೃಢೀಕರಣ ಪತ್ರದ ಮೇಲೆ ಹಾಕುವುದು ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತೆ” ಎಂದು ಅರ್ಜಿದಾರರು ವಾದಿಸಿದ್ದರು ಎಂದು ಲೈವ್‌ಲಾ ವರದಿ ಮಾಡಿದೆ.

ವಿಚಾರಣೆ ಕೈಗೆತ್ತಿಕೊಂಡ ಜಸ್ಟೀಸ್‌ ಎನ್‌.ನಗರೇಶ್‌‌ ಅವರಿದ್ದ ಪೀಠವು, “ಲಸಿಕೆ ಸರ್ಟಿಫಿಕೇಟ್‌ನಿಂದ ಮೋದಿ ಫೋಟೋವನ್ನು ತೆಗೆಯುವುದು ಅಪಾಯಕಾರಿ ಪ್ರತಿಪಾದನೆ” ಎಂದು ಅಭಿಪ್ರಾಯಪಟ್ಟಿದೆ.

“ಇದು ಅತ್ಯಂತ ಅಪಾಯಕಾರಿ ಪ್ರತಿಪಾದನೆ. ನಾಳೆ ಮತ್ತೊಬ್ಬ ಬಂದು ಪ್ರತಿಭಟನೆ ನಡೆಸಿ, ನನಗೆ ಮಹಾತ್ಮ ಗಾಂಧಿಯವರನ್ನು ಕಂಡರೆ ಇಷ್ಟವಿಲ್ಲ. ನನ್ನ ಬೆವರು ಮತ್ತು ರಕ್ತದಿಂದ ಸಂಪಾದಿಸಿದ ಹಣದಲ್ಲಿ ಗಾಂಧೀಜಿಯರ ಫೋಟೋವನ್ನು ಹಾಕಬೇಡಿ. ಅದನ್ನು ತೆಗೆಯಿರಿ ಎಂದರೆ ಏನು ಮಾಡುವುದು?” ಎಂದು ಕೋರ್ಟ್ ಕೇಳಿದೆ. ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ಅರ್ಜಿದಾರರ ವಕೀಲ ಅಜಿತ್ ರಾಯ್ ಪ್ರತಿಕ್ರಿಯಿಸಿ, “ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಕರೆನ್ಸಿಯಲ್ಲಿ ಗಾಂಧಿಯವರ ಮುಖವನ್ನು ಮುದ್ರಿಸಲಾಗಿದೆ. ಆದರೆ ಲಸಿಕೆ ಪ್ರಮಾಣಪತ್ರಗಳಲ್ಲಿ ಮೋದಿಯವರ ಮುಖದ ಅಗತ್ಯವಿರುವ ಯಾವುದೇ ರೀತಿಯ ಶಾಸನಬದ್ಧ ನಿಬಂಧನೆಗಳಿಲ್ಲ” ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಲು ನ್ಯಾಯಾಲಯ ಹೆಚ್ಚಿನ ಸಮಯವನ್ನು ನೀಡಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೋರಿದರು. ಹೀಗಾಗಿ ಪೀಠವು ನವೆಂಬರ್ 23ಕ್ಕೆ ಪ್ರಕರಣವನ್ನು ಮುಂದೂಡಿತು.

ದಿ ವೈರ್ ವಿಶ್ಲೇಷಿಸಿದಂತೆ, “ತನ್ನದೇ ಆದ ರಾಜಕೀಯ ಮತ್ತು ವ್ಯಕ್ತಿತ್ವದ ಆರಾಧನೆಯನ್ನು ಉತ್ತೇಜಿಸಲು” ಒಬ್ಬ ನಾಯಕ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಬಳಸುತ್ತಿರುವ ಏಕೈಕ ದೇಶ ಬಹುಶಃ ಭಾರತ ಮಾತ್ರ. ಯುಎಸ್, ಇಸ್ರೇಲ್ ಮತ್ತು ಇತರ ಕೆಲವು ದೇಶಗಳು ಲಸಿಕೆ ಸ್ವೀಕರಿಸಿದವರಿಗೆ ನೀಡಿದ ಪ್ರಮಾಣಪತ್ರ ಅಥವಾ ಕಾರ್ಡ್‌ಗಳಿಗೆ ಹೋಲಿಸಿದರೆ ಭಾರತದ ಪ್ರಮಾಣಪತ್ರ ಸಂಪೂರ್ಣ ಭಿನ್ನವಾಗಿದೆ.

ಕೇಂದ್ರ ಸರ್ಕಾರವು ದೇಶದಾದ್ಯಂತ ಬೀದಿಗಳಲ್ಲಿ, ಭಾರತದ ಸಾಮೂಹಿಕ ಲಸಿಕೆ ಅಭಿಯಾನಕ್ಕಾಗಿ ಮೋದಿಯವರಿಗೆ “ಧನ್ಯವಾದ” ಸಲ್ಲಿಸುವ ಪೋಸ್ಟರ್‌ಗಳನ್ನು ಹಾಕಿದೆ. ವಿದೇಶಗಳಿಗೆ ತೆರಳಿದ ಭಾರತೀಯರು  ಆ ದೇಶಗಳಿಗೆ ಸಲ್ಲಿಸುವ ವ್ಯಾಕ್ಸಿನೇಷನ್ ಸರ್ಟಿಫಿಕೇಟ್‌ ನೋಡಿ ಅಲ್ಲಿನ ಆಡಳಿತ ಸಿಬ್ಬಂದಿ ಗೊಂದಲಕ್ಕೊಳಗಾಗುತ್ತಿದ್ದಾರೆ ಎಂಬ ವರದಿಗಳಾಗಿವೆ.

ಹೈಕೋರ್ಟ್ ನಿಲುವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದ್ದಾರೆ.”ನ್ಯಾಯಾಧೀಶರು ಲಸಿಕೆ ಪ್ರಮಾಣಪತ್ರ ಮತ್ತು ಸರ್ಕಾರ ನೀಡಿದ ಕರೆನ್ಸಿ ನೋಟುಗಳ ನಡುವೆ ವ್ಯತ್ಯಾಸವನ್ನು ಮಾಡಲು ಸಾಧ್ಯವಾಗದಿರುವುದು ದುಃಖಕರವಾಗಿದೆ. ಯಾವ ನಿಯಮಗಳ ಪ್ರಕಾರ ಪ್ರಮಾಣಪತ್ರದಲ್ಲಿ ಪ್ರಧಾನ ಮಂತ್ರಿಯ ಫೋಟೋ ಇದೆ..” ಎಂದು ಕೆ.ಎಸ್.ನರೇಂದ್ರನ್‌ ಎಂಬವರು ಕೇಳಿದ್ದಾರೆ.


ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...