Homeಮುಖಪುಟಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

- Advertisement -
- Advertisement -

ಜಾಮೀನು ಆದೇಶಗಳನ್ನು ಜೈಲು ಅಧಿಕಾರಿಗಳಿಗೆ ತಿಳಿಸುವಲ್ಲಿ ಆಗುವ ವಿಳಂಬವು ‘ಅತ್ಯಂತ ಗಂಭೀರವಾದ ದೋಷ’ವಾಗಿದ್ದು, ಇದು ಪ್ರತಿಯೊಬ್ಬ ವಿಚಾರಣಾಧೀನ ಕೈದಿಯ ‘ಮಾನವ ಸ್ವಾತಂತ್ಯ್ರ’ವನ್ನು ಕಸಿದುಕೊಳ್ಳುತ್ತದೆ. ಹಾಗಾಗಿ ಇಂತಹ ಸಮಸ್ಯೆಗಳನ್ನು ‘ಯುದ್ಧೋಪಾದಿ’ಯಲ್ಲಿ ಪರಿಹರಿಸುವುದು ಅತ್ಯಗತ್ಯ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಒತ್ತಿ ಹೇಳಿದ್ದಾರೆ.

ಅಲಹಾಬಾದ್‌ ಹೈಕೋರ್ಟ್‌ ಆಯೋಜಿಸಿದ್ದ ‘ಅರ್ಜಿದಾರರಿಗೆ ಆನ್‌ಲೈನ್‌ ಕಾನೂನು ನೆರವು ನೀಡಲು ವರ್ಚುವಲ್‌ ಕೋರ್ಟ್‌‌ಗಳು ಮತ್ತು ಇ-ಸೇವಾ ಕೇಂದ್ರಗಳು’ ಎಂಬ ವಿಷಯದ ಕುರಿತ ಆನ್‌ಲೈನ್‌ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿದ್ದಾರೆ.

ಕ್ರೂಸ್ ಹಡಗಿನ ಡ್ರಗ್ಸ್‌ ಪ್ರಕರಣದಲ್ಲಿ ಬಂಧಿಸಲಾಗಿದ್ದ ಬಾಲಿವುಡ್‌ ನಟ ಶಾರುಖ್‌ಖಾನ್‌ ಅವರ ಮಗ ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

ಈ ಮೊದಲು ಸುಪ್ರೀಂ ಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ಜಾಮೀನು ಆದೇಶ ಜಾರಿ ವಿಳಂಬದ ವರದಿಗಳ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿತ್ತು. ಅದರೊಂದಿಗೆ ಜಾಮೀನು ಆದೇಶಗಳ ರವಾನೆಗಾಗಿ ’ಸುರಕ್ಷಿತ, ವಿಶ್ವಾಸಾರ್ಹ ಮತ್ತು ಅಧಿಕೃತ ಚಾನಲ್‌’ ಅನ್ನು ಸ್ಥಾಪಿಸುವುದಾಗಿ ತಿಳಿಸಿದ್ದರು. “ನಾವು ಡಿಜಿಟಲ್‌ ಯುಗದಲ್ಲಿಯೂ ಆದೇಶಗಳ ಸಂವಹನಕ್ಕಾಗಿ ಆಕಾಶದಲ್ಲಿ ಪಾರಿವಾಳಗಳನ್ನು ನಿರೀಕ್ಷಿಸುತ್ತಿದ್ದೇವೆ’ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಶೀಘ್ರ ಹಾಗೂ ಸುರಕ್ಷಿತ ವಿದ್ಯುನ್ಮಾನ ದಾಖಲೆಗಳ ಪ್ರಸರಣ (ಫಾಸ್ಟ್‌ ಅಂಡ್‌ ಸೆಕ್ಯೂರ್‌ ಟ್ರಾನ್ಸ್‌ ಮಿಷನ್‌ ಆಫ್‌ ಎಲೆಕ್ಟ್ರಾನಿಕ್‌ ರೆಕಾರ್ಡ್ಸ್‌ – FASTER) ಯೋಜನೆಯ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಇದಕ್ಕಾಗಿ ಪ್ರತಿ ಜೈಲಿನಲ್ಲಿಯೂ ವೇಗವಾದ ಇಂಟರ್‌ನೆಟ್ ಸೌಲಭ್ಯವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಮುರ್ತಿ ಚಂದ್ರಚೂಡ್‌ ಅವರು, ಒರಿಸ್ಸಾ ಹೈಕೋರ್ಟ್‌ ಪ್ರತಿ ವಿಚಾರಣಾಧೀನ ಕೈದಿ ಮತ್ತು ಜೈಲು ಶಿಕ್ಷೆಗೆ ಒಳಗಾಗುವ ಅಪರಾಧಿಗಳಿಗೆ ‘ಇ-ಕಸ್ಟಡಿ ಪ್ರಮಾಣಪತ್ರ’ ಮಂಜೂರು ಮಾಡಲು ಆರಂಭಿಸಿದೆ ಎಂದು ಹೇಳಿದ್ದಾರೆ.

‘ಈ ಪ್ರಮಾಣಪತ್ರವು  ನಿರ್ದಿಷ್ಟ ವಿಚಾರಣೆಗೆ ಒಳಪಡುವ ಅಥವಾ ಅಪರಾಧಿಗೆ ಸಂಬಂಧಿಸಿದಂತೆ ಬಂಧನದಿಂದ ಹಿಡಿದು ಪ್ರತಿ ಪ್ರಕರಣದ ಪ್ರಗತಿಯ ಎಲ್ಲಾ ದತ್ತಾಂಶಗಳನ್ನು ನಮಗೆ ನೀಡುತ್ತದೆ. ಇದು ಜಾಮೀನು ಆದೇಶಗಳನ್ನು  ಜೈಲುಗಳೊಂದಿಗೆ ಸಂವಹನ ನಡೆಸಲು ನಮಗೆ ಸಹಾಯ ಮಾಡುತ್ತದೆ’ ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ 99.43 ಲಕ್ಷ ಪ್ರಕರಣಗಳ ವಿಚಾರಣೆ ಮುಗಿಸಿದ್ದು, 18.35 ಲಕ್ಷ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲಾಗಿದೆ. ಈವರೆಗೂ ಒಟ್ಟು 119 ಕೋಟಿ ರೂಪಾಯಿ ದಂಡ ವಸೂಲಿಯಾಗಿದೆ’ ಎಂದು ನ್ಯಾಯಾಧೀಶರು ಹೇಳಿದರು.

ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿ 2.95 ಕೋಟಿ ಕ್ರಿಮಿನಲ್‌ ಪ್ರಕರಣಗಳು ಇನ್ನೂ ಬಾಕಿ ಉಳಿದಿದ್ದು, ಶೇ. 77 ಕ್ಕೂ ಹೆಚ್ಚು ಪ್ರಕರಣಗಳು ಒಂದು ವರ್ಷಕ್ಕಿಂತ ಹಳೆಯವು ಎಂದು ನ್ಯಾಯಮೂರ್ತಿ ಚಂದ್ರಚೂಡ್‌ ತಿಳಿಸಿದ್ದಾರೆ.

“ನಾವು ಇಲ್ಲಿಯೂ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಬಳಸಬಹುದು. ಪ್ರಸ್ತುತ ಸುಪ್ರೀಂ ಕೋರ್ಟ್‌ನ ಇ-ಸಮಿತಿಯಲ್ಲಿ ಈ ಬಗ್ಗೆ ಕೆಲಸ ಕೆಲಸ ಮಾಡುತ್ತಿದ್ದೇವೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ವಿವರಿಸಿದ್ದಾರೆ.


ಇದನ್ನೂ ಓದಿ: ರಾಜಕೀಯ ಮುಖಂಡರ ಆರ್‌ಎಸ್‌ಎಸ್ ವಿರೋಧವಷ್ಟೇ ಸಾಲದು; ವಿಷಪೂರಿತ ಸಿದ್ಧಾಂತವನ್ನು ತೊಲಗಿಸುವ ಹೋರಾಟಕ್ಕೆ ಸಜ್ಜಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...