Homeಮುಖಪುಟಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಜಾಮೀನು ಆದೇಶಗಳ ಸಂವಹನ ವಿಳಂಬ ಗಂಭೀರವಾದ ದೋಷವಾಗಿದೆ: ನ್ಯಾ. ಚಂದ್ರಚೂಡ್‌

ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

- Advertisement -
- Advertisement -

ಜಾಮೀನು ಆದೇಶಗಳನ್ನು ಜೈಲು ಅಧಿಕಾರಿಗಳಿಗೆ ತಿಳಿಸುವಲ್ಲಿ ಆಗುವ ವಿಳಂಬವು ‘ಅತ್ಯಂತ ಗಂಭೀರವಾದ ದೋಷ’ವಾಗಿದ್ದು, ಇದು ಪ್ರತಿಯೊಬ್ಬ ವಿಚಾರಣಾಧೀನ ಕೈದಿಯ ‘ಮಾನವ ಸ್ವಾತಂತ್ಯ್ರ’ವನ್ನು ಕಸಿದುಕೊಳ್ಳುತ್ತದೆ. ಹಾಗಾಗಿ ಇಂತಹ ಸಮಸ್ಯೆಗಳನ್ನು ‘ಯುದ್ಧೋಪಾದಿ’ಯಲ್ಲಿ ಪರಿಹರಿಸುವುದು ಅತ್ಯಗತ್ಯ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಒತ್ತಿ ಹೇಳಿದ್ದಾರೆ.

ಅಲಹಾಬಾದ್‌ ಹೈಕೋರ್ಟ್‌ ಆಯೋಜಿಸಿದ್ದ ‘ಅರ್ಜಿದಾರರಿಗೆ ಆನ್‌ಲೈನ್‌ ಕಾನೂನು ನೆರವು ನೀಡಲು ವರ್ಚುವಲ್‌ ಕೋರ್ಟ್‌‌ಗಳು ಮತ್ತು ಇ-ಸೇವಾ ಕೇಂದ್ರಗಳು’ ಎಂಬ ವಿಷಯದ ಕುರಿತ ಆನ್‌ಲೈನ್‌ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿದ್ದಾರೆ.

ಕ್ರೂಸ್ ಹಡಗಿನ ಡ್ರಗ್ಸ್‌ ಪ್ರಕರಣದಲ್ಲಿ ಬಂಧಿಸಲಾಗಿದ್ದ ಬಾಲಿವುಡ್‌ ನಟ ಶಾರುಖ್‌ಖಾನ್‌ ಅವರ ಮಗ ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದ ಮೇಲೂ ಆ ಆದೇಶ ಜೈಲು ಅಧಿಕಾರಿಯನ್ನು ತಲುಪಲು ವಿಳಂಬವಾದ ಕಾರಣಕ್ಕೆ ಎರಡು ದಿನಗಳ ಕಾಲ ಜೈಲಿನಲ್ಲಿರಬೇಕಾಗಿತ್ತು.

ಈ ಮೊದಲು ಸುಪ್ರೀಂ ಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ಜಾಮೀನು ಆದೇಶ ಜಾರಿ ವಿಳಂಬದ ವರದಿಗಳ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿತ್ತು. ಅದರೊಂದಿಗೆ ಜಾಮೀನು ಆದೇಶಗಳ ರವಾನೆಗಾಗಿ ’ಸುರಕ್ಷಿತ, ವಿಶ್ವಾಸಾರ್ಹ ಮತ್ತು ಅಧಿಕೃತ ಚಾನಲ್‌’ ಅನ್ನು ಸ್ಥಾಪಿಸುವುದಾಗಿ ತಿಳಿಸಿದ್ದರು. “ನಾವು ಡಿಜಿಟಲ್‌ ಯುಗದಲ್ಲಿಯೂ ಆದೇಶಗಳ ಸಂವಹನಕ್ಕಾಗಿ ಆಕಾಶದಲ್ಲಿ ಪಾರಿವಾಳಗಳನ್ನು ನಿರೀಕ್ಷಿಸುತ್ತಿದ್ದೇವೆ’ ಎಂದು ಪೀಠ ಅಭಿಪ್ರಾಯಪಟ್ಟಿತ್ತು.

ಶೀಘ್ರ ಹಾಗೂ ಸುರಕ್ಷಿತ ವಿದ್ಯುನ್ಮಾನ ದಾಖಲೆಗಳ ಪ್ರಸರಣ (ಫಾಸ್ಟ್‌ ಅಂಡ್‌ ಸೆಕ್ಯೂರ್‌ ಟ್ರಾನ್ಸ್‌ ಮಿಷನ್‌ ಆಫ್‌ ಎಲೆಕ್ಟ್ರಾನಿಕ್‌ ರೆಕಾರ್ಡ್ಸ್‌ – FASTER) ಯೋಜನೆಯ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಇದಕ್ಕಾಗಿ ಪ್ರತಿ ಜೈಲಿನಲ್ಲಿಯೂ ವೇಗವಾದ ಇಂಟರ್‌ನೆಟ್ ಸೌಲಭ್ಯವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಮುರ್ತಿ ಚಂದ್ರಚೂಡ್‌ ಅವರು, ಒರಿಸ್ಸಾ ಹೈಕೋರ್ಟ್‌ ಪ್ರತಿ ವಿಚಾರಣಾಧೀನ ಕೈದಿ ಮತ್ತು ಜೈಲು ಶಿಕ್ಷೆಗೆ ಒಳಗಾಗುವ ಅಪರಾಧಿಗಳಿಗೆ ‘ಇ-ಕಸ್ಟಡಿ ಪ್ರಮಾಣಪತ್ರ’ ಮಂಜೂರು ಮಾಡಲು ಆರಂಭಿಸಿದೆ ಎಂದು ಹೇಳಿದ್ದಾರೆ.

‘ಈ ಪ್ರಮಾಣಪತ್ರವು  ನಿರ್ದಿಷ್ಟ ವಿಚಾರಣೆಗೆ ಒಳಪಡುವ ಅಥವಾ ಅಪರಾಧಿಗೆ ಸಂಬಂಧಿಸಿದಂತೆ ಬಂಧನದಿಂದ ಹಿಡಿದು ಪ್ರತಿ ಪ್ರಕರಣದ ಪ್ರಗತಿಯ ಎಲ್ಲಾ ದತ್ತಾಂಶಗಳನ್ನು ನಮಗೆ ನೀಡುತ್ತದೆ. ಇದು ಜಾಮೀನು ಆದೇಶಗಳನ್ನು  ಜೈಲುಗಳೊಂದಿಗೆ ಸಂವಹನ ನಡೆಸಲು ನಮಗೆ ಸಹಾಯ ಮಾಡುತ್ತದೆ’ ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ 99.43 ಲಕ್ಷ ಪ್ರಕರಣಗಳ ವಿಚಾರಣೆ ಮುಗಿಸಿದ್ದು, 18.35 ಲಕ್ಷ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲಾಗಿದೆ. ಈವರೆಗೂ ಒಟ್ಟು 119 ಕೋಟಿ ರೂಪಾಯಿ ದಂಡ ವಸೂಲಿಯಾಗಿದೆ’ ಎಂದು ನ್ಯಾಯಾಧೀಶರು ಹೇಳಿದರು.

ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿ 2.95 ಕೋಟಿ ಕ್ರಿಮಿನಲ್‌ ಪ್ರಕರಣಗಳು ಇನ್ನೂ ಬಾಕಿ ಉಳಿದಿದ್ದು, ಶೇ. 77 ಕ್ಕೂ ಹೆಚ್ಚು ಪ್ರಕರಣಗಳು ಒಂದು ವರ್ಷಕ್ಕಿಂತ ಹಳೆಯವು ಎಂದು ನ್ಯಾಯಮೂರ್ತಿ ಚಂದ್ರಚೂಡ್‌ ತಿಳಿಸಿದ್ದಾರೆ.

“ನಾವು ಇಲ್ಲಿಯೂ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಬಳಸಬಹುದು. ಪ್ರಸ್ತುತ ಸುಪ್ರೀಂ ಕೋರ್ಟ್‌ನ ಇ-ಸಮಿತಿಯಲ್ಲಿ ಈ ಬಗ್ಗೆ ಕೆಲಸ ಕೆಲಸ ಮಾಡುತ್ತಿದ್ದೇವೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ವಿವರಿಸಿದ್ದಾರೆ.


ಇದನ್ನೂ ಓದಿ: ರಾಜಕೀಯ ಮುಖಂಡರ ಆರ್‌ಎಸ್‌ಎಸ್ ವಿರೋಧವಷ್ಟೇ ಸಾಲದು; ವಿಷಪೂರಿತ ಸಿದ್ಧಾಂತವನ್ನು ತೊಲಗಿಸುವ ಹೋರಾಟಕ್ಕೆ ಸಜ್ಜಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...