Homeಮುಖಪುಟದೇಶ ನಿಮ್ಮೊಂದಿಗಿದೆ: ಶಾರುಖ್‌ಗೆ ರಾಹುಲ್‌ ಗಾಂಧಿ ಪತ್ರ?

ದೇಶ ನಿಮ್ಮೊಂದಿಗಿದೆ: ಶಾರುಖ್‌ಗೆ ರಾಹುಲ್‌ ಗಾಂಧಿ ಪತ್ರ?

- Advertisement -
- Advertisement -

ಡ್ರಗ್ಸ್-ಸಂಬಂಧಿತ ಆರೋಪಗಳ ಮೇಲೆ ನಟ ಶಾರುಖ್‌ಖಾನ್ ಅವರು ಪುತ್ರ ಆರ್ಯನ್ ಖಾನ್ ಸೆರೆಮನೆಯಲ್ಲಿದ್ದಾಗ, ಶಾರುಖ್ ಖಾನ್ ಅವರಿಗೆ ಅನೇಕರು ಬೆಂಬಲ ನೀಡಿದ್ದರು.

ಚಿತ್ರರಂಗದ ಬಂಧುಗಳು ಮತ್ತು ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆ- ಕಾಂಗ್ರೆಸ್‌ನಿಂದ ಬೆಂಬಲ ದೊರೆತ್ತಿತ್ತು. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರೂ ಆ ಸಮಯದಲ್ಲಿ ಶಾರುಖ್ ಖಾನ್ ಅವರಿಗೆ ಪತ್ರ ಬರೆದಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಆರ್ಯನ್ ‌ಅವರನ್ನು ಇರಿಸಲಾಗಿದ್ದ ಆರು ದಿನಗಳ ನಂತರ ರಾಹುಲ್ ಗಾಂಧಿ ಅವರು ಶಾರುಖ್‌ ಖಾನ್‌ ಅವರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ರಾಹುಲ್‌ ಗಾಂಧಿಯವರು ಶಾರುಖ್ ಖಾನ್ ಅವರಿಗೆ “ದೇಶವು ನಿಮ್ಮೊಂದಿಗಿದೆ” ಎಂದು ತಿಳಿಸಿದ್ದರು ಎಂದು ಮೂಲಗಳು ಹೇಳಿವೆ.

ಅಕ್ಟೋಬರ್ 28ರಂದು ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಅಂತಿಮವಾಗಿ ಜಾಮೀನು ನೀಡಿತು. ಕಳೆದ ಶನಿವಾರ ಜಾಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ ಬಳಿಕ ಆರ್ಯನ್‌ ಬಿಡುಗಡೆಯಾಗಿದ್ದರು. ಮುಂಬೈ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಮೂರು ವಾರಗಳ ಜೈಲು ವಾಸದ ನಂತರ ಆರೋಪಿ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಹಗಡಿನಲ್ಲಿ ನಡೆಯುತ್ತಿದ್ದ ಪಾರ್ಟಿಯ ಮೇಲೆ ದಾಳಿ ನಡೆಸಿದ ಕೆಲವು ಗಂಟೆಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ರನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿತ್ತು. ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್ ಅವರಿಗೆ ಈ ಹಿಂದೆ ಎರಡು ಬಾರಿ ಜಾಮೀನು ನಿರಾಕರಿಸಲಾಗಿತ್ತು.

ಪ್ರಕರಣದಲ್ಲಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿರುದ್ಧ ಆರ್ಯನ್ ಖಾನ್‌ಗೆ ಮತ್ತು ಸಹ-ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್ ಧಮೇಚಾ ಬಾಂಬೆ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಮೂರು ದಿನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.

ಆರ್ಯನ್ ಖಾನ್ ಪರ ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಬಾಂಬೆ ಹೈಕೋರ್ಟ್‌ನಲ್ಲಿ ವಾದಿಸಿದ್ದರು. ಆರ್ಯನ್ ಖಾನ್ ಬಳಿ ಯಾವುದೇ ಮಾದಕ ದ್ರವ್ಯ ಪತ್ತೆಯಾಗಿಲ್ಲ ಎಂಬುದನ್ನು ಒತ್ತಿ ಹೇಳಿದ್ದರು. ವಾಟ್ಸ್‌ಆಪ್‌ ಚಾಟ್‌ಗಳ ಆಧಾರದಲ್ಲಿ ಆರ್ಯನ್‌ ಡ್ರಗ್‌ ಜಾಲದಲ್ಲಿದ್ದರು ಎಂದು ನಿರೂಪಿಸಲಾಗದು ಎಂದು ಕೋರ್ಟ್ ಹೇಳಿತ್ತು.


ಇದನ್ನೂ ಓದಿರಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳ್ಳನಿಗೆ ಕಳ್ಳ ಸಾಥ್ ಕೊಡೋದು ಅಂದ್ರೆ ಇದೆ .ಡ್ರಗ್ರ್ಸ್ ಪೆಡ್ಲರ್ ಒಬ್ಬ ಇಂಥ ಮಾತು ಹೇಳೋದು ಅಂದ್ರೆ ಸಮಾಜವನ್ನು ಈ ಪಪ್ಪು ಯಾವ ರೀತಿ ಮಾಡಲು ಹೋಗಿದ್ದಾರೆ ಅನ್ನೋದು ಸಹಜವಾಗಿಯೇ ಜನರಿಗೆ ಅರ್ಥ ಆಗುತ್ತೇ …..
    ಸ್ವಗೋಶಿತ ಗಾಂಧಿ ಕುಟುಂಬ ಹಿಂದೆ ಯಿಂದ ಇದೇ ಮಾಡಿರೋದು

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...