Homeಮುಖಪುಟಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

ಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಬೆಂಬಲವಿದೆ. ಮುಸ್ಲಿಮರನ್ನು ಓಲೈಸಲು ಅವರು ಧಾರ್ಮಿಕ ಮತಾಂತರಕ್ಕೂ ಸಿದ್ಧರಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಸಚಿವ ಆನಂದ್‌ ಸ್ವರೂಪ್‌ ಶುಕ್ಲಾ ಆರೋಪಿಸಿದ್ದಾರೆ.

ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಖಿಲೇಶ್‌ ಅವರು ನೆರೆಯ ದೇಶದ ಇಂಟರ್‌ ಸರ್ವೀಸಸ್‌ ಇಂಟೆಲಿಜೆನ್ಸ್‌ (ಐಎಸ್‌ಐ)ನಿಂದ ಆರ್ಥಿಕ ಬೆಂಬಲವನ್ನು ಪಡೆಯುತ್ತಿರಬಹುದು ಎಂದು ಆರೋಪಿಸಿದ್ದಾರೆ.

‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಸ್ಲಾಮಿಕ್‌ ಜಗತ್ತಿಗೆ ಸವಾಲಾಗಿದ್ದಾರೆ. ಅಖಿಲೇಶ್‌ ಐಎಸ್‌ಐನಿಂದ ಪ್ರೋತ್ಸಾಹ ಮತ್ತು ಸಲಹೆ ಪಡೆಯುತ್ತಿದ್ದಾರೆ. ಇದರಿಂದ ಅವರಿಗೆ ಆರ್ಥಿಕ ಬೆಂಬಲವೂ ಸಿಗುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಶುಕ್ಲಾ ಹೇಳಿದ್ದಾರೆ.

ಭಾನುವಾರ ಹರ್ದೋಯಿಯಲ್ಲಿ ಮಾಡಿದ ಭಾಷಣದಲ್ಲಿ ಯಾದವ್‌ ಅವರು ಮಹಾತ್ಮ ಗಾಂಧಿ, ಸರ್ದಾರ್‌ ವಲ್ಲಭಬಾಯಿ ಪಟೇಲ್‌, ಜವಾಹರ್‌ಲಾಲ್‌ ನೆರು ಮತ್ತು ಪಾಕಿಸ್ತಾನದ ಸಂಸ್ಥಾಪಕ ಮುಹಮ್ಮದ್‌ ಅಲಿ ಜಿನ್ನಾ ಅವರು ಭಾರತದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ನಾಯಕರು ಮಾತನಾಡಿದ್ದರು. ಇದರ ಬೆನ್ನಲ್ಲೆ ಶುಕ್ಲಾ ಅಖಿಲೇಶ್ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮುಸ್ಲಿಮರನ್ನು ಓಲೈಸಲು ಯಾದವ್‌ ಅವರು ನಮಾಜ್‌ ಮತ್ತು ಉಪವಾಸ ಆಚರಿಸಿದರು. ಮುಸ್ಲಿಮರ ಮತಗಳನ್ನು ಪಡೆಯಲು ಅವರು ‘ಮತಾಂತರ’ ಮತ್ತು ‘ಖತ್ನಾ’ ವನ್ನು ಆಚರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಐಎಸ್‌ಐ ನಿರ್ದೇಶನದ ಮೇರೆಗೆ ಯಾದವ್‌, ಜಿನ್ನಾ ಅವರನ್ನು ವೈಭವೀಕರಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ತಾಲಿಬಾನ್‌ಗೆ ಬೇಕಾದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಶುಕ್ಲಾ ಆರೋಪಿಸಿದ್ದಾರೆ.

ಅಖಿಲೇಶ್‌ ಯಾದವ್‌ ಅವರು ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರನ್ನು ಜಿನ್ನಾ ಅವರೊಂದಿಗೆ ಹೋಲಿಸಿರುವುದು ಖಂಡನೀಯ ಮತ್ತು ಅವರು ಅದಕ್ಕಾಗಿ ಪಶ್ಚಾತ್ತಾಪ ಪಡಬೇಕು ಎಂದಿದ್ದಾರೆ.

ಹರ್ದೋಯಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಅವರು, ’ಸರ್ದಾರ್‌ ಪಟೇಲ್‌, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರು ಮತ್ತು ಜಿನ್ನಾ ಒಂದೇ ಸಂಸ್ಥೆಯಲ್ಲಿ ಕಲಿತು ಬ್ಯಾರಿಸ್ಟರ್‌ಗಳಾದರು. ಅವರು ಭಾರತ ಸ್ವಾತಂತ್ಯ್ರ ಪಡೆಯಲು ಸಹಾಯ ಮಾಡಿದರು’ ಎಂದು ತಿಳಿಸಿದ್ದರು.

1948ರಲ್ಲಿ ಗೃಹ ಸಚಿವರಾಗಿದ್ದ ಪಟೇಲ್‌ ಅವರು ಗಾಂಧಿಯವರ ಹತ್ಯೆಯ ನಂತರ ಸ್ವಯಂಸೇವಕ ಸಂಘದ ಮೇಲೆ ವಿಧಿಸಿದ್ದ ನಿಷೇಧದ ಬಗ್ಗೆಯೂ ಯಾದವ್‌ ಉಲ್ಲೇಖಿಸಿದ್ದರು.


ಇದನ್ನೂ ಓದಿ: ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...