Homeಮುಖಪುಟಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

ಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಕಳೆದೊಂದು ವರ್ಷದಿಂದ ಸತತ ಏರುಗತಿಯಲ್ಲಿದ್ದ ಇಂಧನದ ಬೆಲೆಯಲ್ಲಿ ಸಣ್ಣ ಮಟ್ಟದ ಇಳಿಕೆಯಾಗಿದೆ. ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 9 ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ. ಈ ಕ್ರಮಕ್ಕೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಅನುಸರಿಸಿ ಕರ್ನಾಟಕ, ಹಿಮಾಚಲ ಪ್ರದೇಶ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ, ಉತ್ತರ ಪ್ರದೇಶ, ಗುಜರಾತ್ ಮತ್ತು ಉತ್ತರಖಂಡ ರಾಜ್ಯಗಳು ತಮ್ಮ ವ್ಯಾಟ್ ಕಡಿತ ಮಾಡಿವೆ. ಕರ್ನಾಟಕ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ ತಲಾ 7 ರೂ ಕಡಿತಗೊಳಿಸಿವೆ. ಉಳಿದ ರಾಜ್ಯಗಳು ತಲಾ 2 ರೂನಷ್ಟು ಕಡಿತಗೊಳಿಸಿವೆ.

ಒಕ್ಕೂಟ ಸರ್ಕಾರದ ಬೆಲೆ ಕಡಿತವು ಗುರುವಾರ ಮುಂಜಾನೆಯಿಂದಲೇ ಜಾರಿಗೆ ಬಂದಿದ್ದರೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿರುವ ಬೆಲೆ ಕಡಿತವು ಗುರುವಾರ ಸಂಜೆಯಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.

ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.64 ರೂ ಇದ್ದರೆ, ಡೀಸೆಲ್ ಬೆಲೆ 92.03 ರೂ ಆಗಿದೆ.

“ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌” ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದಾರೆ.

5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ – ಲಾಲುಪ್ರಸಾದ್ ಯಾದವ್

ಮೋದಿ ಸರ್ಕಾರ ಘೋಷಿಸಿದ ಬೆಲೆ ಇಳಿಕೆ ಯಾವುದಕ್ಕೂ ಸಾಲುವುದಿಲ್ಲ. 5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ. ಉತ್ತರ ಪ್ರದೇಶ ಚುನಾವಣೆ ಬಳಿಕೆ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಲಿವೆ. 50 ರೂ ಕಡಿತಗೊಳಿಸಿದ್ದರೆ ಮಾತ್ರ ಜನರಿಗೆ ಉಪಯೋಗವಾಗಲಿದೆ ಎಂದು ಆರ್‌ಜೆಡಿ ವರಷ್ಟರಾದ ಲಾಲುಪ್ರಸಾದ್ ಯಾದವ್ ಪ್ರತಿಕ್ರಿಯಿಸಿದ್ದಾರೆ.

ಈ ಒಂದು ವರ್ಷದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿಸಿದ್ದು : ₹36, ಕಡಿತಗೊಳಿಸಿದ್ದು : ₹5

ಡೀಸೆಲ್ ಬೆಲೆ ; ಹೆಚ್ಚಿಸಿದ್ದು : ₹27 ಕಡಿತಗೊಳಿಸಿದ್ದು : ₹10

ಮೋದಿ ಸರ್ಕಾರ ಮಾಡಬೇಕಿದಿದ್ದು: ತೆರಿಗೆ ಭಯೋತ್ಪಾದನೆ ನಿಲ್ಲಿಸಲಿ.
ಇಂತಹ ಕಣ್ಣೊರೆಸುವ ತಂತ್ರಗಳಿಂದ ಜನರನ್ನು ಮೂರ್ಖರನ್ನಾಗಿಸುವುದು ನಿಲ್ಲಿಸಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ಉಪಚುನಾವಣೆ ಸೋಲಿನಿಂದ ಬೆಲೆ ಇಳಿಕೆ?

ಅಕ್ಟೋಬರ್ 30 ರಂದು ನಡೆದ 30 ವಿಧಾನಸಭಾ ಕ್ಷೇತ್ರಗಳು ಮತ್ತು 3 ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಇದರಲ್ಲಿ ಬಿಜೆಪಿ ಕೇವಲ 7 ವಿಧಾನಸಭೆ ಮತ್ತು ಒಂದು ಲೋಕಸಭಾ ಚುನಾವಣೆಯಲ್ಲಿ ಮಾತ್ರ ಗೆದ್ದಿತ್ತು. ಬಿಜೆಪಿ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮೂರು ವಿಧಾನಸಭೆ ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲುಂಡಿತ್ತು.

ಅದೇ ರೀತಿ ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಬಿಜೆಪಿ ಸೋತಿತ್ತು. ಇದು ಮುಂಬರುವ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂಬ ಮಾತುಗಳು ಕೇಳಿಬಂದಿದ್ದವು. 2022ರ ಆರಂಭದಲ್ಲಿ ಗೋವಾ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಚುನಾವಣೆ ಇರುವುದರಿಂದ ಈ ಸಣ್ಣ ಮಟ್ಟದ ಬೆಲೆ ಇಳಿಕೆ ಮಾಡಲಾಗಿದೆ ಎಂದು ಹಲವರು ದೂರಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...