Homeಅಂತರಾಷ್ಟ್ರೀಯಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

ಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ಸಾರಿಗೆ ಕ್ಷೇತ್ರ ಸ್ಥಗಿತಗೊಂಡಿದ್ದರಿಂದ ಇಳಿಕೆಯಾಗಿದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಇದೀಗ ಮತ್ತೆ ಹೆಚ್ಚುತ್ತಿದೆ. ಮತ್ತೆ ಹೆಚ್ಚುತ್ತಿರುವ ಇಂಗಾಲದ ಹೊರಸೂಸುವಿಕೆಯಲ್ಲಿ ಚೀನಾದ ಪಾತ್ರ ಹೆಚ್ಚಿದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವು ಹೇಳಿದೆ.

ಹವಾಮಾನ ಬದಲಾವಣೆಗೆ ಕಾರಣವಾಗುವ ಹೀಟ್‌-ಟ್ರ್ಯಾಪಿಂಗ್ ಅನಿಲಗಳನ್ನು ಪತ್ತೆಹಚ್ಚುವ ವಿಜ್ಞಾನಿಗಳ ಗುಂಪು ಅಧ್ಯಯನ ನಡೆಸಿದ್ದು, ಈ ವರ್ಷದ ಮೊದಲ ಒಂಬತ್ತು ತಿಂಗಳುಗಳಲ್ಲಿನ ಹೊರಸೂಸುವಿಕೆಯು 2019 ರ ಮಟ್ಟಕ್ಕಿಂತ ಸ್ವಲ್ಪ ಮಾತ್ರವೇ ಕಡಿಮೆ ಇದೆ ಎಂದು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಲಾಕ್‌ಡೌನ್‌ಗೂ ಮುಂಚಿತವಾಗಿ ಇದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯ ಪ್ರಮಾಣ 36.7 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ 2021 ರಲ್ಲಿ ಪ್ರಪಂಚವು 36.4 ಶತಕೋಟಿ ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಅನ್ನು ಹೊರಹಾಕಿದೆ ಎಂದು ಅವರು ಅಂದಾಜಿಸಿದ್ದಾರೆ.

ಕಳೆದ ವರ್ಷ ಕೊರೊನಾ ಅಲೆಯು ಉತ್ತುಂಗದಲ್ಲಿದ್ದಾಗ, ಹೊರಸೂಸುವಿಕೆಯು 34.8 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಕಡಿಮೆಯಾಗಿತ್ತು. ಆದರೆ, ಇದೀಗ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ನವೀಕರಿಸಿದ ಲೆಕ್ಕಾಚಾರಗಳ ಪ್ರಕಾರ ಈ ವರ್ಷ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಶೇ. 4.9% ಏರಿಕೆಯಾಗಿದೆ.

“ಹೆಚ್ಚಿನ ದೇಶಗಳು ಕೊರೊನಾ ವೈರಸ್‌ ಪತ್ತೆಯಾಗುವುದಕ್ಕೂ ಮೊದಲಿದ್ದ ಪ್ರವೃತ್ತಿಗೆ ಹಿಂತಿರುಗಿವೆ. ಆ ಎಲ್ಲಾ ದೇಶಗಳಲ್ಲಿಯೂ ಇಂಗಾಲ ಹೊರಸೂಸುವಿಕೆ ಮತ್ತೆ ಹೆಚ್ಚಾಗಿದೆ. ಈ ಪೈಕಿ, ಚೀನಾದಲ್ಲಿನ ಮಾಲಿನ್ಯ ಹೆಚ್ಚಳವು ವಿಶ್ವಾದ್ಯಂತ ಅಂಕಿಅಂಶಗಳು 2019 ರ ಮಾಲಿನ್ಯ ಮಟ್ಟಕ್ಕೆ ಹಿಂದಿರುಗಲು ಹೆಚ್ಚಿನ ಕಾರಣವಾಗಿದೆ” ಎಂದು ಯುನೈಟೆಡ್ ಕಿಂಗ್‌ಡಂನ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯದ ಹವಾಮಾನ ವಿಜ್ಞಾನಿ, ಅಧ್ಯಯನ ಸಹ-ಲೇಖಕ ಕೊರಿನ್ನೆ ಲೆಕ್ವೆರ್ ಹೇಳಿದ್ದಾರೆ.

ಭಾರತದಿಂದ ಇಟಲಿಯವರೆಗಿನ ನಗರಗಳಲ್ಲಿ 2020ರ ಅವಧಿಯಲ್ಲಿ ನಾಟಕೀಯವಾಗಿ ಇಂಗಾಲದ ಮಾಲಿನ್ಯವನ್ನು ಕಡಿಮೆಯಾಗುವುದರ ಜೊತೆಗೆ ಶುದ್ದ ಗಾಳಿ ಹೆಚ್ಚುವಂತೆ ಮಾಡುವಲ್ಲಿ ಜಗತ್ತು ಸರಿಯಾದ ಹಾದಿಯಲ್ಲಿದೆ ಎಂದು ಕೆಲವರು ಭಾವಿಸಿರಬಹುದು, ಆದರೆ ವಿಜ್ಞಾನಿಗಳು ಅದು ನಿಜವಲ್ಲ ಎಂದು ಹೇಳಿದ್ದಾರೆ.

“ಪ್ರಪಂಚವು ಜಾಗತಿಕ ತಾಪಮಾನ ಏರಿಕೆಯನ್ನು ಕೈಗಾರಿಕೆಗಳ ಉದಯಕ್ಕೂ ಮೊದಲಿದ್ದ 1.5 ಡಿಗ್ರಿ ಸೆಲ್ಸಿಯಸ್ (2.7 ಡಿಗ್ರಿ ಫ್ಯಾರನ್‌ಹೀಟ್) ಗೆ ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದರೆ, ಅದನ್ನು ತ್ವರಿತವಾಗಿ ಆರಂಭಿಸಬೇಕು. ಪ್ರಸ್ತುತ ಹೊರಸೂಸುವಿಕೆಯ ಮಟ್ಟವನ್ನು ಗಮನಿದರೆ ಕೇವಲ 11 ವರ್ಷಗಳು ಮಾತ್ರ ಉಳಿದಿವೆ” ಎಂದು ಅಧ್ಯಯನ ವರದಿ ಹೇಳಿದೆ.

1800ರ ದಶಕದ ಅಂತ್ಯದಿಂದ ಪ್ರಪಂಚವು 1.1 ಡಿಗ್ರಿ ಸೆಲ್ಸಿಯಸ್ (2 ಡಿಗ್ರಿ ಫ್ಯಾರನ್‌ಹೀಟ್) ಅನ್ನು ಹೊಂದಿತ್ತು.

“ಇಂಗಾಲದ ಹೊರಸೂಸುವಿಕೆ ಸಂಖ್ಯೆಗಳು ತೋರಿಸುವುದೇನೆಂದರೆ, ಹೊರಸೂಸುವಿಕೆಗಳು (COVID-19 ಸಮಯದಲ್ಲಿ) ಈಗ ಮೂಲತಃ ಸಮತಟ್ಟಾಗಿದೆ ಅಥವಾ ಕಡಿಮೆಯಾಗಿದೆ. ಅದು ಒಳ್ಳೆಯ ಸುದ್ದಿ. ಅದರೆ, ಕೆಟ್ಟ ಸುದ್ದಿ ಎಂದರೆ ಅದು ಸಾಕಾಗುವುದಿಲ್ಲ. ನಾವು ಹೊರಸೂಸುವಿಕೆಯನ್ನು ಇಳಿಸಲು ಪ್ರಾರಂಭಿಸಬೇಕು” ಎಂದು ವರದಿಯ ಭಾಗವಾಗದ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಹವಾಮಾನ ವಿಜ್ಞಾನಿ ಮೈಕೆಲ್ ಮನ್ ಹೇಳಿದ್ದಾರೆ.

2019 ಕ್ಕೆ ಹೋಲಿಸಿದರೆ 2021 ರಲ್ಲಿ ಚೀನಾದಲ್ಲಿ ಹೊರಸೂಸುವಿಕೆ 7% ಹೆಚ್ಚಾಗಿದೆ. ಅದೇ ರೀತಿ, ಭಾರತದ ಹೊರಸೂಸುವಿಕೆ 3% ಹೆಚ್ಚಾಗಿದೆ ಎಂದು ಅಧ್ಯಯನ ಹೇಳಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ಪ್ರಪಂಚದ ಉಳಿದ ಭಾಗಗಳು 2019ಕ್ಕೆ ಹೋಲಿಸಿದರೆ, ಈ ವರ್ಷ ಕಡಿಮೆ ಮಾಲಿನ್ಯವನ್ನು ಹೊಂದಿವೆ.

ಚೀನಾದ ಮಾಲಿನ್ಯ ಜಿಗಿತಕ್ಕೆ ಹೆಚ್ಚಾಗಿ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲವನ್ನು ಸುಡುವುದರಿಂದ ಮತ್ತು ಲಾಕ್‌ಡೌನ್‌ನಿಂದ ಚೇತರಿಸಿಕೊಳ್ಳಲು ಬೃಹತ್ ಆರ್ಥಿಕ ಪ್ರಚೋದನೆಯೇ ಕಾರಣವಾಗಿದೆ ಎಂದು ಲೆಕ್ವೆರ್ ಹೇಳಿದ್ದಾರೆ.

ಅಂಕಿಅಂಶಗಳು ವಿದ್ಯುತ್ ಬಳಕೆ, ಪ್ರಯಾಣ, ಕೈಗಾರಿಕಾ ಉತ್ಪಾದನೆ ಮತ್ತು ಇತರ ಅಂಶಗಳ ಮೇಲೆ ಸರ್ಕಾರಗಳ ಡೇಟಾವನ್ನು ಆಧರಿಸಿವೆ. ಈ ವರ್ಷ ಹೊರಸೂಸುವಿಕೆಯು ಪ್ರತಿ ಸೆಕೆಂಡಿಗೆ ಸರಾಸರಿ 115 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಗಾಳಿಯನ್ನು ಸೇರುತ್ತಿದೆ.

ಆಧಾರ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...