Homeಅಂತರಾಷ್ಟ್ರೀಯಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

ಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ಸಾರಿಗೆ ಕ್ಷೇತ್ರ ಸ್ಥಗಿತಗೊಂಡಿದ್ದರಿಂದ ಇಳಿಕೆಯಾಗಿದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಇದೀಗ ಮತ್ತೆ ಹೆಚ್ಚುತ್ತಿದೆ. ಮತ್ತೆ ಹೆಚ್ಚುತ್ತಿರುವ ಇಂಗಾಲದ ಹೊರಸೂಸುವಿಕೆಯಲ್ಲಿ ಚೀನಾದ ಪಾತ್ರ ಹೆಚ್ಚಿದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವು ಹೇಳಿದೆ.

ಹವಾಮಾನ ಬದಲಾವಣೆಗೆ ಕಾರಣವಾಗುವ ಹೀಟ್‌-ಟ್ರ್ಯಾಪಿಂಗ್ ಅನಿಲಗಳನ್ನು ಪತ್ತೆಹಚ್ಚುವ ವಿಜ್ಞಾನಿಗಳ ಗುಂಪು ಅಧ್ಯಯನ ನಡೆಸಿದ್ದು, ಈ ವರ್ಷದ ಮೊದಲ ಒಂಬತ್ತು ತಿಂಗಳುಗಳಲ್ಲಿನ ಹೊರಸೂಸುವಿಕೆಯು 2019 ರ ಮಟ್ಟಕ್ಕಿಂತ ಸ್ವಲ್ಪ ಮಾತ್ರವೇ ಕಡಿಮೆ ಇದೆ ಎಂದು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಲಾಕ್‌ಡೌನ್‌ಗೂ ಮುಂಚಿತವಾಗಿ ಇದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯ ಪ್ರಮಾಣ 36.7 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ 2021 ರಲ್ಲಿ ಪ್ರಪಂಚವು 36.4 ಶತಕೋಟಿ ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಅನ್ನು ಹೊರಹಾಕಿದೆ ಎಂದು ಅವರು ಅಂದಾಜಿಸಿದ್ದಾರೆ.

ಕಳೆದ ವರ್ಷ ಕೊರೊನಾ ಅಲೆಯು ಉತ್ತುಂಗದಲ್ಲಿದ್ದಾಗ, ಹೊರಸೂಸುವಿಕೆಯು 34.8 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಕಡಿಮೆಯಾಗಿತ್ತು. ಆದರೆ, ಇದೀಗ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ನವೀಕರಿಸಿದ ಲೆಕ್ಕಾಚಾರಗಳ ಪ್ರಕಾರ ಈ ವರ್ಷ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಶೇ. 4.9% ಏರಿಕೆಯಾಗಿದೆ.

“ಹೆಚ್ಚಿನ ದೇಶಗಳು ಕೊರೊನಾ ವೈರಸ್‌ ಪತ್ತೆಯಾಗುವುದಕ್ಕೂ ಮೊದಲಿದ್ದ ಪ್ರವೃತ್ತಿಗೆ ಹಿಂತಿರುಗಿವೆ. ಆ ಎಲ್ಲಾ ದೇಶಗಳಲ್ಲಿಯೂ ಇಂಗಾಲ ಹೊರಸೂಸುವಿಕೆ ಮತ್ತೆ ಹೆಚ್ಚಾಗಿದೆ. ಈ ಪೈಕಿ, ಚೀನಾದಲ್ಲಿನ ಮಾಲಿನ್ಯ ಹೆಚ್ಚಳವು ವಿಶ್ವಾದ್ಯಂತ ಅಂಕಿಅಂಶಗಳು 2019 ರ ಮಾಲಿನ್ಯ ಮಟ್ಟಕ್ಕೆ ಹಿಂದಿರುಗಲು ಹೆಚ್ಚಿನ ಕಾರಣವಾಗಿದೆ” ಎಂದು ಯುನೈಟೆಡ್ ಕಿಂಗ್‌ಡಂನ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯದ ಹವಾಮಾನ ವಿಜ್ಞಾನಿ, ಅಧ್ಯಯನ ಸಹ-ಲೇಖಕ ಕೊರಿನ್ನೆ ಲೆಕ್ವೆರ್ ಹೇಳಿದ್ದಾರೆ.

ಭಾರತದಿಂದ ಇಟಲಿಯವರೆಗಿನ ನಗರಗಳಲ್ಲಿ 2020ರ ಅವಧಿಯಲ್ಲಿ ನಾಟಕೀಯವಾಗಿ ಇಂಗಾಲದ ಮಾಲಿನ್ಯವನ್ನು ಕಡಿಮೆಯಾಗುವುದರ ಜೊತೆಗೆ ಶುದ್ದ ಗಾಳಿ ಹೆಚ್ಚುವಂತೆ ಮಾಡುವಲ್ಲಿ ಜಗತ್ತು ಸರಿಯಾದ ಹಾದಿಯಲ್ಲಿದೆ ಎಂದು ಕೆಲವರು ಭಾವಿಸಿರಬಹುದು, ಆದರೆ ವಿಜ್ಞಾನಿಗಳು ಅದು ನಿಜವಲ್ಲ ಎಂದು ಹೇಳಿದ್ದಾರೆ.

“ಪ್ರಪಂಚವು ಜಾಗತಿಕ ತಾಪಮಾನ ಏರಿಕೆಯನ್ನು ಕೈಗಾರಿಕೆಗಳ ಉದಯಕ್ಕೂ ಮೊದಲಿದ್ದ 1.5 ಡಿಗ್ರಿ ಸೆಲ್ಸಿಯಸ್ (2.7 ಡಿಗ್ರಿ ಫ್ಯಾರನ್‌ಹೀಟ್) ಗೆ ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದರೆ, ಅದನ್ನು ತ್ವರಿತವಾಗಿ ಆರಂಭಿಸಬೇಕು. ಪ್ರಸ್ತುತ ಹೊರಸೂಸುವಿಕೆಯ ಮಟ್ಟವನ್ನು ಗಮನಿದರೆ ಕೇವಲ 11 ವರ್ಷಗಳು ಮಾತ್ರ ಉಳಿದಿವೆ” ಎಂದು ಅಧ್ಯಯನ ವರದಿ ಹೇಳಿದೆ.

1800ರ ದಶಕದ ಅಂತ್ಯದಿಂದ ಪ್ರಪಂಚವು 1.1 ಡಿಗ್ರಿ ಸೆಲ್ಸಿಯಸ್ (2 ಡಿಗ್ರಿ ಫ್ಯಾರನ್‌ಹೀಟ್) ಅನ್ನು ಹೊಂದಿತ್ತು.

“ಇಂಗಾಲದ ಹೊರಸೂಸುವಿಕೆ ಸಂಖ್ಯೆಗಳು ತೋರಿಸುವುದೇನೆಂದರೆ, ಹೊರಸೂಸುವಿಕೆಗಳು (COVID-19 ಸಮಯದಲ್ಲಿ) ಈಗ ಮೂಲತಃ ಸಮತಟ್ಟಾಗಿದೆ ಅಥವಾ ಕಡಿಮೆಯಾಗಿದೆ. ಅದು ಒಳ್ಳೆಯ ಸುದ್ದಿ. ಅದರೆ, ಕೆಟ್ಟ ಸುದ್ದಿ ಎಂದರೆ ಅದು ಸಾಕಾಗುವುದಿಲ್ಲ. ನಾವು ಹೊರಸೂಸುವಿಕೆಯನ್ನು ಇಳಿಸಲು ಪ್ರಾರಂಭಿಸಬೇಕು” ಎಂದು ವರದಿಯ ಭಾಗವಾಗದ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಹವಾಮಾನ ವಿಜ್ಞಾನಿ ಮೈಕೆಲ್ ಮನ್ ಹೇಳಿದ್ದಾರೆ.

2019 ಕ್ಕೆ ಹೋಲಿಸಿದರೆ 2021 ರಲ್ಲಿ ಚೀನಾದಲ್ಲಿ ಹೊರಸೂಸುವಿಕೆ 7% ಹೆಚ್ಚಾಗಿದೆ. ಅದೇ ರೀತಿ, ಭಾರತದ ಹೊರಸೂಸುವಿಕೆ 3% ಹೆಚ್ಚಾಗಿದೆ ಎಂದು ಅಧ್ಯಯನ ಹೇಳಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ಪ್ರಪಂಚದ ಉಳಿದ ಭಾಗಗಳು 2019ಕ್ಕೆ ಹೋಲಿಸಿದರೆ, ಈ ವರ್ಷ ಕಡಿಮೆ ಮಾಲಿನ್ಯವನ್ನು ಹೊಂದಿವೆ.

ಚೀನಾದ ಮಾಲಿನ್ಯ ಜಿಗಿತಕ್ಕೆ ಹೆಚ್ಚಾಗಿ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲವನ್ನು ಸುಡುವುದರಿಂದ ಮತ್ತು ಲಾಕ್‌ಡೌನ್‌ನಿಂದ ಚೇತರಿಸಿಕೊಳ್ಳಲು ಬೃಹತ್ ಆರ್ಥಿಕ ಪ್ರಚೋದನೆಯೇ ಕಾರಣವಾಗಿದೆ ಎಂದು ಲೆಕ್ವೆರ್ ಹೇಳಿದ್ದಾರೆ.

ಅಂಕಿಅಂಶಗಳು ವಿದ್ಯುತ್ ಬಳಕೆ, ಪ್ರಯಾಣ, ಕೈಗಾರಿಕಾ ಉತ್ಪಾದನೆ ಮತ್ತು ಇತರ ಅಂಶಗಳ ಮೇಲೆ ಸರ್ಕಾರಗಳ ಡೇಟಾವನ್ನು ಆಧರಿಸಿವೆ. ಈ ವರ್ಷ ಹೊರಸೂಸುವಿಕೆಯು ಪ್ರತಿ ಸೆಕೆಂಡಿಗೆ ಸರಾಸರಿ 115 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಗಾಳಿಯನ್ನು ಸೇರುತ್ತಿದೆ.

ಆಧಾರ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...