Homeಮುಖಪುಟಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಹಲ್ಲೆಯನ್ನು ಖಂಡಿಸಿದ ಗಂಭೀರ್ ವಿರುದ್ಧ ಗಂಭೀರ ಟ್ರೋಲ್ ದಾಳಿ

ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಗುರುಗ್ರಾಮದ ಹಲ್ಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದ ಗೌತಮ್ ಗಂಭೀರ್ ವಿರುದ್ಧ ಬಿಜೆಪಿ ಹಿಂಬಾಲಕರು ಟ್ವಿಟ್ಟರ್‍ನಲ್ಲಿ ಆಕ್ರೋಶದಿಂದ ಟ್ರೋಲ್ ಮಾಡಲು ಆರಂಭಿಸಿದ್ದಾರೆ. ನೀನೊಂದು ದೊಡ್ಡ ವಿಪತ್ತು ಆಗುವ ನಿಟ್ಟಿನಲ್ಲಿದ್ದೀಯ, ಬಾಯಿ ಮುಚ್ಚಿಕೊಂಡಿರು. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದಾಗ ಏಕೆ ಟ್ವೀಟ್ ಮಾಡಿಲ್ಲ ಎಂದು ಜಸುಮತಿ ಪಟೇಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿಯವರು ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹೇಳಿಕೆ ನೀಡಿದ್ದು ಮುಸ್ಲಿಮರ ತುಷ್ಟೀಕರಣ ಮಾಡಲು ಅಲ್ಲ. ನಾನ್‍ಸೆನ್ಸ್ ಹೇಳಿಕೆಗಳನ್ನು ಕೊಡುವ ಮುನ್ನ ಸಂದರ್ಭವನ್ನು ಸರಿಯಾಗಿ ಅರಿತುಕೋ ಎಂದು ಲಿಲ್ಲಿ ಎಂಬುವವರು ಟ್ವೀಟ್ ಮಾಡಿದ್ದಾರೆ.

ಅಮೇಥಿಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾದಾಗ ನೀನು ಟ್ವೀಟ್ ಮಾಡಲಿಲ್ಲ, ಈ ಪ್ರಕರಣದಲ್ಲಿ ಮಾತ್ರ ಶೀಘ್ರವೇ ಟ್ವೀಟ್ ಮಾಡುತ್ತೀರಿ. ನಿಮ್ಮ ಹತ್ತಿರದ ಜಿಹಾದಿ ಜಾವೇದ್ ಅಕ್ತರ್ ಅನ್ನು ಕೇಳಿದ್ದೀರಾ? ಇದರಿಂದ ಸಾಮಾಜಿಕ ಜಾಲಾತಾಣದಲ್ಲಿ ನರೇಂದ್ರ ಮೋದಿಯವರಿಗಿರುವ ಬೆಂಬಲವನ್ನು ಏಕೆ ಹಾಳು ಮಾಡುತ್ತೀರಿ? ಎಂದು ರಿತುರವರು ಹೇಳಿದ್ದಾರೆ.

ಡಾ. ವೀರೇಂದ್ರ ಎಂಬುವವರು, ನೀನೊಂದು ದೊಡ್ಡ ನಿರಾಶೆ. ಪಕ್ಷದ ಸಿದ್ಧಾಂತದ ಬಗ್ಗೆ ಯಾವುದೇ ಜ್ಞಾನವಿಲ್ಲದ ಸೆಲೆಬ್ರೆಟಿಗಳಿಗೆ ಮಣೆಹಾಕುವ ಮೊದಲು ಬಿಜೆಪಿ 10 ಸಾರಿ ಯೋಚಿಸಬೇಕು ಎಂದು ಮನೋಜ್ ತಿವಾರಿಯವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:

ಹರ್ಯಾಣದ ಗುರುಗ್ರಾಮದಲ್ಲಿ ಮೂರು ದಿನಗಳ ಕೆಳಗೆ ಮುಸ್ಲಿಮ್ ಯುವಕನಿಗೆ ಆತ ಮುಸ್ಲಿಂ ಎಂಬ ಕಾರಣಕ್ಕೆ, ಟೋಪಿ ತೆಗಿ ಎಂದೂ, ಜೈ ಶ್ರೀರಾಮ್ ಎಂದು ಕೂಗು ಎಂದು ಪೀಡಿಸಿದ್ದಲ್ಲದೇ ಪುಂಡ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ದೇಶದಲ್ಲಿ ಬಿಜೆಪಿ ಮತ್ತೆ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ಈ ರೀತಿಯ ಗುಂಪು ಹಲ್ಲೆ ಘಟನೆ ನಡೆದಿದ್ದು, ಬಹಳಷ್ಟು ಜನ ಕಳವಳ ವ್ಯಕ್ತಪಡಿಸಿ ಘಟನೆಯನ್ನು ಖಂಡಿಸಿದ್ದರು.

ಗಂಭೀರ್ ಹೇಳಿದ್ದೇನು?

ಬಿಜೆಪಿಯಿಂದ ಪೂರ್ವದೆಹಲಿಯಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಗೌತಮ್ ಗಂಭೀರ್ ಈ ಘಟನೆಯನ್ನು ಕಟುವಾಗಿ ಟೀಕಿಸಿದ್ದರು. ಇವರು ಟ್ವಿಟ್ಟರ್‍ನಲ್ಲಿ “ಗುರುಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿಯ ಟೋಪಿ ತೆಗಿಸಿ, ಜೈ ಶ್ರೀರಾಂ ಎಂದು ಬಲವಂತವಾಗಿ ಹೇಳಿಸಿರುವುದು ಹೇಯ ಕೃತ್ಯ. ಗುರುಗ್ರಾಮದ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮದು ಜಾತ್ಯಾತೀತ ದೇಶ. ಇಲ್ಲಿ ಜಾವೇದ್ ಅಕ್ತರ್ ‘ಓ ಪಾಲನ್ ಆರೆ, ನಿರ್ಗುಣ್ ಔರ್ ನ್ಯಾರೇ’ ಎಂಬ ಪ್ರಾರ್ಥನೆ ಬರೆದರೆ, ರಾಕೇಸ್ ಓಂ ಪ್ರಕಾಶ್ ಮೆಹ್ತಾ ಡೆಲ್ಲಿ 6 ಎಂಬ ಚಿತ್ರದಲ್ಲಿ ‘ಅಜಿರ್ಃಯಾ’ ಹಾಡು ಕೊಟ್ಟಂತಹ ದೇಶವಿದು” ಎಂದು ಬರೆದಿದ್ದರು.

ಅಷ್ಟು ಮಾತ್ರವಲ್ಲದೇ ಮತ್ತೊಂದು ಟ್ವೀಟ್‍ನಲ್ಲಿ ಗಂಭೀರ್ “ಗುರುಗ್ರಾಮದ ಘಟನೆಗೆ ಸೀಮಿತವಾಗಿ ನಾನಿದನ್ನು ಹೇಳುತ್ತಿಲ್ಲ, ನನ್ನ ಜಾತ್ಯಾತೀತತೆಯು ಮಾನ್ಯ ಪ್ರಧಾನಿ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬುದರ ತಿರುಳಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ದಬ್ಬಾಳಿಕೆ ನಡೆಸುವುದು ಖಂಡನೀಯ. ಸಹಿಷ್ಣುತೆ ಮತ್ತು ಎಲ್ಲರನ್ನು ಒಳಗೊಂಡ ಅಭಿವೃದ್ದಿಯ ಆಧಾರದಲ್ಲಿ ಭಾರತದ ಮೌಲ್ಯ ನಿಂತಿದೆ” ಎಂದು ಸಹ ತಿಳಿಸಿದ್ದರು.

ಇವರೆಡೂ ಟ್ವೀಟ್‍ಗಳಿಗಾಗಿ ನಿಜಕ್ಕೂ ಗೌತಮ್ ಗಂಭೀರ್‍ರವರನ್ನು ಅಭಿನಂದಿಸಬೇಕು. ಇಂದಿನ ಭಾರತಕ್ಕೆ ಈ ಆಶಯ ತುಂಬಾ ಒಳ್ಳೆಯದು. ಆದರೆ ಗೌತಮ್ ಮಾತ್ರವಲ್ಲ ನಮ್ಮ ದೇಶದ ಪ್ರಧಾನಿಯೇ ಸಂದರ್ಭಕ್ಕೆ ತಕ್ಕಂತ ಹೇಳಿಕೆ ಕೊಡುವುದರಲ್ಲಿ ನಿಸ್ಸೀಮರು. ಈ ಹಿಂದೆ ಗಂಭೀರ್ ಪಾಕಿಸ್ತಾನದ ವಿರುದ್ಧವಾಗಿ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿದ್ದರು ಮಾತ್ರವಲ್ಲ, ದೇಶಭಕ್ತಿ, ಸೇನೆ ಮುಂತಾದವರು ಸುತ್ತಲೇ ಸುತ್ತುತ್ತಿದ್ದರು. ಪಾಕಿಸ್ತಾನದೊಂದಿಗೆ ಭಾರತ ಕಿಕೆಟ್ ಆಡಬಾರದೆಂದು ಸಹ ಹೇಳಿದ್ದರು. 2002ರಲ್ಲಿ ಗುಜರಾತ್‍ನಲ್ಲಿ ಮುಸ್ಲಿಂರ ಮಾರಣಹೋಮಕ್ಕೆ ಕಾರಣದಾಗ ಮೋದಿ ಇಂದು ಅಲ್ಪಸಂಖ್ಯಾತರನ್ನು ನಾವು ಜೊತೆಯಲ್ಲಿ ಕರೆದೊಯ್ಯಬೇಕೆಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಗಂಭೀರ್ ಟ್ವೀಟ್‍ಗಳಿಗೆ ಸ್ವತಃ ಬಿಜೆಪಿಯೇ ಭಯಬಿದ್ದಿದೆ. ನಮ್ಮ ಪಕ್ಷದ ವಿರುದ್ಧವೇ ಮಾತಾಡುವಷ್ಟು ಧೈರ್ಯವೇ ಈತನಿಗೆ ಎಂದು ಕ್ರೋಧಗೊಂಡಿದೆ. ತಾನೀಗ ಕ್ರಿಕೆಟರ್ ಅಲ್ಲ ಎಂಬುದನ್ನು ಗಂಭೀರ್ ನೆನಪಿಡಬೇಕು, ಆತನಾಡುವ ಮಾತುಗಳು ಬಿಜೆಪಿ ಪಕ್ಷಕ್ಕೆ ವಿರುದ್ಧವಾಗಿರುತ್ತವೆ ಮಾತ್ರವಲ್ಲ ವಿಪಕ್ಷಗಳು ನಮ್ಮ ಮೇಲೆ ಮುಗಿಬೀಳಲು ಆಧಾರವಾಗುತ್ತವೆ ಎಂದು ದೆಹಲಿಯ ಹಿರಿಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳಾದಾಗ ಮಾತಾಡದೇ ಈಗ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆದಾಗ, ಅದರಲ್ಲೂ ಬಿಜೆಪಿ ಕಾರ್ಯಕರ್ತರೆ ಹಲ್ಲೆ ಮಾಡಿದ್ದಾರೆ ಎಂಬ ಅನುಮಾನಗಳಿದ್ದಾಗ ಗಂಭೀರ್ ಹೀಗೆ ಮಾತಾಡುವುದು ಪಕ್ಷಕ್ಕೆ ವಿರುದ್ಧ ಎಂದು ಬಿಜೆಪಿ ಮುಖಂಡರು ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಂದರೆ ತಪ್ಪನ್ನು ಬಿಜೆಪಿಯವರು ಮಾಡಿದರೆ ಸರಿ, ಬೇರೆ ಪಕ್ಷದವರು ಮಾಡಿದರೆ ತಪ್ಪು ಎನ್ನುವ ಸರ್ವಾಧಿಕಾರಿ ಧೋರಣೆಯಲ್ಲಿ ಬಿಜೆಪಿಯವರು ಮಾತಾಡುತ್ತಿರುವುದು ಈ ದೇಶ ಎತ್ತ ಸಾಗುತ್ತಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ.

ಸರೋವರ್ ಬೆಂಕಿಕೆರೆ

‘ಇನ್ನು ಟ್ವಿಟ್ಟರ್‍ನಲ್ಲಿನ ವಿಷಕಾರಿ ಹೇಳಿಕೆಗಳನ್ನು ಗಮನಿಸಿದರೆ ಈ ದೇಶದ ಹಲವಾರು ಜನ ಅಲ್ಪಸಂಖ್ಯಾತರು, ದಲಿತರ ಮೇಲೆ ಕೆಟ್ಟ ಅಭಿಪ್ರಾಯ ಹೊಂದಿದ್ದಾರೆ. ಹೊಡಿ ಬಡಿ ರೀತಿಯಲ್ಲಿಯೇ ಮಾತನಾಡಿ ಮುಸ್ಲಿಂರ ಮೇಲಿನ ಹಲ್ಲೆಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಗಂಭೀರ್ ಥರದ ನಾಯಕರೆ ಅದನ್ನು ನಿಲ್ಲಿಸಿ ಎಂದರೂ ಕೇಳದೇ ಅವರನ್ನೇ ತರಾಟೆಗೆ ತೆಗೆದುಕೊಳ್ಳುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಅಂದರೆ ಉನ್ಮಾದದ ಮನಸ್ಥಿತಿ ತಲುಪಿರುವ ಇವರು ಮುಂದೆ ಯಾವ ನಾಯಕರ ಮಾತನ್ನು ಕೇಳದೇ ದೇಶದಲ್ಲಿ ದೊಂಬಿ, ಗದ್ದಲ, ಅರಾಜಕತೆ ಉಂಟು ಮಾಡುವುದರಲ್ಲಿ ಸಂದೇಹವಿಲ್ಲ. ಅದನ್ನು ತಡೆದು ಪ್ರೀತಿ-ವಿಶ್ವಾಸದ, ಶಾಂತಿಯ ನಾಡನ್ನಾಗಿ ಪರಿವರ್ತಿಸಬೇಕಾದ ಜವಾಬ್ದಾರಿ ಪ್ರಜ್ಞಾವಂತರ ಮೇಲಿದೆ.’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಸರೋವರ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಡಿ ಬಡಿ ಯಲ್ಲಿ ವಿಶ್ವಾಸ ಇದ್ದವರಿಗೆ ಅದೇ ರೀತಿ ಉತ್ತರ ಕೊಟ್ಟರೆ ಸರಿಯಾಗುತ್ತಾರೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...