Homeಚಳವಳಿತ್ರಿಪುರಾ ಹಿಂಸಾಚಾರದ ಸತ್ಯಶೋಧನೆ ನಡೆಸಿದ ವಕೀಲರ ಮೇಲೆ ಯುಎಪಿಎ ಪ್ರಕರಣ!

ತ್ರಿಪುರಾ ಹಿಂಸಾಚಾರದ ಸತ್ಯಶೋಧನೆ ನಡೆಸಿದ ವಕೀಲರ ಮೇಲೆ ಯುಎಪಿಎ ಪ್ರಕರಣ!

ಕೂಡಲೇ ಯುಎಪಿಎ ಪ್ರಕರಣ ಕೈಬಿಡುವಂತೆ ಆಗ್ರಹಿಸಿ ನವೆಂಬರ್ 05 ರಂದು ತ್ರಿಪುರ ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.

- Advertisement -
- Advertisement -

ತ್ರಿಪುರಾದಲ್ಲಿ ನಡೆದ ಕೋಮುಗಲಭೆ ಕುರಿತು ಸತ್ಯಶೋಧನೆ ನಡೆಸಿದ ತಂಡದ ಭಾಗವಾಗಿದ್ದ ಇಬ್ಬರು ವಕೀಲರ ಮೇಲೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಲೀಫ್‌ಲೆಟ್‌ ವರದಿ ಮಾಡಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಅಡ್ವೊಕೇಟ್‌ ಅನ್ಸರ್‌ ಇಂದೋರಿ ಮತ್ತು ನಾಗರೀಕ ಹಕ್ಕುಗಳ ಸಂಘಟನೆಯಾದ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟಿಸ್‌ (ಪಿಯುಸಿಎಲ್‌, ದೆಹಲಿ)ನ ವಕೀಲರಾದ ಮುಖೇಶ್‌ ಅವರಿಗೆ ತ್ರಿಪುರಾ ಪೊಲೀಸರು ನೋಟಿಸ್‌ ಕಳುಹಿಸಿದ್ದಾರೆ. ಆ ನೋಟಿಸ್‌ನಲ್ಲಿ‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಕಲ್ಪಿತ ಮತ್ತು ಸುಳ್ಳು ಹೇಳಿಕೆಗಳು/ ಕಾಮೆಂಟ್‌ಗಳನ್ನು ತಕ್ಷಣವೇ ಅಳಿಸುವಂತೆ’ ಹೇಳಿದ್ದು, ನವೆಂಬರ್‌ 10ರೊಳಗೆ ಪಶ್ಚಿಮ ಅಗರ್ತಲಾ ಪೊಲೀಸ್‌ ಠಾಣೆಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ಗಳು ತಿಳಿಸಿವೆ.

ಯುಎಪಿಎ ಹೊರತಾಗಿ, ಸೆಕ್ಷನ್‌ 153 ಎ ಮತ್ತು ಬಿ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 469 (ಮಾಹಿತಿಗೆ ಹಾನಿ ಮಾಡುವ ಉದ್ದೇಶಕ್ಕಾಗಿ ನಕಲು ಮಾಡುವುದು), 120 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಹಾಗೂ ಐಪಿಸಿಯ 120 ಬಿ (ಕ್ರಿಮಿನಲ್‌ ಪಿತೂರಿಗಾಗಿ ಶಿಕ್ಷೆ) ಇವೆಲ್ಲದರಡಿಯಲ್ಲಿ ನೋಟಿಸ್‌ ನೀಡಲಾಗಿದೆ.

ಈ ಕುರಿತು ಮಾತನಾಡಿದ ವಕೀಲರಾದ ಮುಖೇಶ್‌, ‘ವಾಸ್ತವತೆಯನ್ನು ತಿಳಿಯಲು ತ್ರಿಪುರಾಕ್ಕೆ ಹೋದ ಸತ್ಯಶೋಧನಾ ತಂಡದ  ಭಾಗವಾಗಿದ್ದೇನೆ. ಸಾಮಾಜಿಕವಾಗಿ ನಾನು ನೋಡಿದ್ದನ್ನು ಹಂಚಿಕೊಂಡಿದ್ದೇನೆ’ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ವಕೀಲ ಎಹ್ತೇಶಾಮ್ ಹಶ್ಮಿ, ವಕೀಲ ಅಮಿತ್ ಶ್ರೀವಾಸ್ತವ್ (ಸಮನ್ವಯ ಸಮಿತಿ, ಪ್ರಜಾಪ್ರಭುತ್ವಕ್ಕಾಗಿ ವಕೀಲರು), ವಕೀಲ ಅನ್ಸಾರ್ ಇಂದೋರಿ ಮತ್ತು ವಕೀಲ ಮುಖೇಶ್ ಅವರನ್ನು ಒಳಗೊಂಡ ಸತ್ಯಶೋಧನಾ ತಂಡವು ಮಂಗಳವಾರ ದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ವರದಿ ಏನು ಹೇಳುತ್ತದೆ?

‘ಹ್ಯುಮ್ಯಾನಿಟಿ ಅಂಡರ್‌ ಅಟ್ಯಾಕ್‌ ಇನ್ ತ್ರಿಪುರ; #ಮುಸ್ಲಿಂ ಲೀವ್ಸ್‌ ಮ್ಯಾಟರ್‌’ ಶೀರ್ಷಿಕೆಯಡಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ತ್ರಿಪುರಾದಲ್ಲಿನ ಬಿಜೆಪಿ ಸರ್ಕಾರವು ಹಿಂಸಾಚಾರವನ್ನು ನಿಲ್ಲಿಸಬಹುದಿತ್ತು ಆದರೆ ಅವರು ರಾಜ್ಯದಲ್ಲಿ ಗಲಭೆ ನಡೆಸಲು ಹಿಂದುತ್ವದ ಗುಂಪುಗಳಿಗೆ ಮುಕ್ತ ಅವಕಾಶ ನೀಡುವ ದಾರಿಯನ್ನು ಆರಿಸಿಕೊಂಡರು ಎಂಬುದನ್ನು ತಿಳಿಸಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಬಜರಂಗದಳ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಂತಹ ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಗಳು ಜೆಸಿಬಿಗಳೊಂದಿಗೆ ರ್‍ಯಾಲಿಗಳನ್ನು ನಡೆಸಿವೆ ಮತ್ತು ಹಿಂಸೆಗೆ ಪ್ರಚೋದನೆ ನೀಡಿವೆ ಎಂದು ವರದಿಯಲ್ಲಿದೆ.

ಪ್ರತಿಭಟನೆಗೆ ಕರೆ

ವಕೀಲರ ಮೇಲೆ ಯುಎಪಿಎ ಅಡಿ ಪ್ರಕರಣ ದಾಖಲಾಗಿರುವುದು ತಿಳಿಯುತ್ತಿದ್ದಂತೆ ಸಾಮಾಜಿಕ ಕಾರ್ಯಕರ್ತರು ತ್ರಿಪುರ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಕೂಡಲೇ ಯುಎಪಿಎ ಪ್ರಕರಣ ಕೈಬಿಡುವಂತೆ ಆಗ್ರಹಿಸಿ ನವೆಂಬರ್ 05 ರಂದು ತ್ರಿಪುರ ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.


ಇದನ್ನು ಓದಿ: ಕಾರ್ಯಕರ್ತನ ಪತ್ನಿಯನ್ನೇ ಅಪಹರಿಸಿದ ಬಜರಂಗದಳ ಸಂಚಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...