Homeಮುಖಪುಟಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

- Advertisement -
- Advertisement -

ನವೆಂಬರ್ 2 ರಂದು ಅಮೆಜಾನ್ ಪ್ರೈಮ್‌ ವೀಡಿಯೋದಲ್ಲಿ ಬಿಡುಗಡೆಯಾದ ತಮಿಳು ಸೂಪರ್‌ ಸ್ಟಾರ್‌ ಸೂರಿಯಾ ನಟಿಸಿರುವ ಚಿತ್ರ ‘ಜೈ ಭೀಮ್’ ದೇಶಾದ್ಯಂತ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ನಡುವೆ, ತಮಿಳುನಾಡು ಬಿಜೆಪಿ ನಾಯಕ ಎಚ್. ರಾಜಾ ಟ್ವಿಟರ್‌ನಲ್ಲಿ ಸೂರಿಯಾ ಅವರನ್ನು ಟೀಕಿಸಿದ್ದು, ಅವರನ್ನು “ಸ್ವಾರ್ಥಿ” ಎಂದು ಕರೆದಿದ್ದಾರೆ.

‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ವಿರೋಧಿಸಿ ಕಾನೂನಾತ್ಮಕವಾಗಿ ನಡೆದ ಹೋರಾಟದ ಎಳೆಯನ್ನು ಇಟ್ಟುಕೊಂಡು ಟಿ. ಜೆ. ಜ್ಞಾನವೇಳ್‌ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಮದ್ರಾಸ್‌ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಕೆ. ಚಂದ್ರು ಅವರು ವಕೀಲನಾಗಿ ಕಮ್ಯುನಿಷ್ಟ್‌ ಚಳುವಳಿಯನ್ನು ಮುನ್ನಡೆಸುತ್ತಿದ್ದಾಗ ನಡೆಸಿದ ‘ಒಂದು’ ಹೋರಾಟದ ನೈಜ ಕತೆಯಾಗಿದೆ ಈ ಸಿನಿಮಾ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ಸಾಮಾಜಿಕ ಜಾಲತಾಣಗಳಲ್ಲೂ ಈ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಬಿಜೆಪಿ ನಾಯಕ ಎಚ್‌. ರಾಜಾ ಸಿನಿಮಾ ಬಗ್ಗೆ ತಕರಾರು ತೆಗೆದಿದ್ದಾರೆ. ಟ್ವಟರ್‌ನಲ್ಲಿ ಅವರು, “ನಮ್ಮ ಮಕ್ಕಳು 3 ಭಾಷೆಗಳನ್ನು ಓದಬಾರದು ಎಂದು ಹೇಳುವವರು, ತನ್ನ ಚಿತ್ರವನ್ನು 5 ಭಾಷೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ವಾರ್ಥವನ್ನು ಅರ್ಥಮಾಡಿಕೊಳ್ಳೋಣ” ಎಂದು ಬರೆದಿದ್ದಾರೆ.

2019 ರಲ್ಲಿ, ನರೇಂದ್ರ ಮೋದಿ ಸರ್ಕಾರದ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ನಟ ಸೂರಿಯಾ ಟೀಕಿಸಿದ್ದರು. ಅದರಲ್ಲಿನ ಕೆಲವು ನಿಬಂಧನೆಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನಾನುಕೂಲತೆ ಉಂಟು ಮಾಡುತ್ತವೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಸೂರಿಯಾ ಅಂದು, “NEP ಯ ಗಮನವು ಕೇವಲ ಪ್ರವೇಶ ಪರೀಕ್ಷೆಗಳನ್ನು ನಡೆಸುವುದರ ಬಗ್ಗೆ ಮಾತ್ರವಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಸಮಾನ ಶಿಕ್ಷಣವನ್ನು ನೀಡುವಲ್ಲಿ ಇದರ ಗಮನ ಇಲ್ಲ. ಹಾಗಾಗಿಯೆ ಎಲ್ಲರೂ ಕೋಪಗೊಂಡಿದ್ದಾರೆ, ದುಃಖಿತರಾಗಿದ್ದಾರೆ ಮತ್ತು ಭಯಪಡುತ್ತಾರೆ. ಇದು ದೇಶದ 30 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ಅವರು ತರಗತಿಗಳಿಗೆ ಹಾಜರಾಗುವುದು ಹೇಗೆ? ನನ್ನ ಮಕ್ಕಳಿಗೆ ತೃತೀಯ ಭಾಷೆಯನ್ನು ಕಲಿಸುವುದು ನನಗೆ ಸವಾಲಾಗಿದೆ” ಎಂದು ಹೇಳಿದ್ದರು.

ತಮ್ಮ ಸಿನಿಮಾ ಕುರಿತು ಬಿಜೆಪಿ ನಾಯಕನ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಸೂರಿಯಾ ತಕ್ಕ ಉತ್ತರ ಕೊಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದರು. ಆದರೆ ಸೂರಿಯಾ ಮಾತ್ರ ಯಾವುದೆ ಪ್ರತಿಕ್ರಿಯೆ ನೀಡದೆ, ಅವರ ಟ್ವೀಟ್‌ ಅನ್ನು ‘ಲೈಕ್’ ಮಾಡಿ ಸುಮ್ಮನಾಗಿದ್ದಾರೆ.

ನಟನ ಈ ಪ್ರಬುದ್ಧ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಹಲವಾರು ಜನರು ಅವರನ್ನು ಬೆಂಬಲಿಸಿ ಕಾಮೆಂಟ್ ಮಾಡಿದ್ದಾರೆ. ಸೂರಿಯಾ ಅವರು ಎಚ್. ರಾಜಾ ಅವರ ಟ್ವೀಟ್ ಅನ್ನು ಲೈಕ್‌ ಮಾಡಿ ಟ್ರೋಲ್ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಟ್ವಿಟರ್‌ನಲ್ಲಿನ ಕೆಲವು ಪ್ರತಿಕ್ರಿಯೆಗಳು ಇಲ್ಲಿವೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ಟಿಜೆ ಜ್ಞಾನವೇಲ್ ಚಿತ್ರವನ್ನು ಬರೆದು ನಿರ್ದೇಶಿಸಿದರೆ, ಸೂರ್ಯ ಮತ್ತು ಜ್ಯೋತಿಕಾ ತಮ್ಮ ಬ್ಯಾನರ್ 2D ಎಂಟರ್ಟೈನ್ಮೆಂಟ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಡುವ ವಕೀಲನ ಪಾತ್ರದಲ್ಲಿ ಸೂರಿಯಾ ಅವರನ್ನು ಚಿತ್ರಿಸಲಾಗಿದ್ದು. ಚಿತ್ರದಲ್ಲಿ ರಜಿಶಾ ವಿಜಯನ್, ಪ್ರಕಾಶ್ ರಾಜ್, ಲಿಜೋ ಮೋಲ್ ಜೋಸ್, ಕೆ ಮಣಿಕಂದನ್ ಕೂಡ ನಟಿಸಿದ್ದಾರೆ. ಸೀನ್ ರೋಲ್ಡನ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಇಡೀ ಆಡಳಿತ ಯಂತ್ರವನ್ನು ಎದುರು ಹಾಕಿ ಧ್ವನಿಯಿಲ್ಲದ ಸಮುದಾಯದ ಬೆನ್ನಿಗೆ ನಿಲ್ಲುವುದು, ಅವರಿಗೆ ನ್ಯಾಯ ಕೊಡಿಸುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಇದಲ್ಲದೆ, ಆದಿವಾಸಿ ಜನರಿಗೆ ಈ ವ್ಯವಸ್ಥೆ ನೀಡುವ ಕಿರುಕುಳ, ಅವರ ಸಂಕಷ್ಟವನ್ನೂ ಈ ಚಿತ್ರದಲ್ಲಿ ಮನಸಿಗೆ ಇಳಿಯುವಂತೆ ಮತ್ತು ಶೋಷಕರಿಗೆ ಇರಿಯುವಂತೆ ಕಟ್ಟಿಕೊಡಲಾಗಿದೆ.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನು ನೋಡಿದ, ನೈಜ ಘಟನೆಗಳನ್ನು ಆಧರಿಸಿದ ಅತ್ಯುತ್ತಮ ಸಿನಿಮಾ.! ಆ ಬಗ್ಗೆ, ರಾಜಾ ಅವರ ತಕರಾರನ್ನು ಬದಿಗಿಡಿ. ಸುರಿಯಾ ಅವರ ಪ್ರತಿಕ್ರಿಯೆ ಪ್ರಬುದ್ಧವಾದುದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...