Homeಮುಖಪುಟದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ದೇವಸ್ಥಾನದಲ್ಲಿ ಆದಿವಾಸಿ ಮಹಿಳೆಗೆ ಊಟ ನಿರಾಕರಣೆ: ಆಕೆಯ ಮನೆಗೇ ಭೇಟಿ ನೀಡಿದ ತಮಿಳುನಾಡು ಸಿಎಂ

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

- Advertisement -
- Advertisement -

ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ಇತ್ತೀಚೆಗೆ ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಗುರುವಾರದಂದು ಭೇಟಿ ಮಾಡಿದ್ದಾರೆ. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದರು.

ನರಿಕುರವರ್ ಮತ್ತು ಇರುಳರ್‌ ಸಮುದಾಯ ವಾಸಿಸುವ ಮಾಮಲ್ಲಪುರಂ ಬಳಿಯ ಪೂಂಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್‌ 81 ಜನರಿಗೆ ವಸತಿ ಹಕ್ಕುಪತ್ರ ವಿತರಿಸಿದ್ದಾರೆ. 10 ಲಕ್ಷ ವೆಚ್ಚದ ಅಂಗನವಾಡಿ ಮತ್ತು ಪಂಚಾಯತ್ ಯೂನಿಯನ್ ಶಾಲೆಗಳನ್ನು ನಿರ್ಮಿಸಲು ಮತ್ತು ಇತರ ಅಭಿವೃದ್ಧಿ ಕಾರ್ಯಕ್ರಮಗಳ ಆದೇಶಗಳನ್ನು ಸಹ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಮಾಡಿದ್ದಾರೆ.

ಇದನ್ನೂ ಓದಿ: ಅಲೆಮಾರಿ ಮಹಿಳೆಗೆ ಆಹಾರ ನಿರಾಕರಣೆ: ಅದೇ ದೇವಾಲಯದಲ್ಲಿ ಮಹಿಳೆಯೊಂದಿಗೆ ಊಟ ಮಾಡಿದ ತಮಿಳುನಾಡು ಸಚಿವ

ಈ ವೇಳೆ ಮಾತನಾಡಿದ ಅಶ್ವಿನಿ ಅವರು, “ಮುಖ್ಯಮಂತ್ರಿಗಳಿಗೆ ಧನ್ಯವಾದಗಳು, ನಾವು ಈಗ ಮತದಾರರ ಗುರುತಿನ ಚೀಟಿ, ಆಧಾರ್ ಮತ್ತು ಕುಟುಂಬ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದೇವೆ. ಇದು ಕನಸಿನಂತೆ ಭಾಸವಾಗುತ್ತಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಪಡಿತರ ಚೀಟಿ ಪಡೆಯಲು ನಾಲ್ಕು ತಿಂಗಳು ಹರಸಾಹಸ ಪಡಬೇಕಾದ ನಮಗೆ ನೇರವಾಗಿ ಅವರಿಂದಲೇ ಎರಡೇ ದಿನದಲ್ಲಿ ಕಾರ್ಡ್ ಸಿಕ್ಕಿದೆ. ನಾನು ಸಚಿವ ಶೇಖರ್ ಬಾಬು ಅವರನ್ನು ಭೇಟಿಯಾದಾಗ, ನಮ್ಮನ್ನು ಇಲ್ಲಿಂದ ಹೊರಹಾಕುತ್ತಾರೋ ಎಂಬ ಭಯದಲ್ಲಿ ಇಲ್ಲಿ ಪ್ರತಿದಿನ ನಾವು ವಾಸಿಸುತ್ತಿದ್ದೇವೆ ಎಂದು ಹೇಳಿದ್ದೆ. ಈಗ ನಮ್ಮಲ್ಲಿ ಪತ್ರಗಳಿವೆ, ನಮಗೆ ಆ ಭಯವಿಲ್ಲ” ಎಂದು ಹೇಳಿದ್ದಾರೆ.

ಚೆಂಗಲ್‌ಪೇಟ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿಗಳು ನರಿಕುರವರ್ ಮತ್ತು ಇರುಳ ಬುಡಕಟ್ಟು ಜನಾಂಗದ 282 ಜನರಿಗೆ 4.53 ಕೋಟಿ ರೂಪಾಯಿಗಳ ಸರ್ಕಾರದ ಕಲ್ಯಾಣ ಯೋಜನೆಯನ್ನು ಘೋಷಿಸಿದ್ದಾರೆ. ಜೊತೆಗೆ ಪುರಸಭೆಯ ಸಾರ್ವಜನಿಕ ನಿಧಿ ಯೋಜನೆಯಡಿ 10 ಲಕ್ಷ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಆದೇಶಿಸಿದರು.

ಇದನ್ನೂ ಓದಿ: ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದ ಮಹಿಳೆ ಅದೇ ಪಾಲಿಕೆಯಲ್ಲಿ ಕೀಟಶಾಸ್ತ್ರಜ್ಞೆ!

ಚೆಂಗಲ್‌ಪೇಟೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 282 ಜನರಿಗೆ ವಸತಿ ಬಾಂಡ್‌ಗಳು, ಕುಟುಂಬ ಕಾರ್ಡ್‌ಗಳು, ಮತದಾರರ ಗುರುತಿನ ಚೀಟಿಗಳು, ಜಾತಿ ಪ್ರಮಾಣಪತ್ರಗಳು, ಕಲ್ಯಾಣ ಮಂಡಳಿ ಕಾರ್ಡ್‌ಗಳು, ತರಬೇತಿ ಆದೇಶಗಳು ಮತ್ತು ಬ್ಯಾಂಕ್ ಸಾಲವನ್ನು ಸಿಎಂ ವಿತರಿಸಿದ್ದಾರೆ. ಇಷ್ಟೇ ಅಲ್ಲದೆ, ನಗರಾಭಿವೃದ್ಧಿ ಯೋಜನೆ ಪ್ರಸ್ತಾವನೆಗೂ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಜಿಲ್ಲೆಯಲ್ಲಿ ಅಂಗನವಾಡಿ ಹಾಗೂ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಆದೇಶ ಹೊರಡಿಸಿದ್ದಾರೆ.

81 ಮಂದಿಗೆ 3.52 ಕೋಟಿ ರೂ.ವೆಚ್ಚದ ವಸತಿ ಪತ್ರ, ಆರು ಮಂದಿಗೆ ವೃದ್ಧಾಪ್ಯ ಕಲ್ಯಾಣ ಯೋಜನೆ, 21 ಮಂದಿಗೆ ಪಡಿತರ ಚೀಟಿ, 18 ಮಂದಿಗೆ ಮತದಾರರ ಗುರುತಿನ ಚೀಟಿ, ಇರುಳ ಸಮುದಾಯದ 88 ಮಂದಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಮತ್ತು 34 ನರಿಕುರವರ್ ಜನರು ತಮ್ಮ ಅತ್ಯಂತ ಹಿಂದುಳಿದ ವರ್ಗ (MBC) ಪ್ರಮಾಣಪತ್ರಗಳನ್ನು ಪಡೆದಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಹೆಚ್ಚುವರಿಯಾಗಿ, 12 ಜನರು ಮುದ್ರಾ ಯೋಜನೆಯಡಿಯಲ್ಲಿ ತಲಾ ರೂ 1 ಲಕ್ಷ ಸಾಲದ ಮೊತ್ತವನ್ನು ಮತ್ತು ಸಣ್ಣ ವ್ಯಾಪಾರ ಯೋಜನೆಯಡಿಯಲ್ಲಿ 33 ಜನರಿಗೆ ತಲಾ ರೂ 10,000 ಸಾಲದ ಮೊತ್ತವನ್ನು ನೀಡಲಾಗಿದೆ. ಪೂಂಚೇರಿಗೆ ರಸ್ತೆ, ವಿದ್ಯುತ್, ಕುಡಿಯುವ ನೀರು ಮತ್ತು ಇತರ ಅಗತ್ಯ ವಸ್ತುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಸಿಎಂ ಸ್ಟಾಲಿನ್ ಅವರು ಕಾರ್ಯಕ್ರಮದಲ್ಲಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?

ಅಶ್ವಿನಿ ಅವರಿಗೆ ಇತ್ತೀಚೆಗೆ ಮಾಮಲ್ಲಪುರಂ ದೇವಸ್ಥಾನದಲ್ಲಿ ಊಟ ನಿರಾಕರಿಸಲಾಗಿತ್ತು. ‘ಅನ್ನದಾನಂ’ ಬಡವರಿಗೆ ಉಚಿತ ದೇವಸ್ಥಾನದ ಊಟವನ್ನು ನೀಡುವ ಯೋಜನೆಯಾಗಿದೆ. ಡಿಎಂಕೆ ಸರ್ಕಾರದ ಮಾನವ ಸಂಪನ್ಮೂಲ ಮತ್ತು ಸಿಇ ಇಲಾಖೆಯಿಂದ ಪ್ರಾರಂಭಿಸಲ್ಪಟ್ಟಿದ್ದು, ಪ್ರಸ್ತುತ ತಮಿಳುನಾಡಿನಾದ್ಯಂತ 754 ಸ್ಥಳಗಳಲ್ಲಿ ಸಕ್ರಿಯವಾಗಿದೆ. ಈ ಯೋಜನೆಯಡಿಯಲ್ಲಿ ತಾರತಮ್ಯ ಎಸಗಲಾಗಿದೆ, ತನಗೆ ಮತ್ತು ತನ್ನ ಸಮುದಾಯದವರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಿಲ್ಲ ಎಂದು ಅಶ್ವಿನಿ ಆರೋಪಿಸಿದ್ದರು. ಅಶ್ವಿನಿ ಪ್ರಶ್ನಿಸಿದ್ದ ಈ ವಿಡಿಯೊ ವೈರಲ್ ಆಗಿತ್ತು.

ಇದು ಸರ್ಕಾರದ ಗಮನಕ್ಕೆ ಬಂದ ನಂತರ, ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಅವರಿಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಕ್ರಾಂತಿಕಾರಿ ನಡೆ ಅನುಸರಿಸಿದ್ದರು.

ಅಕ್ಟೋಬರ್ 29 ರಂದು ಸಚಿವ ಪಿ.ಕೆ ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್ ಬಾಲಾಜಿ ಕೂಡಾ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಇದರ ಜೊತೆಗೆ ಅಶ್ವಿನಿಯವರೊಂದಿಗೆ ಊಟ ನಿರಾಕರಿಸಲ್ಪಟ್ಟ ನರಿಕುರವರ್‌‌ ಸಮುದಾಯದ ಹಲವು ಜನರು ಭಾಗವಹಿಸಿದ್ದರು

ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...